ಇಸ್ಲಾಂ ಧರ್ಮ ಹಿಂಸೆಯನ್ನು ಬಿತ್ತುತ್ತದೆ ಎನ್ನುವುದೇ ಶುದ್ಧ ಸುಳ್ಳು: ಚಿರಂಜೀವಿ ಸಿಂಘ್

Date:

  • ಯೋಗೇಶ್ ಮಾಸ್ಟರ್ ಅವರ ‘ನನ್ನ ಅರಿವಿನ ಪ್ರವಾದಿ’ ಪುಸ್ತಕ ಬಿಡುಗಡೆ ಕಾರ್ಯಕ್ರಮ
  • ಬೆಂಗಳೂರಿನ ಬಿಫ್ಟ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಅಭಿಪ್ರಾಯ

ಇಸ್ಲಾಂ ಎಂದರೆ ಹಿಂಸೆ ಬಿತ್ತುವ ಧರ್ಮ ಎನ್ನುವುದು ಜಗತ್ತಿನಾದ್ಯಂತ ಇರುವ ಶುದ್ಧ ಸುಳ್ಳು. ಅದನ್ನು ಹೋಗಲಾಡಿಸಿ, ಶಾಂತಿಯ ಧರ್ಮ ಎನ್ನುವ ಸತ್ಯದ ದರ್ಶನವನ್ನು ‘ನನ್ನ ಅರಿವಿನ ಪ್ರವಾದಿ’ ಪುಸ್ತಕ ಮಾಡಿಸುತ್ತದೆ ಎಂದು ನಿವೃತ್ತ ಐಎಎಸ್‌ ಅಧಿಕಾರಿ ಚಿರಂಜೀವಿ ಸಿಂಘ್ ಹೇಳಿದರು.

ಮಂಗಳೂರಿನ ಶಾಂತಿ ಪ್ರಕಾಶನ ಗುರುವಾರ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಬಿಫ್ಟ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಯೋಗೀಶ್‌ ಮಾಸ್ಟರ್‌ ಅವರ ‘ನನ್ನ ಅರಿವಿನ ಪ್ರವಾದಿ’ ಪುಸ್ತಕ ಬಿಡುಗಡೆ ಮಾಡಿ ಅವರು ಮಾತನಾಡಿದರು.

FB IMG 1695944556016

ಬಸವ ತತ್ವಕ್ಕೂ ಕುರಾನಿಗೂ ಸಾಕಷ್ಟು ಹೋಲಿಕೆ ಇದೆ. ಎರಡೂ ಧರ್ಮಗಳ ಸಾರವೂ ಒಂದೇ ಆಗಿದೆ. ಯೋಗೀಶ್‌ ಮಾಸ್ಟರ್‌ ಅವರ ಪುಸ್ತಕ ಪೈಗಂಬರ್‌ ಅವರ ಅನುಭವದ ಕಥನವಾಗಿದೆ. ಎಲ್ಲ ಧರ್ಮಗಳನ್ನೂ ಗೌರವಿಸುವ, ಸ್ಮರಿಸುವ ಧ್ಯೇಯಗಳನ್ನು ಒಳಗೊಂಡಿದೆ. ಸರ್ವ ಜನಾಂಗದ ಶಾಂತಿಯ ತೋಟದ ಪರಿಕಲ್ಪನೆ ಕಟ್ಟಿಕೊಟ್ಟಿದೆ. ಓದುವ ಅಭ್ಯಾಸ ಕಡಿಮೆಯಾಗುತ್ತಿರುವ ಈ ದಿನಗಳಲ್ಲಿ ಪುಸ್ತಕವನ್ನು ಡಿಜಿಟಲ್‌ ಆವೃತ್ತಿಗಳ ಮೂಲಕವೂ ಜನರಿಗೆ ತಲುಪಿಸುವ ಕೆಲಸ ಆಗಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲೇಖಕಿ ವಸುಂಧರಾ ಭೂಪತಿ ಮಾತನಾಡಿ, ಉತ್ತಮ ನಡೆಯ ಮೂಲಕ ಅಪ್ಪಂದಿರು ಮಕ್ಕಳನ್ನು ತಿದ್ದಬೇಕು. ಸ್ನೇಹಿತರಂತೆ ಕಾಣಬೇಕು. ತ್ಯಾಗ ಸೌಹಾರ್ದ ಕಲಿಸಬೇಕು. ಮಕ್ಕಳ ಸುಳ್ಳುಗಳನ್ನು ಕ್ಷಮಿಸಬೇಕು. ಅಂತಹ ಮಕ್ಕಳು ಸಮಾಜಕ್ಕೆ ಉತ್ತಮ ಪ್ರಜೆಗಳಾಗುತ್ತಾರೆ ಎಂಬ ವಿವರಗಳನ್ನೂ ಪುಸ್ತಕ ದಾಖಲಿಸಿದೆ ಎಂದರು.

FB IMG 1695945428412

ಕೃತಿ ಕುರಿತು ‘ಸುಧಾ’ ವಾರಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ರಘುನಾಥ ಚ.ಹ. ಮಾತನಾಡಿದರು.

ಜಮಾತೆ ಇಸ್ಲಾಮೀ ಹಿಂದ್‌ ಕಾರ್ಯದರ್ಶಿ, ಶಾಂತಿ ಪ್ರಕಾಶನ ಸಂಸ್ಥೆಯ ವ್ಯವಸ್ಥಾಪಕ ಮುಹಮ್ಮದ್ ಕುಂಞಿ, ಲೇಖಕ ಯೋಗೀಶ್‌ ಮಾಸ್ಟರ್‌ ಉಪಸ್ಥಿತರಿದ್ದರು.

ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕ ರಾಜ್ಯಾಧ್ಯಕ್ಷ ಮುಹಮ್ಮದ್‌ ಸಾದ್ ಬೆಳಗಾಮಿ ಅಧ್ಯಕ್ಷತೆ ವಹಿಸಿದ್ದರು.

FB IMG 1695945386382
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...