ಲೋಕಸಭಾ ಚುನಾವಣೆ | ಏ. 6; ಪ್ರಣಾಳಿಕೆಯಲ್ಲಿ ಪರಿಸರಕ್ಕಾಗಿ ಆದ್ಯತೆ ನೀಡಲು ‘ಪರಿಸರ ಪ್ರಣಾಳಿಕೆ’ ಬಿಡುಗಡೆ

Date:

ಬೆಂಗಳೂರು: ‘ಪರಿಸರಕ್ಕಾಗಿ ನಾವು’ ಸಂಘಟನೆ ವತಿಯಿಂದ ಏಪ್ರಿಲ್ 6ರಂದು ‘ಪರಿಸರ ಪ್ರಣಾಳಿಕೆಗಾಗಿ ಬೆಂಗಳೂರು ಸಮಾವೇಶ’ವನ್ನು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪರಿಸರ ಕಾರ್ಯಕರ್ತ ನಾಗೇಶ ಹೆಗಡೆ ಮಾಹಿತಿ ನೀಡಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ವಿವಿಧ ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ಆಕರ್ಷಕ ಭರವಸೆಗಳನ್ನು ಹೊಂದಿರುವ ಪ್ರಣಾಳಿಕೆಗಳನ್ನು ಸಿದ್ಧಪಡಿಸುತ್ತಿವೆ. ಆದರೆ, ಈ ಬಾರಿ ಪರಿಸ್ಥಿತಿ ಎಂದಿನಂತಿಲ್ಲ. ನಾವೆಲ್ಲ ಒಂದು ಮಹಾ ಪರಿಸರ ಬಿಕ್ಕಟ್ಟಿನ ಅತ್ಯಂತ ಸಂದಿಗ್ಧ ಪರಿಸ್ಥಿತಿಯಲ್ಲಿ ಇದ್ದೇವೆ. ಆದ್ದರಿಂದ, ಎಲ್ಲ ಪಕ್ಷಗಳು ಪರಿಸರ ಸಂರಕ್ಷಣೆಯ ವಿಚಾರಗಳನ್ನು ತಮ್ಮ ಪ್ರಣಾಳಿಕೆಗಳಲ್ಲಿ ಸೇರಿಸಬೇಕು” ಎಂದು ಒತ್ತಾಯಿಸಿದರು.

“ಹವಾಮಾನ ಬದಲಾವಣೆ ಮತ್ತು ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ರೂಪಿಸಬೇಕು. ಇಲ್ಲದಿದ್ದರೆ ಮತ್ತೆಂದೂ ಸರಿಪಡಿಸಲು ಸಾಧ್ಯವಾಗದಂತಹ ಪರಿಸರ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಈಗಾಗಲೇ ಅತಿವೃಷ್ಟಿ, ಅನಾವೃಷ್ಟಿ, ನೀರಿನ ಅಭಾವ, ಬಿಸಿ ಗಾಳಿ, ಪ್ರವಾಹ, ಬರಗಾಲ, ಹಿಮಗಡ್ಡೆ ಕರಗುವಿಕೆ ಇತ್ಯಾದಿ ಸಮಸ್ಯೆಗಳಿಗೆ ನಾವು ಸಿಲುಕಿದ್ದೇವೆ. ಹಾಗಾಗಿ, ಸದ್ಯ ನಮ್ಮ ದೇಶದ ಚುನಾವಣೆಯಲ್ಲಿ ಭಾಗವಹಿಸುವ ಎಲ್ಲ ಪಕ್ಷಗಳು, ಪಕ್ಷ ಬೇಧ ಮರೆತು ತಮ್ಮ ಪ್ರಣಾಳಿಕೆಗಳಲ್ಲಿ ಪರಿಸರ ತುರ್ತು ಎದುರಿಸುವ ವಿಚಾರಗಳನ್ನು ಆದ್ಯತೆಯ ಮೇರೆಗೆ ಸೇರಿಸಿಕೊಳ್ಳಬೇಕು” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪರಿಸರಕ್ಕಾಗಿ ನಾವು” ಕರ್ನಾಟಕದ ಸಮಾನ ಮನಸ್ಕ ಪರಿಸರ ಕಾರ್ಯಕರ್ತರು ಸೇರಿ ಸ್ಥಾಪಿಸಿರುವ ಸಂಘಟನೆ. ಹವಾಗುಣ ವೈಪರಿತ್ಯ ಮತ್ತು ಇತರ ಗಂಭೀರ ಪರಿಸರ ಸಮಸ್ಯೆಗಳನ್ನು ಎದುರಿಸಲು ನಾವು ವೈಯಕ್ತಿಕ, ಸಾಮುದಾಯಿಕ, ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಕೆಲಸ ಮಾಡುತ್ತಿದ್ದೇವೆ. ಸ್ಥಳೀಯವಾಗಿ ರಚನಾತ್ಮಕ ಕಾರ್ಯ ಮಾಡುವುದರೊಂದಿಗೆ ಸರಕಾರದ ನೀತಿ ಮತ್ತು ಕಾನೂನು ವಿಷಯದಲ್ಲಿ ಸುಸ್ಥಿರತೆ ಮತ್ತು ಸಮಾನತೆಯ ಗುರಿಯಿಟ್ಟುಕೊಂಡು ಪ್ರಭಾವ ಬೀರುವ ಪ್ರಯತ್ನ ನಮ್ಮದು ಎಂದು ಸಂಘಟಕರು ತಿಳಿಸಿದ್ದಾರೆ.

ಶೋಭಾ ಭಟ್, ಆಂಜನೇಯ ರೆಡ್ಡಿ ನೀರಾವರಿ, ಪಾರ್ವತಿ ಶ್ರೀರಾಮ್, ಪಾಪೇಗೌಡ, ವಿಶಾಲಾಕ್ಷಿ, ಪರಿಸರ ಮಂಜು ಭಾಗವಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...