ಗ್ರೇಟರ್ ಬೆಂಗಳೂರು ಚುನಾವಣೆಯಲ್ಲಿ ಬ್ಯಾಲೆಟ್‌ ಪೇಪರ್‌ ಬಳಕೆ: ರಾಜ್ಯ ಚುನಾವಣಾ ಆಯುಕ್ತ

Date:

ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಅಡಿಯಲ್ಲಿ ಹೊಸದಾಗಿ ರಚನೆಯಾಗಿರುವ ಐದು ಮಹಾನಗರ ಪಾಲಿಕೆಗಳ ಚುನಾವಣೆಯಲ್ಲಿ ಎಲೆಕ್ಟ್ರಾನಿಕ್ ವೋಟಿಂಗ್ ಮಷಿನ್ (ಇವಿಎಂ) ಬದಲಿಗೆ ಬ್ಯಾಲೆಟ್ ಪೇಪರ್ ಬಳಸಲಾಗುವುದು ಎಂದು ರಾಜ್ಯ ಚುನಾವಣಾ ಆಯುಕ್ತ ಜಿ ಎಸ್ ಸಂಗ್ರೇಶಿ ಶುಕ್ರವಾರ ತಿಳಿಸಿದ್ದಾರೆ.

ಸ್ಥಳೀಯ ಸಂಸ್ಥೆಗಳ ಎಲ್ಲ ಚುನಾವಣೆಗಳಿಗೂ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಬಳಸಲು ಮತ್ತು ಮತದಾರರ ಪಟ್ಟಿ ಸಿದ್ಧಪಡಿಸುವ ಜವಾಬ್ದಾರಿಯನ್ನು ರಾಜ್ಯ ಚುನಾವಣಾ ಆಯೋಗಕ್ಕೆ (SEC) ವಹಿಸಲು ರಾಜ್ಯ ಸಂಪುಟ ಸಭೆ ಶುಕ್ರವಾರ ನಿರ್ಧರಿಸಿದೆ. ಈ ನಿರ್ಧಾರಕ್ಕೆ ಪ್ರತಿಕ್ರಿಯಿಸಿದ ಸಂಗ್ರೇಶಿ, “ಐದು ಜಿಬಿಎ ಪಾಲಿಕೆಗಳ ಚುನಾವಣೆಗೆ ಎಸ್‌ಇಸಿ ಮತದಾರರ ಪಟ್ಟಿ ಸಿದ್ಧಪಡಿಸಲಿದ್ದು, ಬ್ಯಾಲೆಟ್ ಪೇಪರ್‌ಗಳನ್ನು ಬಳಸಲಿದೆ” ಎಂದು ಸುದ್ದಿಗಾರರಿಗೆ ತಿಳಿಸಿದರು.

2015ರಲ್ಲಿ ಕೊನೆಯ ಬಾರಿಗೆ ನಡೆದಿದ್ದ ಬೆಂಗಳೂರು ಮಹಾನಗರಪಾಲಿಕೆಯ ಚುನಾವಣೆ ಹಲವು ವರ್ಷಗಳಿಂದ ವಿಳಂಬವಾಗಿದೆ. ರದ್ದಾಗಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (BBMP) ಚುನಾವಣೆ 2020ರಲ್ಲಿ ನಡೆಯಬೇಕಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುಪ್ರೀಂ ಕೋರ್ಟ್‌ನ ನಿರ್ದೇಶನದಂತೆ ನವೆಂಬರ್ 1ರೊಳಗೆ ಕ್ಷೇತ್ರಗಳ ಮರುವಿಂಗಡಣೆ ಮತ್ತು ನವೆಂಬರ್ 30ರೊಳಗೆ ವಾರ್ಡ್-ವಾರು ಮೀಸಲಾತಿ ಪಟ್ಟಿ ಪ್ರಕಟಿಸಲು ರಾಜ್ಯ ಸರ್ಕಾರ ಕಾರ್ಯೋನ್ಮುಖವಾಗಿದೆ ಎಂದು ಸಂಗ್ರೇಶಿ ಮಾಹಿತಿ ನೀಡಿದರು.

ಇದಲ್ಲದೆ, 2021ರ ಮೇ-ಜೂನ್‌ನಲ್ಲಿ ನಡೆಯಬೇಕಿದ್ದ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಗಳು ಸಹ ಬಾಕಿ ಉಳಿದಿವೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿಯವರ ತಾಯಿ ಮಾತ್ರ ಹೆಣ್ಣೇ! ಸೋನಿಯಾರನ್ನು ಅವಮಾನಿಸುವುದು ಸರಿಯೇ?

ಬ್ಯಾಲೆಟ್ ಪೇಪರ್ ಬಳಸಿ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ನಡೆಸಲು ಎಸ್‌ಇಸಿ ಸಿದ್ಧವಾಗಿದೆ ಎಂದು ಸಂಗ್ರೇಶಿ ಒತ್ತಿ ಹೇಳಿದರು. ಈ ವಿಷಯವಾಗಿ ಕೇಂದ್ರ ಚುನಾವಣಾ ಆಯೋಗದ ಸಲಹೆ ಪಡೆಯುವ ಅಗತ್ಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. “ಎಸ್‌ಇಸಿ ಒಂದು ಸಂವಿಧಾನಾತ್ಮಕ ಸಂಸ್ಥೆಯಾಗಿದ್ದು, ಕೇಂದ್ರ ಚುನಾವಣಾ ಆಯೋಗದಷ್ಟೇ ಅಧಿಕಾರವನ್ನು ಹೊಂದಿದೆ” ಎಂದು ಅವರು ಹೇಳಿದರು.

“ನಮ್ಮಲ್ಲಿರುವ ಇವಿಎಂಗಳು 15 ವರ್ಷಗಳಷ್ಟು ಹಳೆಯದಾಗಿವೆ. ಅವುಗಳನ್ನು ವಿಲೇವಾರಿ ಮಾಡಲು ಕೇಂದ್ರ ಚುನಾವಣಾ ಆಯೋಗ ಸೂಚಿಸಿದೆ. ಈ ಪ್ರಕ್ರಿಯೆಯ ಬಗ್ಗೆ ಭಾರತ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಜೊತೆ ಚರ್ಚಿಸಲು ನಾವು ಆಂತರಿಕ ತಜ್ಞರ ಸಮಿತಿಯನ್ನು ರಚಿಸುತ್ತಿದ್ದೇವೆ” ಎಂದು ಸಂಗ್ರೇಶಿ ತಿಳಿಸಿದರು.

ಬ್ಯಾಲೆಟ್ ಪೇಪರ್‌ಗೆ ಬದಲಾಯಿಸುವುದು ಸವಾಲಾಗಬಾರದು ಎಂದು ಸಂಗ್ರೇಶಿ ಅಭಿಪ್ರಾಯಪಟ್ಟರು. “ಗ್ರಾಮ ಪಂಚಾಯತಿ ಚುನಾವಣೆಗಳಲ್ಲಿ ಇನ್ನೂ ಬ್ಯಾಲೆಟ್ ಪೇಪರ್‌ಗಳನ್ನೇ ಬಳಸಲಾಗುತ್ತಿದೆ. ಗ್ರಾಮೀಣ ಪ್ರದೇಶದ ಮತದಾರರಿಗೆ ಬ್ಯಾಲೆಟ್ ಪೇಪರ್‌ಗಳ ಬಗ್ಗೆ ಈಗಾಗಲೇ ಅರಿವಿದೆ. ಬ್ಯಾಲೆಟ್ ಪೇಪರ್‌ಗೆ ಬದಲಾಗುವುದರಲ್ಲಿ ಯಾವುದೇ ತಪ್ಪಿಲ್ಲ. ಇದು ಅಸಾಂವಿಧಾನಿಕವಲ್ಲ” ಎಂದು ಅವರು ಹೇಳಿದರು.

ಮತದಾರರ ಪಟ್ಟಿಯನ್ನು “ಪಾರದರ್ಶಕ ಮತ್ತು ವಿಶ್ವಾಸಾರ್ಹ ರೀತಿಯಲ್ಲಿ” ಸಿದ್ಧಪಡಿಸಲಾಗುವುದು ಎಂದು ಸಂಗ್ರೇಶಿ ಭರವಸೆ ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...