ಹೈಕೋರ್ಟ್‌ ವಿಡಿಯೋ ಕಾನ್ಫರೆನ್ಸ್‌ ವೇಳೆ ಅಶ್ಲೀಲ ಚಿತ್ರ ಪ್ರದರ್ಶನ: ಎಫ್‌ಐಆರ್‌ ದಾಖಲು

Date:

ಕರ್ನಾಟಕ ಹೈಕೋರ್ಟ್‌ನ ವಿವಿಧ ಕೋರ್ಟ್‌ ಹಾಲ್‌ಗಳ ವಿಡಿಯೋ ಕಾನ್ಫರೆನ್ಸ್‌ ವಿಚಾರಣೆಯ ವೇಳೆ ಅಶ್ಲೀಲ ಚಿತ್ರ ಪ್ರದರ್ಶನಗೊಂಡ ಆರೋಪಕ್ಕೆ ಸಂಬಂಧಿಸಿದಂತೆ ಅನಾಮಿಕರ ವಿರುದ್ಧ ಮಂಗಳವಾರ ಎಫ್‌ಐಆರ್‌ ದಾಖಲಾಗಿದೆ.

ಹೈಕೋರ್ಟ್‌ ಕಂಪ್ಯೂಟರ್ಸ್‌ ರಿಜಿಸ್ಟ್ರಾರ್‌ ಕಚೇರಿಯ ಎನ್‌ ಸುರೇಶ್‌ ಅವರು ನೀಡಿದ ದೂರಿನ ಅನ್ವಯ ಅನಾಮಿಕರ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯಿದೆ ಸೆಕ್ಷನ್‌ಗಳಾದ 67 ಮತ್ತು 67(ಎ) ಅಡಿ ಕೇಂದ್ರೀಯ ಸೈಬರ್ ಅಪರಾಧ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಕರ್ನಾಟಕ ಹೈಕೋರ್ಟ್‌ನ 6, 12, 18, 23, 24, 26 ಮತ್ತು ಇತರೆ ಹಾಲ್‌ಗಳಲ್ಲಿ ನ್ಯಾಯಮೂರ್ತಿಗಳು ಕಲಾಪ ನಡೆಸುತ್ತಿದ್ದಾಗ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಹಾಜರಾದ ಅಪರಿಚಿತರು, ಅಶ್ಲೀಲ ಚಿತ್ರಗಳನ್ನು ಪ್ರದರ್ಶಿಸಿ, ನ್ಯಾಯಾಲಯದ ಕಲಾಪಕ್ಕೆ ಅಡ್ಡಿಪಡಿಸಿದ್ದಾರೆ. ಅಪರಿಚಿತ ಆಸಾಮಿಗಳ ಐಪಿ ವಿಳಾಸಕ್ಕೆ ಸಂಬಂಧಿಸಿದ ಮಾಹಿತಿ ಪಡೆದು ಕ್ರಮ ಕೈಗೊಳ್ಳಬೇಕು ಎಂದು ಸೈಬರ್ ಪೊಲೀಸರಿಗೆ ಸಲ್ಲಿಸಲಾದ ದೂರಿನಲ್ಲಿ ಕೋರಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಮಧ್ಯೆ, ಈ ಘಟನೆಯು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್‌ ಬೆಂಗಳೂರು, ಧಾರವಾಡ ಮತ್ತು ಕಲಬುರ್ಗಿ ಪೀಠದಲ್ಲಿನ ಕೋರ್ಟ್‌ಗಳ ವಿಡಿಯೋ ಕಾನ್ಫರೆನ್ಸ್‌ ಮತ್ತು ಲೈವ್‌ ಸ್ಟ್ರೀಮಿಂಗ್‌ ಅನ್ನು ನಿರ್ಬಂಧಿಸಿದೆ.

ಮಾಧ್ಯಮದವರಿಗೆ ತೊಂದರೆಯಾಗಬಹುದು: ಮುಖ್ಯ ನ್ಯಾಯಮೂರ್ತಿ ಪಿ ಬಿ ವರಾಳೆ

ಈ ಸಂಬಂಧ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ, “ನಾವು ಎಲ್ಲ ಲೈವ್‌ ಸ್ಟ್ರೀಮಿಂಗ್‌ಗಳನ್ನು ನಿರ್ಬಂಧಿಸುತ್ತಿದ್ದೇವೆ. ವಿಡಿಯೋ ಕಾನ್ಫರೆನ್ಸ್‌ಗೂ ಅವಕಾಶ ಇರುವುದಿಲ್ಲ. ದುರದೃಷ್ಟವಶಾತ್‌ ತಂತ್ರಜ್ಞಾನ ದುರ್ಬಳಕೆ ಅಥವಾ ಕೆಲವರಿಂದ ಅನುಚಿತ ವರ್ತನೆ ನಡೆದಿದೆ. ಇದು ಅನಿರ್ಬಂಧಿತ ಪರಿಸ್ಥಿತಿಯಾಗಿದೆ. ಇದೆಲ್ಲದರ ನಡುವೆ ಕರ್ನಾಟಕ ಹೈಕೋರ್ಟ್‌ ಸಾರ್ವಜನಿಕರ ಹಿತದೃಷ್ಟಿಯಿಂದ ವಿಸ್ತೃತ ನೆಲೆಯಲ್ಲಿ ತಂತ್ರಜ್ಞಾನ ಬಳಕೆ ಮಾಡುವುದರ ಪರವಾಗಿ ಕರ್ನಾಟಕ ಹೈಕೋರ್ಟ್‌ ಇರಲಿದೆ. ವ್ಯವಸ್ಥೆಯ ಹಿತಾಸಕ್ತಿಯ ದೃಷ್ಟಿಯಿಂದ ಈ ನಿರ್ಧಾರ ಮಾಡಲಾಗಿದೆ. ಮಾಧ್ಯಮದವರಿಗೆ ವಿಚಾರ ತಿಳಿಸಿ. ನಮ್ಮ ನಿರ್ಧಾರದಿಂದ ತೊಂದರೆಯಾಗಬಹುದು. ಆದರೂ ನಮಗೆ ಸಹಕರಿಸಿ” ಎಂದು ಕೋರಿದ್ದರು.

ಆನಂತರ ಹೈಕೋರ್ಟ್‌ನ ರಿಜಿಸ್ಟ್ರಾರ್‌ ಜನರಲ್‌ ಕೆ ಎಸ್‌ ಭರತ್‌ ಕುಮಾರ್‌ ಅವರು “ಸೈಬರ್‌ ಭದ್ರತಾ ಕಾರಣಗಳಿಗಾಗಿ ಬೆಂಗಳೂರು, ಧಾರವಾಡ ಮತ್ತು ಕಲಬುರ್ಗಿ ಪೀಠಗಳಲ್ಲಿನ ಎಲ್ಲಾ ಕಡೆ ವಿಡಿಯೊ ಕಾನ್ಫರೆನ್ಸ್‌ ಸೇವೆಯನ್ನು ಸದ್ಯಕ್ಕೆ ಅಮಾನತು ಮಾಡಲಾಗಿದೆ” ಎಂದು ಮಾಹಿತಿ ನೀಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...