ಬೆಂಗಳೂರು | ಪಟಾಕಿ ಅವಘಡದಿಂದ 190ಕ್ಕೂ ಅಧಿಕ ಮಂದಿಗೆ ಗಾಯ, ದೃಷ್ಟಿ ಕಳೆದುಕೊಂಡ 8 ಮಂದಿ

Date:

ದೀಪಾವಳಿ ಹಬ್ಬದ ಪ್ರಯುಕ್ತ ಕಳೆದ ಮೂರು ದಿನಗಳಿಂದ ಪಟಾಕಿ ಸಿಡಿತದಿಂದ ಬೆಂಗಳೂರಿನಲ್ಲಿ ಗಾಯಗೊಂಡವರ ಸಂಖ್ಯೆ 190ಕ್ಕೂ ಹೆಚ್ಚು ಏರಿಕೆಯಾಗಿದ್ದು, ಇದರಲ್ಲಿ 9 ಮಂದಿ ಶಾಶ್ವತವಾಗಿ ದೃಷ್ಟಿ ಕಳೆದುಕೊಂಡಿದ್ದಾರೆ. ನಗರದ ಕಣ್ಣಿನ ಆಸ್ಪತ್ರೆಗಳು ಈ ಆತಂಕಕಾರಿ ಸಂಖ್ಯೆಯನ್ನು ದಾಖಲಿಸುತ್ತಿದ್ದಂತೆ, ಇದರಲ್ಲಿ ಮಕ್ಕಳೇ ಹೆಚ್ಚಾಗಿ ತೊಂದೆರೆಗೀಡಾಗಿದ್ದಾರೆ.

ನಾರಾಯಣ ನೇತ್ರಾಲಯದಲ್ಲಿ ಒಟ್ಟು 76 ಪ್ರಕರಣಗಳು ದಾಖಲಾಗಿವೆ, ಇದರಲ್ಲಿ 36 ಮಕ್ಕಳು ಸೇರಿದ್ದಾರೆ. ಮಿಂಟೋ ನೇತ್ರಾಲಯದಲ್ಲಿ 60ಕ್ಕೂ ಹೆಚ್ಚು ಗಾಯಾಳುಗಳು ಚಿಕಿತ್ಸೆ ಪಡೆದಿದ್ದು, ಸಂಕರಾ ಐ ಹಾಸ್ಪಿಟಲ್‌ನಲ್ಲಿ 18 ಪ್ರಕರಣಗಳಲ್ಲಿ 14 ಮಕ್ಕಳು ಗಾಯಗೊಂಡಿದ್ದಾರೆ. 144ಕ್ಕೂ ಹೆಚ್ಚು ಕಣ್ಣಿನ ಗಾಯಗಳು ದಾಖಲಾಗಿದ್ದು, 13 ಮಂದಿಗೆ ಶಸ್ತ್ರಚಿಕಿತ್ಸೆ ಅಗತ್ಯವಾಗಿದೆ. ನಿಂತು ನೋಡುವವರು, ದಾರಿಹೋಕರ ಕಣ್ಣಿಗೆ ಗಂಭೀರವಾದ ಗಾಯಗಳಾಗಿವೆ.

ಪಟಾಕಿ ಸಿಡಿಸುವಾಗ ರಕ್ಷಣಾತ್ಮಕ ಕನ್ನಡಕಗಳು ಕಡ್ಡಾಯವಾಗಿರಬೇಕು. ಸುರಕ್ಷಿತ ಅಂತರ (ಕನಿಷ್ಠ 10-15 ಅಡಿ) ಕಾಪಾಡಿಕೊಳ್ಳಿ. ಮಕ್ಕಳಿಗೆ ಪೋಷಕರು ನಿಗಾ ವಹಿಸಿ, ತೀವ್ರ ಶಬ್ದದ ಪಟಾಕಿಗಳ ಬದಲು ಬೆಳಕು ಪಟಾಕಿಗಳನ್ನು ಬಳಸಿ. ಮನೆಯಲ್ಲಿ ತಯಾರಿಸಿದ ಪಟಾಕಿಗಳು ಗುಣಮಟ್ಟರಹಿತವಾಗಿರುವುದರಿಂದ ಅನಿರೀಕ್ಷಿತ ಸ್ಫೋಟಕ್ಕೆ ಕಾರಣವಾಗುತ್ತವೆ – ಅಂತಹವುಗಳನ್ನು ತಪ್ಪಿಸಿ. ಕಣ್ಣಿನ ಸಮಸ್ಯೆ ಅಥವಾ ಅಲರ್ಜಿ ಇರುವವರು ಹೊಗೆಯಿಂದ ದೂರವಿರಿ. ಪರಿಸರ ಸ್ನೇಹಿ ಪಟಾಕಿಗಳನ್ನು ಆಯ್ಕೆ ಮಾಡಿಕೊಳ್ಳಿ.ಗಾಯವಾದ ಸಂದರ್ಭದಲ್ಲಿ ಕಣ್ಣನ್ನು ಉಜ್ಜಬೇಡಿ, ನೀರು ಸೇರಿಸಬೇಡಿ ಅಥವಾ ಕೈಹಿಡಿಯಬೇಡಿ. ತಕ್ಷಣ ಹತ್ತಿರದ ಕಣ್ಣು ತಜ್ಞರ ಬಳಿ ಧಾವಿಸಿ ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ |ಕಾರ್ಮಿಕರ ಹೊಟ್ಟೆ ಮೇಲೆ ಮತ್ತೆ ಮೋದಿ ಹೊಡೆತ – ಕಡುಕಠಿಣ ಪಿಎಫ್ ಹಿಂಪಡೆತ

ಪಟಾಕಿ ಹೊಗೆಯಿಂದ ಬೆಂಗಳೂರು ವಾಯು ಗುಣಮಟ್ಟ ಹದಗೆಟ್ಟಿದ್ದು, ಕಾಡುಬೀಸನಹಳ್ಳಿಯಲ್ಲಿ AQI 140 (ಹಾನಿಕಾರಕ), ಮೆಜೆಸ್ಟಿಕ್ 116, BTM ಲೇಔಟ್ 90 ದಾಖಲಾಗಿದೆ. ಬಾಪೂಜಿ ನಗರ 88, ಜಯನಗರ 80 ಆಗಿದ್ದು, ಹೆಬ್ಬಾಳಲ್ಲಿ 79 ದಾಖಲಾಗಿದೆ. ಉಸಿರಾಟ ಸಮಸ್ಯೆ ಇರುವವರು ಮನೆಯಲ್ಲಿ ಉಳಿಯಿರಿ ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ಎಚ್ಚರಿಸಿದೆ.

ಪಟಾಕಿ ಸಿಡಿತದಿಂದ ಹೊರಬರುವ ಮಾಲಿನ್ಯದ ಕಣಗಳು ವಾತಾವರಣದಲ್ಲಿ ದೀರ್ಘಕಾಲ ಉಳಿದು ಉಸಿರಾಟದ ಸಮಸ್ಯೆಗಳಿಗೆ ಕಾರಣವಾಗುತ್ತವೆ. ಹೀಗಾಗಿ ಮುಂದಿನ ದೀಪಾವಳಿಗಳಲ್ಲಿ ಸಾರ್ವಜನಿಕರು ಮಾಲಿನ್ಯರಹಿತ ಆಚರಣೆಗಾಗಿ ಒತ್ತು ನೀಡಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...