ಗಲೀಜು ಬಟ್ಟೆ ಕಾರಣಕ್ಕೆ ರೈತನನ್ನು ಮೆಟ್ರೋಗೆ ಹತ್ತಲು ಬಿಡದ ಸಿಬ್ಬಂದಿ: ವಿಡಿಯೋ ವೈರಲ್ ಬಳಿಕ ಸೇವೆಯಿಂದ ವಜಾ

Date:

ಮೂಟೆ ಹೊತ್ತುಕೊಂಡು ರೈತನೋರ್ವ ಮೆಟ್ರೋ ರೈಲಿಗೆ ಹತ್ತುವಾಗ ಮೆಟ್ರೋ ಸಿಬ್ಬಂದಿ ಗಲೀಜು ಬಟ್ಟೆ ಹಾಕಿದ್ದಾನೆ ಎಂದು ಅವರನ್ನು ಒಳಗೆ ಬಿಡದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇದೀಗ ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ಎಚ್ಚೆತ್ತುಕೊಂಡ ಅಧಿಕಾರಿಗಳು, ಸಿಬ್ಬಂದಿಯನ್ನು ಸೇವೆಯಿಂದಲೇ ವಜಾಗೊಳಿಸಿದ್ದಾರೆ.

ತಲೆ ಮೇಲೆ ಮೂಟೆ ಹೊತ್ತು, ಗಲೀಜು ಬಟ್ಟೆ ಹಾಕಿದ್ದಾನೆ ಅನ್ನುವ ಒಂದೇ ಕಾರಣಕ್ಕೆ ರೈತನನ್ನು ನಮ್ಮ ಮೆಟ್ರೋ ಸಿಬ್ಬಂದಿ ಒಳಗೆ ಬಿಟ್ಟಿರಲಿಲ್ಲ. ರಾಜಾಜಿನಗರದ ಮೆಟ್ರೋ ನಿಲ್ದಾಣದಲ್ಲಿ ಫೆ.24ರಂದು ಈ ಘಟನೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿಂದಿ ಭಾಷೆಯನ್ನಾಡುವ ರೈತನೊಬ್ಬ ಬೆಂಗಳೂರಿನ ರಾಜಾಜಿನಗರದ ಮೆಟ್ರೋ ನಿಲ್ದಾಣದಲ್ಲಿ ಟಿಕೆಟ್ ಪಡೆದು ಮೆಟ್ರೋದಲ್ಲಿ ಪ್ರಯಾಣಿಸಲು ಮುಂದಾಗಿದ್ದಾರೆ. ಈ ವೇಳೆ ಲಗೇಜ್ ಪರಿಶೀಲನೆ ಮಾಡುವ ಸಿಬ್ಬಂದಿ ರೈತನನ್ನು ತಡೆದಿದ್ದಾರೆ. ಗಲೀಜು ಬಟ್ಟೆ ಹಾಕಿದ್ದೀರಾ, ತಲೆ ಮೇಲೆ ಮೂಟೆ ಇದೆ ಎಂದು ಹೇಳಿ ರೈತನನ್ನ ಮೆಟ್ರೋದಲ್ಲಿ ಪ್ರಯಾಣಿಸಲು ಅನುಮತಿ ಕೊಟ್ಟಿಲ್ಲ ಎನ್ನುವ ವಿಡಿಯೋ ವೈರಲ್ ಆಗಿದೆ.

ಸಿಬ್ಬಂದಿಯ ಈ ನಡೆಗೆ ಭಾರೀ ಆಕ್ರೋಶ ವ್ಯಕ್ತಪಡಿಸಿದ ಸ್ಥಳದಲ್ಲಿದ್ದ ಕಾರ್ತಿಕ್ ಸಿ ಐರಾನಿ ಎಂಬ ಯುವಕ, ಇದನ್ನು ಪ್ರಶ್ನಿಸಿದ್ದಾನೆ.

“ಗಲೀಜು ಬಟ್ಟೆಗೆ ಹಾಕಿದರೆ ಮೆಟ್ರೋದಲ್ಲಿ ಪ್ರವೇಶಿಸುವಂತಿಲ್ಲ ಏನಾದರೂ ಬೋರ್ಡ್‌ ಇದೆಯೇ?ಇದು ಸಾರ್ವಜನಿಕ ಸಾರಿಗೆ. ಇದು ವಿಐಪಿಗಳ ಸಾರಿಗೆ ಅಲ್ಲ. ನಾನು ಚೆನ್ನಾಗಿರುವ ಬಟ್ಟೆ ಹಾಕಿದ್ದೇನೆ. ನನಗೆ ಉಚಿತ ಪ್ರವೇಶ ನೀಡುತ್ತೀರಾ?” ಎಂದು ಕಾರ್ತಿಕ್ ಸ್ಥಳದಲ್ಲಿದ್ದ ಸಿಬ್ಬಂದಿಯನ್ನು ಪ್ರಶ್ನಿಸಿದ್ದಾರೆ.

ಈ ವೇಳೆ ಅಲ್ಲೇ ಇದ್ದ ಇನ್ನೋರ್ವ ಯುವಕ ಕೂಡ ಧ್ವನಿಗೂಡಿಸಿದ್ದರಿಂದ ಸಿಬ್ಬಂದಿ ಮೌನವಾಗಿದ್ದಾರೆ. ಕೊನೆಗೂ ಯುವಕ ಕಾರ್ತಿಕ್ ಆ ರೈತನನ್ನು ಕರೆದುಕೊಂಡು ಒಳಪ್ರವೇಶಿಸಿದ್ದಾರೆ. ಘಟನೆಯ ಎಲ್ಲವನ್ನೂ ತನ್ನ ಮೊಬೈಲ್‌ನಲ್ಲಿ ರೆಕಾರ್ಡ್‌ ಮಾಡಿಕೊಂಡಿದ್ದರು. ಆ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡು, ಮೆಟ್ರೋ ಸಿಬ್ಬಂದಿಗಳ ವರ್ತನೆಗೆ ಕಿಡಿಕಾರಿದ್ದರು. ರೈತ ರಾಜಾಜಿನಗರದಿಂದ ಯಾವ ಸ್ಟೇಷನ್‌ಗೆ ಪ್ರಯಾಣಿಸುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿಲ್ಲ.

ಈ ವಿಡಿಯೋ ವೈರಲಾದ ಬಳಿಕ ಎಚ್ಚೆತ್ತುಕೊಂಡ ಬಿಎಂಆರ್‌ಸಿಎಲ್ ಅಧಿಕಾರಿಗಳು, “ನಮ್ಮ ಮೆಟ್ರೋ ಸಾರ್ವಜನಿಕ ಸಾರಿಗೆಯಾಗಿದ್ದು, ರಾಜಾಜಿನಗರ ಘಟನೆಯ ಕುರಿತು ತನಿಖೆ ನಡೆಸಿ , ಭದ್ರತಾ ಮೇಲ್ವಿಚಾರಕರ ಸೇವೆಯನ್ನು ವಜಾಗೊಳಿಸಲಾಗಿದೆ. ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗಾಗಿ ನಿಗಮವು ವಿಷಾದಿಸುತ್ತದೆ” ಎಂದು ಸೋಮವಾರ(ಫೆ.26) ಅಧಿಕೃತ ಹೇಳಿಕೆ ನೀಡಿದೆ.

“ಮೆಟ್ರೋ ಒಳಗೆ ರೈತನನ್ನು ಬಿಡದ ಭದ್ರತಾ ಮೇಲ್ವಿಚಾರಕನನ್ನು ಕೂಡಲೇ ವಜಾಗೊಳಿಸಲಾಗಿದೆ. ಈ ಘಟನೆಯ ಕುರಿತು ತನಿಖೆ ನಡೆಸಲಾಗುವುದು” ಎಂದು ಮೆಟ್ರೋ ಹಿರಿಯ ಅಧಿಕಾರಿ ಯಶವಂತ ಚವ್ಹಾಣ್ ಭರವಸೆ ನೀಡಿದ್ದಾರೆ.

ಯುವಕ ಕಾರ್ತಿಕ್ ನಡೆಗೆ ವ್ಯಾಪಕ ಪ್ರಶಂಸೆ

ಸಿಬ್ಬಂದಿಗಳ ಈ ನಡೆಯ ವಿರುದ್ಧ ರಾಜಾಜಿನಗರದ ಮೆಟ್ರೋ ನಿಲ್ದಾಣದಲ್ಲೇ ಸುಮಾರು 15 ನಿಮಿಷ ನಿಂತು ಪ್ರಶ್ನಿಸಿ, ರೈತನನ್ನು ಮೆಟ್ರೋದಲ್ಲಿ ಪ್ರಯಾಣ ಮಾಡುವಂತೆ ನೆರವಾದ ಯುವಕ ಕಾರ್ತಿಕ್ ನಡೆಗೆ, ನೆಟ್ಟಿಗರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ಈ ಬಗ್ಗೆ ಹಲವು ಮಂದಿ ಕಮೆಂಟ್ ಮಾಡಿದ್ದು, ತನ್ನೆದುರು ನಡೆದ ಅನ್ಯಾಯವನ್ನು ಪ್ರಶ್ನಿಸಿ, “ರೈತನ ಪರವಾಗಿ ನಿಂತಿದ್ದು ಸರಿಯಾದ ನಡೆ. ಸಾರ್ವಜನಿಕ ಸಾರಿಗೆ ಅನ್ನೋದನ್ನು ಸಿಬ್ಬಂದಿಗಳಿಗೆ ಬಿಎಂಆರ್‌ಸಿಎಲ್ ಅಧಿಕಾರಿಗಳು ಸರಿಯಾದ ತರಬೇತಿ ನೀಡಬೇಕು. ಆಗ ಮಾತ್ರ ಇಂಥದ್ದನ್ನೆಲ್ಲ ತಡೆಯಬಹುದು” ಎಂದು ತಿಳಿಸಿದ್ದಾರೆ.

“ಸಿಬ್ಬಂದಿಯನ್ನು ವಜಾಗೊಳಿಸುವುದರಿಂದ ನೀವು ಸಾಧಿಸುವುದು ಏನಿಲ್ಲ. ಆತನಿಗೂ ಹೆಂಡತಿ ಮಕ್ಕಳಿರುತ್ತಾರೆ. ಒಬ್ಬರ ಅನ್ನ ಕಿತ್ತುಕೊಳ್ಳುವುದೂ ಕೂಡ ತಪ್ಪೇ. ನಡೆದ ಘಟನೆ ಯ ಬಗ್ಗೆ ತನಿಖೆ ನಡೆಸಿ, ಸಿಬ್ಬಂದಿಗಳಲ್ಲಿ ಜಾಗೃತಿ ಮೂಡಿಸಿ, ಮುಂದೆ ಈ ರೀತಿ ಆಗದಂತೆ ಎಚ್ಚರ ವಹಿಸಿ. ತಪ್ಪು ತಿದ್ದಿಕೊಳ್ಳಲು ಒಂದು ಅವಕಾಶ ಕೊಡಿ” ಎಂದು ಕೂಡ ಕೆಲವರು ಸಿಬ್ಬಂದಿಯನ್ನು ನಡೆಯನ್ನು ಖಂಡಿಸುವುದರ ಜೊತೆಗೆ ಜಾಗೃತಿ ಮೂಡಿಸುವಂತೆ ಚೈತ್ರಾ ದೇವರಾಜ್ ಎಂಬುವವರು ಮೆಟ್ರೋ ಅಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...