ಬೆಂಗಳೂರು | ಮಹಿಳೆಯ ಮೇಲೆ ಹಿಗ್ಗಾಮುಗ್ಗಾ ಹಲ್ಲೆಗೈದ ಬಿಎಂಟಿಸಿ ಕಂಡಕ್ಟರ್; ವಿಡಿಯೋ ವೈರಲ್

Date:

ಮಹಿಳಾ ಪ್ರಯಾಣಿಕರೋರ್ವರ ಮೇಲೆ ಬಿಎಂಟಿಸಿ ಕಂಡಕ್ಟರ್‌ ಓರ್ವ ಹಿಗ್ಗಾಮುಗ್ಗಾ ಹಲ್ಲೆಗೈದ ಘಟನೆ ಇಂದು (ಮಾ.26) ಬೆಳಗ್ಗೆ ಬೆಂಗಳೂರಿನಲ್ಲಿ ನಡೆದಿದೆ.

ಟಿಕೆಟ್ ವಿಚಾರವಾಗಿ ಮಹಿಳೆ ಪ್ರಶ್ನಿಸಿದ್ದಕ್ಕೆ ಆಕ್ರೋಶಗೊಂಡ ಕಂಡಕ್ಟರ್, ಬಸ್‌ನಲ್ಲಿಯೇ ಹಲ್ಲೆ ಮಾಡಿದ್ದಾನೆ. ಮಹಿಳಾ ಪ್ರಯಾಣಿಕರ ಜೊತೆಗೆ ನಡೆಯುತ್ತಿದ್ದ ವಾಗ್ವಾದವನ್ನು ಬಸ್‌ನಲ್ಲಿದ್ದ ಇನ್ನೋರ್ವ ಪ್ರಯಾಣಿಕರು ಮೊಬೈಲ್‌ನಲ್ಲಿ ಸೆರೆ ಹಿಡಿಯುತ್ತಿದ್ದಾಗಲೇ, ಹಲ್ಲೆಗೈದಿದ್ದಾನೆ.

ಈ ಘಟನೆಯ ವಿಡಿಯೋ ಈಗ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ. ಕಂಡಕ್ಟರ್‌ನಿಂದ ಹಲ್ಲೆಗೊಳಗಾದ ಮಹಿಳೆಯನ್ನು ತಂಝೀನಾ ಇಸ್ಮಾಯೀಲ್ ಎಂದು ಗುರುತಿಸಲಾಗಿದೆ. ಹೊನ್ನಪ್ಪ ಹಲ್ಲೆಗೈದ ಕಂಡಕ್ಟರ್‌ ಎಂದು ತಿಳಿದುಬಂದಿದೆ. ಮಾತಿನ ಚಕಮಕಿಯ ವೇಳೆ ಮಹಿಳೆಯೂ ಕೂಡ ಕಂಡಕ್ಟರ್‌ ಕೆನ್ನೆಗೆ ಬಾರಿಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇವರಿಬ್ಬರ ವಾಗ್ವಾದದ ನಡುವೆ ಸೀಟಿನಲ್ಲಿ ಕುಳಿತಿದ್ದ ಇನ್ನೋರ್ವ ಮಹಿಳೆಯು, ಕಂಡಕ್ಟರ್‌ ಅನ್ನು ತಡೆಯುತ್ತಿರುವ ದೃಶ್ಯ ಕೂಡ ಸೆರೆಯಾಗಿದೆ.

ಬಿಎಂಟಿಸಿಯ ಡಿಪೋ ಸಂಖ್ಯೆ 34ಕ್ಕೆ ಸೇರಿದ KA 57 F 1602 ಬಸ್‌ನಲ್ಲಿ ಈ ಘಟನೆ ನಡೆದಿದೆ. ಇಂದು ಬೆಳಗ್ಗೆ 10 ಗಂಟೆಗೆ ಬಿಳೇಕಲ್ಲಹಳ್ಳಿ-ಶಿವಾಜಿ ನಗರ ರೂಟ್‌ನಲ್ಲಿ ಈ ಕೃತ್ಯ ನಡೆದಿರುವುದಾಗಿ ತಿಳಿದುಬಂದಿದೆ. ಈ ಘಟನೆಯ ಸಂಬಂಧ 28 ಸೆಕೆಂಡ್‌ನ ವಿಡಿಯೋ ಆಧರಿಸಿ, ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. 

ಈ ಬಗ್ಗೆ ಈದಿನ.ಕಾಮ್ ಸಿದ್ದಾಪುರ ಪೊಲೀಸ್ ಠಾಣೆಯನ್ನು ಸಂಪರ್ಕಿಸಿದಾಗ, “ಬಿಳೇಕಲ್ಲಹಳ್ಳಿ-ಶಿವಾಜಿ ನಗರ ರೂಟ್‌ನ ಬಿಎಂಟಿಸಿ ಬಸ್‌ನಲ್ಲಿ ಟಿಕೆಟ್ ವಿಚಾರಕ್ಕೆ ಬಸ್‌ನಲ್ಲಿದ್ದ ಪ್ರಯಾಣಿಸುತ್ತಿದ್ದ ಮಹಿಳೆ ಹಾಗೂ ಕಂಡಕ್ಟರ್‌ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ಕಂಡಕ್ಟರ್ ಹಲ್ಲೆ ಮಾಡಿರುವುದಾಗಿ ಹಲ್ಲೆಗೊಳಗಾದ ಮಹಿಳೆ ತಂಝೀನಾ ಇಸ್ಮಾಯೀಲ್ ಎಂಬುವವರು ನಮ್ಮ ಠಾಣೆಯಲ್ಲಿ ದೂರು ನೀಡಿದ್ದಾರೆ. ಘಟನೆಯನ್ನು ಇನ್ನೋರ್ವ ಪ್ರಯಾಣಿಕರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಈ ಸಂಬಂಧ ಬಿಎಂಟಿಸಿ ಅಧಿಕಾರಿಗಳನ್ನು ಈಗಾಗಲೇ ಸಂಪರ್ಕಿಸಿದ್ದು, ಕಂಡಕ್ಟರ್‌ನ ವಿವರಗಳನ್ನು ಕಲೆ ಹಾಕುತ್ತಿದ್ದೇವೆ. ಐಪಿಸಿ ಸೆಕ್ಷನ್‌ನ 354 ರ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದು, ತನಿಖೆ ನಡೆಸುತ್ತಿದ್ದೇವೆ. ತಪ್ಪಿತಸ್ಥ ಕಂಡಕ್ಟರ್‌ನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಮಾಹಿತಿ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಮಂಡ್ಯದಿಂದ ಮೈತ್ರಿ ಅಭ್ಯರ್ಥಿಯಾಗಿ ಎಚ್ ಡಿ ಕುಮಾರಸ್ವಾಮಿ ಸ್ಪರ್ಧೆ

ಘಟನೆಯ ಬಗ್ಗೆ ಈ ದಿನ.ಕಾಮ್ ಬಸ್ ಕಂಡಕ್ಟರ್‌ ಹೊನ್ನಪ್ಪ ಅವರನ್ನು ಸಂಪರ್ಕಿಸಿತು. ಈ ವೇಳೆ ಮಾತನಾಡಿದ ಅವರು, “ಮಹಿಳೆಯು ಬಿಳೇಕಲ್ಲ ಹಳ್ಳಿಯಲ್ಲಿ ಹತ್ತಿದ್ದರು. ಗುರಪ್ಪನ ಪಾಳ್ಯ ಬಂದಾಗ ನಾನು ಟಿಕೆಟ್‌ಗಳನ್ನು ಪರಿಶೀಲನೆ ನಡೆಸಿದೆ. ಆಗ ಮಹಿಳೆ ಟಿಕೆಟ್ ತೆಗೆದಿರಲಿಲ್ಲ ಎಂಬುದು ನನ್ನ ಗಮನಕ್ಕೆ ಬಂತು. ಈ ಬಗ್ಗೆ ನಾನು ಕೇಳಿದಾಗ, ನನ್ನೊಂದಿಗೆ ವಾಗ್ವಾದ ನಡೆಸಿದರು. ಮೊದಲಿಗೆ ಅವರೇ ನನ್ನ ಮೇಲೆ ಹಲ್ಲೆ ನಡೆಸಿದ್ದು. ಎಲ್ಲ ದೃಶ್ಯವು ಬಸ್‌ನಲ್ಲಿ ಅಳವಡಿಸಿರುವ ಸಿಸಿಟಿವಿಯಲ್ಲಿ ದಾಖಲಾಗಿದೆ” ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...