ಮೆಟ್ರೋದಲ್ಲಿ ‘ಅಮ್ಮ’ ಎಂದು ಕಿರುಚಿದ ‘ರೀಲ್ ಸ್ಟಾರ್’: ‘ಅಮ್ಮನೊಂದಿಗೆ ಸ್ಟೇಷನ್‌ಗೆ ಬಾ’ ಎಂದ ಪೊಲೀಸರು!

Date:

“ಹಲೋ ಅಮ್ಮಾ, ನಾನು ಮೆಟ್ರೋದಲ್ಲಿ ಬಂದಿದ್ದೀನಿ” ಎಂದು ಇನ್ಸ್ಟಾಗ್ರಾಂನಲ್ಲಿ ರೀಲ್ ಮಾಡುವ ಪ್ರವೃತ್ತಿ ಇಟ್ಟುಕೊಂಡಿದ್ದ ಯುವಕನೋರ್ವನಿಗೆ ಪೊಲೀಸರು, “ಸ್ಟೇಷನ್‌ಗೆ ಅಮ್ಮನೊಂದಿಗೆ ಬಾ” ಎಂದು ಕರೆಸಿಕೊಂಡ ಪ್ರಸಂಗ ಬೆಂಗಳೂರಿನಲ್ಲಿ ಕೆಲ ದಿನಗಳ ಹಿಂದೆ ನಡೆದಿದೆ.

ಬೆಂಗಳೂರು ಮೆಟ್ರೋದಲ್ಲಿ ಅನುಚಿತ ವರ್ತನೆ ಮತ್ತು ಭಯ ಹುಟ್ಟಿಸುವ ವೀಡಿಯೊಗಳನ್ನು ಸೃಷ್ಟಿಸಿದ್ದಕ್ಕಾಗಿ ಇನ್ಸ್ಟಾಗ್ರಾಂನಲ್ಲಿ ರೀಲ್ ಮಾಡುವ ಪ್ರವೃತ್ತಿ ಇಟ್ಟುಕೊಂಡಿದ್ದ ಬೆಂಗಳೂರಿನ ಗೆದ್ದಲಹಳ್ಳಿ ನಿವಾಸಿ, 27 ವರ್ಷದ ಸಂತೋಷ್ ಕುಮಾರ್ ಎಂಬಾತ, ಅಮ್ಮನೊಂದಿಗೆ ಪೊಲೀಸ್ ಠಾಣೆ ಮೆಟ್ಟಿಲೇರಿ ಕ್ಷಮೆಯಾಚಿಸಿದ್ದಾನೆ. ಅಲ್ಲದೇ, ಇನ್ನು ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಅನುಚಿತವಾಗಿ ವರ್ತಿಸುವುದಿಲ್ಲ ಎಂದು ಲಿಖಿತ ರೂಪದಲ್ಲಿ ಮುಚ್ಚಳಿಕೆ ಬರೆದು ಕೊಟ್ಟಿರುವುದಾಗಿ ‘ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ಸಂತೋಷ್ ಕುಮಾರ್ ಎಂಬಾತ ಇನ್ಸ್ಟಾಗ್ರಾಂನಲ್ಲಿ @Yash Gowda 0721 ಎಂಬ ಖಾತೆ ಹೊಂದಿದ್ದು, 1.62 ಲಕ್ಷ ಫಾಲೋವರ್ಸ್‌ಗಳನ್ನು ಹೊಂದಿದ್ದಾನೆ. ಈತ ಎಸೆಸೆಲ್ಸಿವೆರೆಗೂ ವಿದ್ಯಾಭ್ಯಾಸ ಮಾಡಿದ್ದು, ನಿರುದ್ಯೋಗಿಯಾಗಿದ್ದ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತೀಚೆಗೆ ಮೆಟ್ರೋದಲ್ಲಿ ಪ್ರಯಾಣಿಸಿದ್ದ ಈತ, ವಿಡಿಯೋವೊಂದನ್ನು ಮಾಡಿ ಅದರಲ್ಲಿ, ‘ಹಲೋ ಅಮ್ಮಾ, ನಾನು ಮೆಟ್ರೋದಲ್ಲಿ ಬಂದಿದ್ದೀನಿ’ ಎಂದು ಬೊಬ್ಬೆ ಹೊಡೆದಿದ್ದಲ್ಲದೇ, ಸಮೀಪದಲ್ಲೇ ನಿಂತಿದ್ದ ಸಹ ಪ್ರಯಾಣಿಕರನ್ನು ಬೆಚ್ಚಿ ಬೀಳಿಸಿದ್ದಾನೆ. ಬಳಿಕ ಆ ವಿಡಿಯೋವನ್ನು ರೀಲ್ಸ್‌ ಮಾಡಿ ಹಂಚಿಕೊಂಡಿದ್ದಾನೆ. ಇದು ವೈರಲಾಗಿದೆ. ಇದು ಮೆಟ್ರೋ ಅಧಿಕಾರಿಗಳ ಗಮನಕ್ಕೂ ಬಂದಿದೆ.

ಈ ವಿಡಿಯೋದಲ್ಲಿ ಯುವಕನ ವಿವರಗಳು ಇಲ್ಲದ್ದರಿಂದ ಆತನ ಚಟುವಟಿಕೆಗಳ ಮೇಲೆ ಮೆಟ್ರೋ ಅಧಿಕಾರಿಗಳು ನಿಗಾ ಇರಿಸಿದ್ದರು. ಈ ನಡುವೆ ಬೈಕೊಂದರಲ್ಲಿ ಸವಾರಿ ಮಾಡುತ್ತಿರುವ ವಿಡಿಯೋವೊಂದನ್ನು ಗಮನಿಸಿದ ಅಧಿಕಾರಿಗಳು, ವಾಹನದ ಸಂಖ್ಯೆಯನ್ನು ಸೆರೆಹಿಡಿದು ಸಂತೋಷ್‌ನ ವಿಳಾಸದ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಆ ಬಳಿಕ ಕಳೆದ ಶುಕ್ರವಾರ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.

ಆರಂಭದಲ್ಲಿ ದೂರು ಸ್ವೀಕರಿಸಲು ಹಿಂದೇಟು ಹಾಕಿದ್ದ ಪೊಲೀಸರು, ಮೆಟ್ರೋ ಭದ್ರತಾ ಅಧಿಕಾರಿ ಪುಟ್ಟ ಮಾದಯ್ಯ ತನಿಖೆಗೆ ಒತ್ತಾಯಿಸಿದ ಬಳಿಕ ಕ್ರಮ ಕೈಗೊಂಡಿದ್ದಾರೆ. ಬಳಿಕ ಪೊಲೀಸರು ಸಂತೋಷ್ ಕುಮಾರ್ ಅವರನ್ನು ತನ್ನ ತಾಯಿಯೊಂದಿಗೆ ಬರುವಂತೆ ಸೂಚಿಸಿದ್ದರಿಂದ ಕಳೆದ ಶನಿವಾರ ಠಾಣೆಗೆ ತೆರಳಿದ್ದಾರೆ. ಇನ್ನು ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಈ ರೀತಿ ಅಸಭ್ಯವಾಗಿ ನಡೆದುಕೊಳ್ಳದಂತೆ ಎಚ್ಚರಿಕೆ ನೀಡಿದ್ದಲ್ಲದೇ, ಲಿಖಿತ ರೂಪದಲ್ಲಿ ಕ್ಷಮಾಪಣಾ ಪತ್ರವನ್ನು ಉಪ್ಪಾರಪೇಟೆ ಪೊಲೀಸರು ಬರೆಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಮೆಟ್ರೋ ಕಾಯಿದೆಯ ಸೆಕ್ಷನ್ 59(1) ರ ಅಡಿಯಲ್ಲಿ, ಸಂತೋಷ್ ಕುಮಾರ್ ವಿರುದ್ಧ ಮೆಟ್ರೋ ರೈಲಿನೊಳಗೆ ಅನುಚಿತ ವರ್ತನೆಗಾಗಿ ಪ್ರಕರಣ ದಾಖಲಿಸಲಾಗಿತ್ತು. 500 ರೂಪಾಯಿ ದಂಡ ಕಟ್ಟಿದ ನಂತರ, ಮೆಟ್ರೋ ಅಧಿಕಾರಿಗಳು ಎಚ್ಚರಿಕೆ ನೀಡಿ, ಕಳುಹಿಸಿದ್ದಾರೆ. ಇದಲ್ಲದೆ, ಬೆಂಗಳೂರು ಮೆಟ್ರೋಗೆ ಸಂಬಂಧಿಸಿದ ಎಲ್ಲಾ ಪೋಸ್ಟ್‌ಗಳನ್ನು ತೆಗೆದುಹಾಕಲು ಸೂಚನೆ ನೀಡಿದ್ದು, ಅದಕ್ಕೆ ‘ರೀಲ್ ಸ್ಟಾರ್’ ಒಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...