ಅಸಹಿಷ್ಣುತೆ ದೇಶವನ್ನು ಆಳುತ್ತಿದೆ: ಶೈಲಜಾ ಟೀಚರ್

Date:

ಅಸಹಿಷ್ಣುತೆ ಈ ದೇಶವನ್ನು ಆಳುತ್ತಿದೆ. ಬಾಬಾ ಸಾಹೇಬರ ನೇತೃತ್ವದಲ್ಲಿ ರಚಿತವಾದ ಸಂವಿಧಾನವನ್ನು ಇಪ್ಪತ್ತು ವರ್ಷಗಳ ನಂತರವೂ ಕಾಪಾಡಿಕೊಳ್ಳಬೇಕಾದ ಸ್ಥಿತಿ ಬಂದಿದೆ ಎಂದು ಕೇರಳದ ಮಾಜಿ ಸಚಿವೆ, ಶಾಸಕಿ ಶೈಲಜಾ ಟೀಚರ್ ಹೇಳಿದರು.

ಬೆಂಗಳೂರಿನಲ್ಲಿ ನಡೆದ ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್ ನೆನಪಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿ ಇದ್ದಾರೆ. ಅವರು ಕೋಮುವಾದಿಗಳನ್ನು ಸೋಲಿಸಿದ್ದಾರೆ. ಅದಕ್ಕೆ ಅವರಿಗೆ ಧನ್ಯವಾದಗಳು. ಕೋಮುವಾದಿ ಶಕ್ತಿಗಳನ್ನು ಕರ್ನಾಟಕದ ಜನತೆ ಸೋಲಿಸಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಾತ್ಯಾತೀತತೆ ನಮ್ಮ ಸಂವಿಧಾನದ ಗುಣ. ವಿವಿಧೆತೆಯಲ್ಲಿ ಏಕತೆ ನಮ್ಮ ವೇದ ವಾಕ್ಯ. ಸಂಘಪರಿವಾರ ಇದನ್ನು ಒಪ್ಪುವುದಿಲ್ಲ. ಸನಾತನ ಧರ್ಮ ಎಂದರೇನು? ಅದನ್ನು ಖಂಡಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕುತ್ತಾರೆ. ಸಂಘಪರಿವಾರದ ಸನಾತನ ಧರ್ಮವೇ ಬೇರೆ. ದೇವರೇ ಚಾತುರ್ವರ್ಣ ರಚಿಸಿದ್ದಾನೆ” ಎನ್ನುತ್ತಾರೆ.

“ಬ್ರಾಹ್ಮಣರು ತಲೆಯಲ್ಲಿ ಹುಟ್ಟಿದವರು, ವಿದ್ಯೆ ಅವರಿಗೆ ಎನ್ನುವುದನ್ನು ನಾವು ಒಪ್ಪಲು ಸಾಧ್ಯವೇ? ಶೂದ್ರರು ಕಾಲಿನಲ್ಲಿ ಹುಟ್ಟಿದ್ದು ಎನ್ನುವುದನ್ನು ಒಪ್ಪಲು ಸಾಧ್ಯವೇ? ಇಲ್ಲ, ಯಾವುದೂ ಸಾಧ್ಯವಿಲ್ಲ” ಎಂದು ಹೇಳಿದರು.

“ಪ್ರಜಾಪ್ರಭುತ್ವವನ್ನು ನಾವು ಉಳಿಸಬೇಕಾಗಿದೆ. ಹಿಂದುತ್ವ ಪರಿಕಲ್ಪನೆ ಅಂದರೆ ಒಡೆದು ಆಳುವ ಪರಿಕಲ್ಪನೆ. ಫ್ಯಾಸಿಸಂ ನಮ್ಮನ್ನು ಆಳುತ್ತಿದೆ. ಜನರನ್ನು ನಿಯಂತ್ರಿಸುತ್ತಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಕೆಲವರಿಗೆ ʼಇಂಡಿಯಾʼವೆಂಬ ಪದವನ್ನೇ ಕೇಳಲು ಆಗುತ್ತಿಲ್ಲ: ಪತ್ರಕರ್ತೆ ಸುಪ್ರಿಯಾ ಶ್ರೀನಾಟೆ

“ಗಾಂಧೀಜಿ ಯಾರು? ಸಾವರ್ಕರ್ ಯಾರು? ಎಂಬುದು ನಮಗೆ ತಿಳಿದಿದೆ. ಅವರು ಸನಾತನ ಧರ್ಮದ ಕುರಿತು ಮಾತನಾಡುತ್ತಿದ್ದಾರೆ. ಇಂದು ಏನಾಗುತ್ತಿದೆ. ಮಣಿಪುರ ಹೊತ್ತಿ ಉರಿಯುತ್ತಿದೆ. ಪ್ರಧಾನಿ ಸಂಸತ್ತಿನಲ್ಲಿ ಮಾತನಾಡಬೇಕು ಎಂದು ಅವಿಶ್ವಾಸ ಗೊತ್ತುವಳಿಯನ್ನು ವಿರೋಧ ಪಕ್ಷಗಳು ಮಂಡಿಸಿದಾಗ ಮಣಿಪುರದ ಬಗ್ಗೆ ಕೆಲವೇ ಕೆಲವು ನಿಮಿಷಗಳು ಮೋದಿ ಮಾತನಾಡಿದರು” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಕೊರಾನಾ ಸಮಯದಲ್ಲಿ ಗೋವಿನ ಗಂಜಲ ಸವರಿಕೊಳ್ಳಿ ಎಂದರು. ದೇಶ ಈ ದಿಕ್ಕಿನಲ್ಲಿ ಸಾಗುತ್ತಿದೆ. ದೇಶವನ್ನು ಉಳಿಸಲು, ಪ್ರಜಾಪ್ರಭುತ್ವವನ್ನು ಉಳಿಸಲು, ಸೆಕ್ಯುಲರಿಸಂ ಉಳಿಸಲು ನಾವು ಗೌರಿ ಹೆಸರಲ್ಲಿ ಮುಂದಡಿ ಇಡಬೇಕಾಗಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...