ದೆಹಲಿಯಲ್ಲಿ ಬಿಕ್ಲು ಶಿವ ಪ್ರಕರಣದ ಪ್ರಮುಖ ಆರೋಪಿ ಜಗ್ಗನ ಬಂಧನ

Date:

ಬಿಕ್ಲು ಶಿವ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಸಿಐಡಿ ಅಧಿಕಾರಿಗಳು ಮಂಗಳವಾರ (ಆ.26) ಬಂಧಿಸಿದ್ದಾರೆ.

ಕೊಲೆಯಾದ ಬಳಿಕ ತಲೆಮರೆಸಿಕೊಂಡಿದ್ದ ಜಗದೀಶ್‌ ಅಲಿಯಾಸ್‌ ಜಗ್ಗನನ್ನು ದೆಹಲಿಯಲ್ಲಿ ಸಿಐಡಿ ಅಧಿಕಾರಿಗಳ ವಿಶೇಷ ತಂಡ ಬಂಧಿಸಿದ್ದಾರೆ. ಜಗದೀಶ್‌ನನ್ನು ಬಂಧಿಸಿ ದೆಹಲಿಯಲ್ಲಿ ಬಂಧಿಸಿ ಬೆಂಗಳೂರಿಗೆ ಕರೆತರಲಾಗುತ್ತಿದೆ ಎಂದು ವರದಿಯಾಗಿದೆ.

ರೌಡಿಶೀಟರ್‌ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಜಗದೀಶ್‌ ಅಲಿಯಾಸ್‌ ಜಗ್ಗನ ವಿರುದ್ಧ ಬ್ಲೂಕಾರ್ನರ್‌ ನೋಟಿಸ್‌ ಹೊರಡಿಸಿದರೂ ಆರೋಪಿ ಒಂದು ದೇಶದಿಂದ ಮತ್ತೊಂದು ದೇಶಕ್ಕೆ ಪರಾರಿಯಾಗುತ್ತಿರುವುದು ಸಿಐಡಿ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಗದೀಶ್ ದುಬೈನಿಂದ ಥಾಯ್ಲೆಂಡ್‌, ಬಳಿಕ ಇಂಡೋನೇಷ್ಯಾ ಹೀಗೆ ಕಳೆದ ಒಂದು ತಿಂಗಳಲ್ಲಿ ನಾಲ್ಕು ದೇಶ ಸ್ಥಳಾಂತರವಾಗಿರುವ ಮಾಹಿತಿ ಸಿಕ್ಕಿತ್ತು. ಹೀಗಾಗಿ ಮತ್ತೂಮ್ಮೆ ಇಂಟರ್‌ಪೋಲ್‌ ಅಧಿಕಾರಿಗಳನ್ನು ಸಂಪರ್ಕಿಸಿ ಆರೋಪಿಯನ್ನು ಆದಷ್ಟೇ ಬೇಗ ಬಂಧಿಸಿ ರಾಜ್ಯಕ್ಕೆ ಕರೆತರಲಾಗುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಲವೆಂಬ ಗಾಲಿಯಡಿ ಡಿ.ಕೆ.ಶಿ.; ಏಳುವರೇ, ಬೀಳುವರೇ?

ಪೊಲೀಸರ ಕಣ್ಣು ತಪ್ಪಿಸಿ ವಿದೇಶದಲ್ಲಿ ಜಗದೀಶ್‌ ಓಡಾಡುತ್ತಿದ್ದ. ಬೆಂಗಳೂರಿನ ಕೆಲವರು ಆತನ ಖಾತೆಗೆ ಹಣ ಜಮೆ ಮಾಡುತ್ತಿರುವುದು ಗೊತ್ತಾಗಿತ್ತು. ಈ ಹಣದಿಂದಲೇ ಆತ ಒಂದು ದೇಶದಿಂದ ಮತ್ತೊಂದು ದೇಶಕ್ಕೆ ಪರಾರಿಯಾಗುತ್ತಿದ್ದ. ಆದರಿಂದ ಆತನ ಬ್ಯಾಂಕ್‌ ಖಾತೆ ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದರು.

ಜು.15ರಂದು ಮಾರಕಾಸ್ತ್ರಗಳಿಂದ ಶಿವಪ್ರಕಾಶ್‌ನನ್ನು ಮನೆ ಬಳಿಯೇ ಬರ್ಬರವಾಗಿ ಹತ್ಯೆ ಮಾಡಿದ್ದರು. ಪ್ರಕರಣದಲ್ಲಿ ಜಗದೀಶ್‌ ಮತ್ತು ಶಾಸಕ ಭೈರತಿ ಬಸವರಾಜ್ ಸೇರಿ 6 ಮಂದಿ ವಿರುದ್ಧ ಭಾರತಿನಗರ ಠಾಣೆಯಲ್ಲಿ ಎಫ್ಐಆರ್‌ ದಾಖಲಾಗಿತ್ತು.

ಶಾಸಕ ಭೈರತಿ ಬಸವರಾಜ್ ಅವರನ್ನು 2 ಬಾರಿ ವಿಚಾರಣೆ ನಡೆಸಲಾಗಿತ್ತು. ಕೆ ಜಿ ಹಳ್ಳಿ ಎಸಿಪಿ ಪ್ರಕಾಶ್‌ ರಾಥೋಡ್‌ ನೇತೃತ್ವದಲ್ಲಿ ಈ ಪ್ರಕರಣದ 16 ಮಂದಿ ಆರೋಪಿಗಳನ್ನು ಬಂಧಿಸಲಾಗಿತ್ತು. ಬಳಿಕ ಸಿಐಡಿಗೆ ಪ್ರಕರಣ ವರ್ಗಾವಣೆ ಮಾಡಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...