ಕುದುರೆಗಳಲ್ಲಿ ಗ್ಲಾಂಡರ್ಸ್ ರೋಗ; ಬೆಂಗಳೂರು ಟರ್ಫ್ ಕ್ಲಬ್‌ ಸುತ್ತಮುತ್ತ ಕುದುರೆ ಸಂಬಂಧಿತ ಪ್ರಾಣಿಗಳ ಚಲನವಲನಕ್ಕೆ ನಿರ್ಬಂಧ

Date:

ಕುದುರೆಗಳಲ್ಲಿ ಗ್ಲಾಂಡರ್ಸ್ ರೋಗ ಕಂಡುಬಂದಿದ್ದು, ಬೆಂಗಳೂರು ಟರ್ಫ್ ಕ್ಲಬ್‌ನ ಸುತ್ತಲಿನ 2 ಕಿ.ಮೀ ವ್ಯಾಪ್ತಿಯಲ್ಲಿ ಕುದುರೆ, ಕತ್ತೆ, ಹೇಸರಗತ್ತೆ ಪ್ರಾಣಿಗಳ ಚಲನವಲನಕ್ಕೆ ನಿರ್ಬಂಧ ವಿಧಿಸಲಾಗಿದೆ.

ಟರ್ಪ್ ಕ್ಲಬ್ ಸುತ್ತಮುತ್ತ ಗ್ಲಾಂಡರ್ಸ್ ರೋಗ ಪೀಡಿತ ಪ್ರದೇಶವೆಂದು ಘೋಷಿಸಿರುವ ಭಾಗದಲ್ಲಿ ಕುದುರೆ ಮತ್ತು ಕುದುರೆ ಜಾತಿಗೆ ಸೇರಿದ ಪ್ರಾಣಿಗಳ ಚಲನವಲನ ನಿರ್ಬಂಧಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ ಆದೇಶ ಹೊರಡಿಸಿದ್ದಾರೆ

ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿರುವ ಕುದುರೆಗಳಲ್ಲಿ ಗ್ಲಾಂಡರ್ಸ್ ರೋಗ ದೃಢಪಟ್ಟಿದೆ. ಪ್ರಾಣಿಗಳಲ್ಲಿ ಸೋಂಕುಕಾರಕ ಮತ್ತು ಸಾಂಕ್ರಾಮಿಕ ರೋಗಗಳ ಪ್ರತಿಭಂದಕ ಮತ್ತು ನಿಯಂತ್ರಣ ಅಧಿನಿಯಮ 2009 ರ ಕಾಲಂ-6 ರಡಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಬೆಂಗಳೂರು ಟರ್ಫ್ ಕ್ಲಬ್ ಅನ್ನು ಗ್ಲಾಂಡರ್ಸ್ ಕೇಂದ್ರೀಕೃತ ಸ್ಥಳ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಚಿತ್ರಪಟಗಳಲ್ಲಿ ತೆಂಡೂಲ್ಕರ್- ಮೆಸ್ಸಿ ಅಪೂರ್ವ ಭೇಟಿಯ ಅವಿಸ್ಮರಣೀಯ ಕ್ಷಣಗಳು

ಬೆಂಗಳೂರು ಟರ್ಫ್ ಕ್ಲಬ್‌ನ ಸುತ್ತಲಿನ 2 ಕಿ.ಮೀ ವ್ಯಾಪ್ತಿಯಲ್ಲಿ ಕುದುರೆ ಕತ್ತೆ, ಹೇಸರಗತ್ತೆ ಪ್ರಾಣಿಗಳ ಚಲನವನ ಹಾಗೂ ಪ್ರಾಣಿಗಳ ಮನೋರಂಜನೆ ಮೆರವಣೆಗೆ ಶುಭಕಾರ್ಯಗಳು ನಿರ್ಬಂಧ ವಿಧಿಸಲಾಗಿದೆ.

ಏನಿದು ಗ್ಲಾಂಡರ್ಸ್ ರೋಗ? ಮನುಷ್ಯರಿಗೆ ಏನು ಅಪಾಯ?

ಗ್ಲಾಂಡರ್ಸ್ ಒಂದು ಸಾಂಕ್ರಾಮಿಕ ಮತ್ತು ಮಾರಣಾಂತಿಕ ಕಾಯಿಲೆಯಾಗಿದೆ. ಕುದುರೆಗಳು, ಕತ್ತೆಗಳು ಮತ್ತು ಹೇಸರಗತ್ತೆಗಳಿಗೆ ಸೋಂಕು ತರುತ್ತದೆ.
ಇದು ಬರ್ಖೋಲ್ಡೆರಿಯಾ ಮಲ್ಲಿ ಎಂಬ ಬ್ಯಾಕ್ಟೀರಿಯದಿಂದ ಉಂಟಾಗುತ್ತದೆ.
ಶ್ವಾಸನಾಳ ಮತ್ತು ಶ್ವಾಸಕೋಶಗಳಲ್ಲಿ, ಪ್ರತ್ಯೇತ ಪ್ರಕರಣಗಳಲ್ಲಿ ಗಂಟುಗಳು ಮತ್ತು ಹುಣ್ಣುಗಳನ್ನು ಉಂಟುಮಾಡುತ್ತದೆ.
ಉಲ್ಬಣವಾದರೆ ಸಾವು ಕೂಡ ಸಂಭವಿಸುತ್ತದೆ.
ಈ ಗ್ಲಾಂಡರ್ಸ್ ರೋಗ, ಮನುಷ್ಯರಿಗೂ ಹರಡುವ ಸಾಧ್ಯತೆ ಇದೆ. ಸಾಮಾನ್ಯವಾಗಿ ಸೋಂಕು ಪೀಡಿತ ಪ್ರಾಣಿಯ ಸಂಪರ್ಕಕ್ಕೆ ಬರುವ ಪ್ರಾಣಿ ನಿರ್ವಾಹಕರು ಅಥವಾ ಅಕ್ಕಪಕ್ಕದವರು ಸೋಂಕಿಗೆ ತುತ್ತಾಗುವ ಅಪಾಯವಿದೆ‌.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...