ಮಾದಿಗ ಸಮುದಾಯ ಕೀಳರಿಮೆ ಬಿಟ್ಟು ಜಾತಿ ನಮೂದಿಸಲಿ: ಮುಖಂಡರ ಮನವಿ

Date:

ಒಳಮೀಸಲಾತಿ ಜಾರಿಗಾಗಿ ಮೇ 5ರಿಂದ 17ರವರೆಗೆ ನಡೆಯುವ ಪರಿಶಿಷ್ಟ ಜಾತಿಗಳ ಸಮೀಕ್ಷೆಯಲ್ಲಿ ಮಾದಿಗ ಸಮುದಾಯದವರು ಕೀಳರಿಮೆಯನ್ನು ಬಿಟ್ಟು ತಮ್ಮ ಜಾತಿ ಹೆಸರನ್ನು ಗಣತಿದಾರರಲ್ಲಿ ಬರೆಸಬೇಕು ಎಂದು ಸಮುದಾಯದ ಮುಖಂಡರು ಕರೆ ಕೊಟ್ಟಿದ್ದಾರೆ.

ಬೆಂಗಳೂರಿನಲ್ಲಿ ಶುಕ್ರವಾರ ಸಭೆ ನಡೆಸಿದ ಸಮುದಾಯದ ಮುಖಂಡರು, ಬೆಂಗಳೂರು ನಗರದಲ್ಲಿ ಗಣತಿಯನ್ನು ಹೇಗೆ ಯಶಸ್ವಿಯಾಗಿ ನೆರವೇರಿಸುವುದು ಮತ್ತು ಮಾದಿಗ ಸಮುದಾಯದ ಲೆಕ್ಕ ತಪ್ಪಿ ಹೋಗದಂತೆ ಹೇಗೆ ಜಾಗೃತಿ ವಹಿಸುವುದು ಎಂಬುದರ ಕುರಿತು ಚರ್ಚಿಸಿದರು.

ಮುಖಂಡರಾದ ಬಸವರಾಜ ಕೌತಾಳ್ ಅವರು ಮಾತನಾಡಿ, “ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳನ್ನು ನಾವು ಗಂಭೀರವಾಗಿ ತೆಗೆದುಕೊಳ್ಳಬೇಕಾಗಿದೆ. ಸಮುದಾಯದ ಜನರನ್ನು ಗಣತಿಗೆ ಒಳಪಡಿಸಬೇಕಾದ ಜವಾಬ್ದಾರಿ ನಮ್ಮ ಮೇಲಿದೆ. ಇದು ನಮಗೆ ಬಂದಿರುವ ಸದಾವಕಾಶ. ಆದಿ ಕರ್ನಾಟಕ, ಆದಿ ದ್ರಾವಿಡ, ಆದಿ ಆಂಧ್ರದ ಸಮಸ್ಯೆಗೆ ಅಂತ್ಯ ಹಾಡಬೇಕಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮ ಸಮುದಾಯಗಳು ಇರುವ ವಾರ್ಡ್‌ಗಳಿಗೆ ಹೋಗಿ ಜಾಗೃತಿ ಮೂಡಿಸಬೇಕಾಗಿದೆ. ಪರಿಶಿಷ್ಟ ಜಾತಿಯಲ್ಲಿನ ಇತರೆ ಸಮುದಾಯಗಳು ಈಗಾಗಲೇ ಜಾಗೃತಿ ಮೂಡಿಸುತ್ತಿವೆ. ಮಾದಿಗ ಸಮುದಾಯವು ಇದೇ ನಿಟ್ಟಿನಲ್ಲಿ ಹೆಚ್ಚಿನ ಕೆಲಸಗಳನ್ನು ಮಾಡಬೇಕಿದೆ. ಎ.ಕೆ., ಎ.ಡಿ. ಬೇಡ ಎಂದು ಹೇಳಬೇಕಿದೆ. ಸಮೀಕ್ಷೆಯ ಪಟ್ಟಿಯಲ್ಲಿನ ನಮ್ಮ ಕ್ರಮ ಸಂಖ್ಯೆ 61ರಲ್ಲಿ ಜಾತಿಯನ್ನು ತಪ್ಪದೇ ದಾಖಲಿಸಬೇಕಿದೆ” ಎಂದು ಮನವಿ ಮಾಡಿದರು.

ಹೋರಾಟಗಾರ ಆನಂದ್ ಮಾತನಾಡಿ, “ವಾರ್ಡ್‌ಗಳಲ್ಲಿನ ವಿದ್ಯಾವಂತ ಹುಡುಗರನ್ನು ಆಯ್ಕೆ ಮಾಡಿಕೊಂಡು, ಇಬ್ಬಿಬ್ಬರನ್ನು ಅಧಿಕಾರಿಗಳ ಜೊತೆ ಬಿಡಬೇಕು. ಅಧಿಕಾರಗಳು ಒಂದು ಕಡೆ ದಾಖಲೆ ಮಾಡಿಕೊಳ್ಳುತ್ತಿದ್ದರೆ, ಸಮುದಾಯದ ಹುಡುಗರೂ ಇನ್ನೊಂದು ಕಡೆ ಬರೆದುಕೊಳ್ಳಬೇಕು. 198 ವಾರ್ಡ್‌ಗಳಿವೆ. ಒಂದೊಂದು ವಾರ್ಡ್‌ಗೆ 200 ಯುವಕರು ಎಂದರೆ 2000 ಯುವಕರು ನಮಗಾಗಿ ಕೆಲಸ ಮಾಡುತ್ತಾರೆ” ಎಂದು ವಿವರಿಸಿದರು.

“ಅಕ್ಷರ ಕಲಿತವರು ಕೇರಿಯನ್ನು ಬಿಟ್ಟು ಬೇರೆ ಏರಿಯಾಗಳಿಗೆ ಹೋಗಿದ್ದಾರೆ. ಅವರು ತಮ್ಮ ಜಾತಿಯನ್ನು ಹೇಳಿಕೊಳ್ಳಲು ನಾಚಿಕೆ ಪಡುತ್ತಿದ್ದಾರೆ. ಅಂಥವರಿಗೆ ಆನ್‌ಲೈನ್ ವ್ಯವಸ್ಥೆ ಇದೆ. ಜಾತಿಯನ್ನು ಯಾರಿಗೂ ಹೇಳದಂತೆಯೇ ನೋಂದಣಿ ಮಾಡಿಕೊಳ್ಳಬಹುದು. ಆಟೋ ಮತ್ತು ಕರಪತ್ರದ ಮೂಲಕ ಪ್ರಚಾರ ಮಾಡಬೇಕಿದೆ” ಎಂದು ಸಲಹೆ ನೀಡಿದರು.

“ನಮ್ಮವರು ನಾಚಿಕೆಯನ್ನು ಬಿಡಬೇಕು. ಪೌರಕಾರ್ಮಿಕರು ಹೆಚ್ಚಿರುವಂತಹ ಜಗಜೀವನ್ ರಾಮ್ ನಗರ, ಸಬರ್‌ಲೈನ್, ಶ್ರೀರಾಂಪುರ, ಚಂದ್ರಪ್ಪನಗರ, ಮುರಡ್ಡಿಪಾಳ್ಯ ಮೊದಲಾದ ಕಡೆ ಪೌರಕಾರ್ಮಿಕರು ಹೆಚ್ಚಿದ್ದಾರೆ. ಅವರಿಗೆ ತಮ್ಮ ಜಾತಿಯನ್ನು ಹೇಳಿಕೊಳ್ಳಲು ತೊಂದರೆ ಇಲ್ಲ. ಆದರೆ ಆರ್ಥಿಕವಾಗಿ ಒಂದಿಷ್ಟು ಮುಂದುವರಿದವರು ಜಾತಿ ಹೇಳಿಕೊಳ್ಳುವುದಿಲ್ಲ. ಅವರಿಗೆ ಗೊಂದಲಗಳಿವೆ. ಇಂಥವರಿಗೆ ತಿಳಿ ಹೇಳಬೇಕಾಗಿದೆ” ಎಂದು ತಿಳಿಸಿದರು.

ಮುಖಂಡರ ನರಸಿಂಹಮೂರ್ತಿ ಮಾತನಾಡಿ, “ಜಾತಿಯನ್ನು ಹೇಳಿಕೊಳ್ಳದಿದ್ದರೆ ಸಮುದಾಯಕ್ಕೆ ದೊಡ್ಡ ದ್ರೋಹ ಬಗೆಯುತ್ತಿರೀ ಎಂಬುದನ್ನು ಜಾಗೃತಿ ಮೂಡಿಸಬೇಕು. ಕೀಳರಿಮೆ ಪಕ್ಕಕ್ಕಿಡಲು ಹೇಳಬೇಕಾಗಿದೆ. ಅಪಾರ್ಟ್‌ಮೆಂಟ್‌ನಲ್ಲಿ ಇರುವವರದ್ದೇ ಸಮಸ್ಯೆ. ಬಾಡಿಗೆ ಕೊಟ್ಟವರು ತಲೆಕೆಡಿಸಿಕೊಳ್ಳದಿದ್ದರೂ ಕೀಳರಿಮೆಯಿಂದ ಇವರೇ ನರಳುತ್ತಾರೆ” ಎಂದು ವಿಷಾದಿಸಿದರು.

ಇದನ್ನೂ ಓದಿರಿ: ಶಿವಮೊಗ್ಗ | ರಾಬರ್ಟ್ ವಾದ್ರಾರನ್ನು ಗುಂಡಿಕ್ಕಿ ಕೊಲ್ಲಿ: ಬಿಜೆಪಿ ಶಾಸಕ ಚನ್ನಬಸಪ್ಪ ಪ್ರಚೋದನಾಕಾರಿ ಹೇಳಿಕೆ

ನಾಗಮಣಿ ಮಾತನಾಡಿ, “ಮೂವತ್ತು ವರ್ಷಗಳ ಪ್ರತಿಫಲ ಇಂದು ಸಿಗುತ್ತಿದೆ. ಮುಂದಿನ ಮಕ್ಕಳ ಭವಿಷ್ಯದ ಬಗ್ಗೆ ಯೋಚಿಸಬೇಕು. ಗುಡಿಸಲುಗಳಲ್ಲಿ ಅನಕ್ಷರಸ್ಥರಿರುತ್ತಾರೆ. ಅಂಥವರಿಗೆ ಮಾರ್ಗದರ್ಶನ ನೀಡಬೇಕು” ಎಂದರು.

ಮುಖಂಡರಾದ ವೈ.ನಾರಾಯಣಸ್ವಾಮಿ, ಸೋಮಶೇಖರ್ ಎಣ್ಣೂರು, ವೇಣು ಮೌರ್ಯ, ಎಣ್ಣೂರು ಮುನಿಯಪ್ಪ ಮೊದಲಾದವರು ಸಭೆಯಲ್ಲಿ ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...