ಕಾವೇರಿ ವಿವಾದ | ತಮಿಳು ನಟ ಸಿದ್ಧಾರ್ಥ್‌ ಕ್ಷಮೆ ಕೇಳಿದ ನಟ ಶಿವರಾಜ್‌ಕುಮಾರ್

Date:

ತಮಿಳು ನಟ ಸಿದ್ಧಾರ್ಥ್‌ ಅವರ ಸುದ್ದಿಗೋಷ್ಠಿಗೆ ಬೆಂಗಳೂರಿನಲ್ಲಿ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಅಡ್ಡಿ ಪಡಿಸಿದ್ದನ್ನು ನಟ ಶಿವರಾಜ್‌ಕುಮಾರ್ ಖಂಡಿಸಿದ್ದಾರೆ. ಘಟನೆ ಸಂಬಂಧ ನಟ ಸಿದ್ಧಾರ್ಥ್‌ ಬಳಿ ಕ್ಷಮೆ ಕೇಳಿದ್ದಾರೆ.

ಕರ್ನಾಟಕ ಬಂದ್‌ ಹಿನ್ನೆಲೆ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಶಿವರಾಜ್‌ಕುಮಾರ್ ಭಾಗವಹಿಸಿ ಮಾತನಾಡಿದರು. “ಕಾವೇರಿ ಸಮಸ್ಯೆ ಈ ಹಿಂದೆ ಇಂದಲೂ ಇದೆ. ಇದಕ್ಕೆ ಒಬ್ಬರು ಮತ್ತೊಬ್ಬರನ್ನು ದೂರುವುದರಿಂದ ಪರಿಹಾರ ಸಿಗುವುದಿಲ್ಲ. ಎರಡೂ ರಾಜ್ಯದವರೂ ಕೂತು ಸಮಸ್ಯೆ ಬಗೆಹರಿಸಲು ಮಾರ್ಗಗಳನ್ನು ರೂಪಿಸಬೇಕು. ಶಾಸ್ವತ ಪರಿಹಾರ ಕಂಡುಕೊಳ್ಳಬೇಕು” ಎಂದರು.

“ಕಾವೇರಿ ತಾಯಿಗೂ ನೋವಾಗಿದೆ. ಆಕೆ ಇಲ್ಲಿಯೂ ಇರಬೇಕು, ಅಲ್ಲಿಯೂ ಹೋಗಬೇಕು. ನೀರಿಲ್ಲ ಅಂದ್ರೆ ಅಳಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಮಸ್ಯೆ ಅಂತ ಬಂದಾಗ ಕಲಾವಿದರು ಬರಲ್ಲ ಅಂತೀರಿ. ಸಿನಿಮಾದವರು ಬಂದು 5 ನಿಮಿಷ ಮಾತಾಡಿದ್ರೆ ಸಮಸ್ಯೆ ಬಗೆಹರಿಯುತ್ತಾ? ನಾವು ಮನುಷ್ಯರು. ಪ್ರತಿಭಟನೆಗೆ ಒಬ್ಬ ಕಲಾವಿದ ಭಾಗವಹಿಸಿದರೂ, ಇಡೀ ಚಿತ್ರರಂಗವೇ ಭಾಗವಹಿಸಿದಂತೆ ನಾವೆಲ್ಲರೂ ಒಂದೇ. ಅವರು ಬಂದಿಲ್ಲ. ಇವರು ಬಂದಿಲ್ಲ ಅಂತ ದೂರುವುದು ಸರಿಯಲ್ಲ” ಎಂದರು.

“ಬೇರೆ ಭಾಷೆಯ ನಟರು ಸುದ್ದಿಗೋಷ್ಠಿ ನಡೆಸುವಾಗ ಯಾರು ನಿಲ್ಲಿಸಿದ್ದಾರೆ ಅಂತ ಗೊತ್ತಿಲ್ಲ. ಆದರೆ ಆ ರೀತಿ ಮಾಡಿರೋದು ತಪ್ಪು. ಸಮಸ್ಯೆಯನ್ನು ನಾವು ಎದುರಿಸಬೇಕು. ಅದಕ್ಕೆ ಪರಿಹಾರ ಕಂಡುಕೊಳ್ಳಬೇಕು. ಸಿದ್ದಾರ್ಥ್ ಅವರಿಗೆ ನಮ್ಮಿಂದ ಬೇಸರ ಆಗಿದೆ. ಕನ್ನಡ ಚಿತ್ರರಂಗದ ಪರವಾಗಿ ಅವರಿಗೆ ನಾವು ಕ್ಷಮೆ ಕೇಳುತ್ತೇವೆ. ಈ ಘಟನೆಯಿಂದ ನಿಜಕ್ಕೂ ನಮಗೂ ನೋವಾಗಿದೆ” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...