ಕೆಕೆಆರ್‌ಟಿಸಿ | ಪ್ರೀಮಿಯಂ ರಹಿತ ₹1.20 ಕೋಟಿ ಅಪಘಾತ ಪರಿಹಾರ‌ ವಿಮಾ ಯೋಜನೆ ಜಾರಿ

Date:

ಕಲ್ಯಾಣ‌ ಕರ್ನಾಟಕ‌ ರಾಜ್ಯ ರಸ್ತೆ ಸಾರಿಗೆ ನಿಗಮವು (ಕೆಕೆಆರ್‌ಟಿಸಿ) ಸಾರ್ವಜನಿಕರಿಗೆ ಉತ್ತಮ ಸಾರಿಗೆ ಸೌಲಭ್ಯ ಕಲ್ಪಿಸಲು ಹಗಲಿರಳು ಶ್ರಮಿಸುತ್ತಿರುವ ನಿಗಮದ ಸಿಬ್ಬಂದಿಗೆ ಸಂಸ್ಥೆಯಿಂದ ಹಲವಾರು ಕಾರ್ಮಿಕ ಕಲ್ಯಾಣ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಇದೀಗ, ಮತ್ತೊಂದು ಮಹತ್ವದ ಯೋಜನೆಯಾದ ಪ್ರೀಮಿಯಂ ರಹಿತ ₹1.20 ಕೋಟಿ ಅಪಘಾತ ಪರಿಹಾರ‌ ವಿಮಾ ಯೋಜನೆ ಜಾರಿಗೆ ತರಲಾಗಿದೆ ಎಂದು ನಿಗಮ ಮಾಹಿತಿ ನೀಡಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ನಿಗಮ, “ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರ ಉಪಸ್ಥಿತಿಯಲ್ಲಿ ವ್ಯವಸ್ಥಾಪಕ ನಿರ್ದೇಶಕ ರಾಚಪ್ಪ ಹಾಗೂ ಕರ್ನಾಟಕ ವಲಯ ಮುಖ್ಯಸ್ಥ ನವನೀತ್ ಕುಮಾರ್, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಅವರೊಂದಿಗೆ ಒಡಂಬಡಿಕೆ ವಿನಿಮಯ ಮಾಡಿಕೊಂಡರು” ಎಂದು ತಿಳಿಸಿದೆ.

ಈ ವೇಳೆ ಮಾತನಾಡಿದ ಸಚಿವರು, “ಅಪಘಾತದಿಂದ ನಿಗಮದ ಸಿಬ್ಬಂದಿಗೆ ಉಂಟಾಗುತ್ತಿರುವ ಸಾವು-ನೋವಿನ ಪ್ರಮಾಣ ಗಮನಿಸಿ ನೌಕರರು ವೈಯಕ್ತಿಕ / ಕರ್ತವ್ಯ ನಿರತ ಸಮಯದಲ್ಲಿ ಅಪಘಾತದಿಂದಾಗಿ ಅಂಗನ್ಯೂನತೆಗೆ ಒಳಗಾದಲ್ಲಿ ಸಿಬ್ಬಂದಿಗೆ ವಿಮೆ ಮೊತ್ತ ಹೋಗಲಿದೆ. ಅಥವಾ ಸಿಬ್ಬಂದಿ ಮೃತಪಟ್ಟಲ್ಲಿ ಅವರ ಅವಲಂಬಿತರಿಗೆ ಗಣನೀಯ ಮೊತ್ತದಷ್ಟು ಹಣ ದೊರೆಯುವಂತೆ ಮಾಡುವ ಉದ್ದೇಶದಿಂದ ಡಿ.21 ರಂದು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಅವರೊಂದಿಗೆ ಯೋಜನೆಯ ಸೌಲಭ್ಯ ನೀಡಲು ಒಪ್ಪಂದ ಮಾಡಿಕೊಳ್ಳಲಾಗಿದೆ. ಪ್ರೀಮಿಯಂ ರಹಿತವಾಗಿ ಈ ಯೋಜನೆಯನ್ನು ಜಾರಿಗೊಳಿಸಲು ಸಹಕರಿಸಿದ ಯೂನಿಯನ್ ಬ್ಯಾಂಕ್ ಅವರಿಗೆ ಧನ್ಯವಾದ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಯೋಜನೆಯಡಿ ಯೂನಿಯನ್ ಬ್ಯಾಂಕಿನಲ್ಲಿ ವೇತನ ಪಡೆಯುತ್ತಿರುವ ನೌಕರರಿಗೆ ಅಪಫಾತವಾಗಿ ನಿಧನರಾದಲ್ಲಿ ಅಂತಹ ನೌಕರರ ಅವಲಂಬಿತರಿಗೆ ₹1.20 ಕೋಟಿ ಅಪಘಾತ ವಿಮೆ ಹಣ ದೊರಕಲಿದೆ.

ಈ ಸುದ್ದಿ ಓದಿದ್ದೀರಾ? ರಾಜ್ಯದಲ್ಲೂ ಕೊರೋನಾ ಸೋಂಕು ದಿನೇ ದಿನೆ ಏರಿಕೆ : ಬೆಂಗಳೂರಿನಲ್ಲಿ 19 ಕೇಸ್ ಪತ್ತೆ

ನೌಕರರು ಶಾಶ್ವತ ಅಂಗನ್ಯೂನತೆ ಅಥವಾ ಭಾಗಶಃ ಶಾಶ್ವತ ಅಂಗನ್ಯೂನತೆಗೆ ಒಳಗಾದಲ್ಲಿ ₹1 ಕೋಟಿ ಪಡೆಯಬಹುದಾಗಿದೆ. ಡೆಬಿಟ್ ಕಾರ್ಡ್ ಮೇಲೆ ₹15 ಲಕ್ಷಗಳ ಅಪಘಾತ ವಿಮಾ ಸೌಲಭ್ಯವನ್ನು ಜಾರಿ ಮಾಡಲಾಗಿದೆ. ಈ ಯೋಜನೆಯಡಿ ಅಪಘಾತವಲ್ಲದ ಸ್ವಾಭಾವಿಕ ಮರಣಕ್ಕೆ ₹5 ಲಕ್ಷ ವಿಮೆದೊಂದಿಗೆ ಇತರೆ ಹೆಚ್ಚುವರಿ ಸೌಲಭ್ಯ ನೀಡಲಾಗುತ್ತಿದೆ ಎಂದು ಹೇಳಿದೆ.

ದೇಶದ ಸಾರಿಗೆ ನಿಗಮಗಳಲ್ಲಿ ಮೊದಲ ಬಾರಿಗೆ ₹1.20 ಕೋಟಿ ಅಪಘಾತ ವಿಮೆ ಸಾರಿಗೆ ನೌಕರರಿಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಜಾರಿಗೆ ತರಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...