ಸ್ವಾಮಿ ವಿವೇಕಾನಂದ ಅವರ 163ನೇ ಜನ್ಮದಿನದ ಅಂಗವಾಗಿ ಕರ್ನಾಟಕ ರಾಜ್ಯ ಅಂಧರ ಕ್ಷಮಾಭಿವೃದ್ಧಿ ಶಾಲೆಯಲ್ಲಿ ರಾಷ್ಟ್ರೀಯ ಯುವಜನರ ದಿನಾಚರಣೆ ಹಾಗೂ ಎಐಸಿಸಿಯ ಪ್ರಧಾನ ಕಾರ್ಯದರ್ಶಿ, ವೈನಾಡಿನ ಸಂಸದೆ ಪ್ರಿಯಾಂಕಾ ಗಾಂಧಿಯವರ ಜನ್ಮದಿನವನ್ನು ಆಚರಿಸಲಾಯಿತು.
ಈ ವೇಳೆ, ʼಸ್ವಾಮಿ ವಿವೇಕಾನಂದರ ಆದರ್ಶನವನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳೋಣ. ಪ್ರಸ್ತುತ ಯುವಪೀಳಿಗೆ ಅವರ ತತ್ವ ಸಿದ್ಧಾಂತಕ್ಕೆ ಬದ್ಧರಾಗಿ ದೇಶದ ಅಭಿವೃದ್ಧಿಗೆ ಶ್ರಮಿಸಲು ಎಲ್ಲರೂ ಒಗ್ಗಟ್ಟಿನಿಂದ ದುಡಿಯಬೇಕು. ಜಾತ್ಯತೀತ ಭಾರತ ನಿರ್ಮಾಣಕ್ಕೆ ಸ್ವಾಮಿ ವಿವೇಕಾನಂದರು ನೀಡಿದ ಮಾರ್ಗದರ್ಶನದಲ್ಲಿ ನಾವೆಲ್ಲರೂ ಸಾಗೋಣʼ ಎಂದು ಘೋಷಣೆಗಳ ಮೂಲಕ ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ಆಚರಿಸಲಾಯಿತು.
ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ರಾಷ್ಟ್ರೀಯ ಯುವ ದಿನಾಚರಣೆಯನ್ನಾಗಿ ಆಚರಿಸಲು ಅಂದಿನ ಮಾಜಿ ಪ್ರಧಾನಮಂತ್ರಿ ಭಾರತ ರತ್ನ, ದೇಶಪ್ರೇಮಿ ರಾಜೀವ್ ಗಾಂಧಿಯವರು, ʼಸ್ವಾಮಿ ವಿವೇಕಾನಂದರ ತತ್ವ ಸಿದ್ಧಾಂತದ ಅಡಿಯಲ್ಲಿ ಭಾರತದ ನಿರ್ಮಾಣಕ್ಕೆ ಎಲ್ಲರೂ ಪಣತೊಡಬೇಕುʼ ಎಂದು ಈ ದಿನವನ್ನು ʼರಾಷ್ಟ್ರೀಯ ಯುವ ದಿನಾಚರಣೆʼ ಎಂದು ಘೋಷಣೆ ಮಾಡುವುದರ ಮೂಲಕ ಅವರು ಈ ದಿನವನ್ನು ರಾಷ್ಟ್ರೀಯ ಯುವಜನ ದಿನಾಚರಣೆಯನ್ನಾಗಿ ಘೋಷಿಸಿದರು.
“ಎಐಸಿಸಿಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಯವರು ದೇಶದ ಏಳಿಗೆಗಾಗಿ ಜಾತ್ಯತೀತ ರಾಷ್ಟ್ರದ ನಿರ್ಮಾಣಕ್ಕಾಗಿ ಮತದಾರರಾಗಿ ತನ್ನ ಗಟ್ಟಿಧ್ವನಿಯನ್ನು ಸಂಸತ್ತಿನಲ್ಲಿ ಮೊಳಗಿಸುವುದರ ಮೂಲಕ ಇಂದಿರಾಗಾಂಧಿ ಅವರಂತೆಯೇ ಇವರೂ ಕೂಡ ದೇಶದ ಜನರ ಸೇವೆಗೆ ಪಣತೊಟ್ಟಿದ್ದಾರೆ. ಪ್ರಿಯಾಂಕಾ ಗಾಂಧಿ ಅವರಿಗೆ ಹೆಚ್ಚಿನ ಶಕ್ತಿ ದೊರೆಯಲಿ” ಎಂದು ಈ ಸಂದರ್ಭದಲ್ಲಿ ಅಂಧಮಕ್ಕಳು, ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಶುಭಾಷಯಗಳನ್ನು ಕೋರಿದರು.
ಈ ಸುದ್ದಿ ಓದಿದ್ದೀರಾ? ಮೈಸೂರು | ಅಂಬೇಡ್ಕರ್ ಕೊಟ್ಟ ಸಂವಿಧಾನದಿಂದ ದೇಶ ಸದೃಢ: ಸಚಿವ ಶಿವರಾಜ್ ತಂಗಡಗಿ
ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಎಂಇಐ ಅಧ್ಯಕ್ಷ ಎಸ್ ಮನೋಹರ್, ಕಾಂಗ್ರೆಸ್ ಪಕ್ಷದ ಮುಖಂಡರಾದ ಎ ಆನಂದ, ಜಿ ಪ್ರಕಾಶ್, ಸುಧಾಕರ್ ರಾವ್, ಚಂದ್ರಶೇಖರ್, ಹೇಮರಾಜು, ಪುಟ್ಟರಾಜು, ಸಾಯಿ ನವೀನ್, ಹೋಬಳೇಶ್, ಚಿನ್ನಿ ಪ್ರಕಾಶ್ ಸೇರಿದಂತೆ ಪಕ್ಷದ ಇತರೆ ಮುಖಂಡರು ಇದ್ದರು





