ಬಿಸಿಲಿನಿಂದ ಬೆಂದಿದ್ದ ಬೆಂಗಳೂರಿನ ಜನತೆಗೆ ಕೊನೆಗೂ ತಂಪೆರೆದ ಮಳೆ: ಕೆಲವೆಡೆ ಟ್ರಾಫಿಕ್ ಜಾಮ್

Date:

ಬಿಸಿಲಿನಿಂದ ಕಂಗೆಟ್ಟಿದ್ದ ಸಿಲಿಕಾನ್ ಸಿಟಿಯ ಜನತೆಗೆ ಕೊನೆಗೂ ಮಳೆರಾಯ ತಂಪೆರೆದಿದ್ದಾನೆ. ಗುರುವಾರ ರಾತ್ರಿಯಾಗುತ್ತಿದ್ದಂತೆಯೇ ರಾಜಧಾನಿಯ ಕೆಲವು ಕಡೆಗಳಲ್ಲಿ ಮಳೆಯಾಗಿತ್ತು.

ನಿನ್ನೆ ಸುರಿದ 15 ರಿಂದ 20 ನಿಮಿಷ ಮಳೆಯಿಂದ ಮತ್ತೆ ತಾಪಮಾನ, ಸೆಖೆ ಹೆಚ್ಚಾಗಿತ್ತು. ತಾಪಮಾನ ಏರಿಕೆ ಮತ್ತು ಸೆಖೆ ಹೆಚ್ಚಾಗುವ ಬಗ್ಗೆ ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದರು. ಬೆಂಗಳೂರಿನಲ್ಲಿ ನಿನ್ನೆ 2.4 ಮಿ.ಮೀ ಮಳೆಯಷ್ಟೇ ಆಗಿತ್ತು.

ಇಂದು ಬೆಂಗಳೂರು ನಗರದ ಹಲವಡೆ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ಬಿಸಿಲ ಬೇಗೆಗೆ ತತ್ತರಿಸಿದ ಉದ್ಯಾನನಗರಿಗೆ ತಂಪೆರೆದಿದೆ. ಬೆಂಗಳೂರು ಉತ್ತರ, ದಕ್ಷಿಣ ಭಾಗದ ಹಲವೆಡೆ ತುಂತುರು ಮಳೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂದು ಮಧ್ಯಾಹ್ನದ ವೇಳೆ ಕೆಲವು ಕಡೆಗಳಲ್ಲಿ ಮೋಡ ಕವಿದ ವಾತಾವರಣ ಇತ್ತು. ಇದೀಗ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿದೆ. ವಿಧಾನಸೌಧ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದೆ. ಮೆಜೆಸ್ಟಿಕ್, ಕೆ.ಆರ್ ಸರ್ಕಲ್, ಕೆ.ಆರ್ ಮಾರ್ಕೆಟ್, ಟೌನ್ ಹಾಲ್, ರಿಚ್ಮಂಡ್ ಸರ್ಕಲ್, ಎಂಜಿ ರಸ್ತೆ, ಯಶವಂತಪುರ, ಗೋವರ್ಧನ, ಜಾಲಹಳ್ಳಿ ಕ್ರಾಸ್, ನಾಗರಬಾವಿ, ವಿಜಯನಗರ ಸುತ್ತಮುತ್ತ ಮಳೆಯಾಗುತ್ತಿದೆ.

ಮಧ್ಯಾಹ್ನವೇ ಆರಂಭವಾಗಿರುವ ಭರ್ಜರಿ ಮಳೆಯಿಂದ ರಾಜಾಜಿನಗರ, ಮಲ್ಲೇಶ್ವರಂ, ರೇಸ್ ಕೋರ್ಸ್ ಸೇರಿ ಹಲವೆಡೆ ಮಳೆ ಸುರಿದಿದೆ. ಈ ಭಾಗದಲ್ಲಿ ಮಳೆಯಿಂದಾಗಿ ಟ್ರಾಫಿಕ್ ಜಾಮ್ ಉಂಟಾಗಿದೆ. ಇನ್ನು ಮೋಡ ಕವಿದ ವಾತಾವರಣ ಮುಂದುವರಿದಿದ್ದು ರಾತ್ರಿ ಕೂಡ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ.

ಎಲ್ಲೆಲ್ಲಿ ಮಳೆ?

ಬೆಂಗಳೂರು ನಗರದ ಕಂಟೋನ್ಮೆಂಟ್, ರಾಜಾಜಿನಗರ, ಮಲ್ಲೇಶ್ವರಂ, ವಸಂತ ನಗರ, ಬಾಣಸವಾಡಿ, ಎಚ್‌ಬಿಆರ್ ಲೇಔಟ್, ಕಮ್ಮನಹಳ್ಳಿ, ಲಿಂಗರಾಜಪುರ, ಬಿಟಿಎಂ ಲೇಔಟ್, ಜಯನಗರ, ಬಸವೇಶ್ವರನಗರ, ಕಾಮಾಕ್ಷಿಪಾಳ್ಯ, ಕೆಂಗೇರಿ, ನಾಯಂಡಹಳ್ಳಿ, ರಾಜಾಜಿನಗರ, ಶ್ರೀರಾಮ್‌ಪುರ, ಮಹಾಕವಿ ಕುವೆಂಪು ರಸ್ತೆ, ಸದಾಶಿವನಗರ, ವೈಟ್‌ಫೀಲ್ಡ್, ಶಿವಾಜಿನಗರ, ಹೆಬ್ಬಾಳ, ಮತ್ತಿಕೆರೆ, ಬೊಮ್ಮಸಂದ್ರ, ಎಲೆಕ್ಟ್ರಾನಿಕ್ ಸಿಟಿ, ಕೊತ್ನೂರು, ರಾಜರಾಜೇಶ್ವರಿ ನಗರ, ಉತ್ತರಹಳ್ಳಿ ಸೇರಿದಂತೆ ಇಂದು ಮಧ್ಯಾಹ್ನ ಕೆಲಹೊತ್ತು ಮಳೆಯಾಗಿದೆ.

ಸೋಷಿಯಲ್ ಮೀಡಿಯಾಲ್ಲಿ ಟ್ರೆಂಡಿಂಗ್ ಆದ ಬೆಂಗಳೂರು ಮಳೆ!

ಬೆಂಗಳೂರಲ್ಲಿ ಇಂದು ಮಧ್ಯಾಹ್ನ ಸುರಿದ ಮಳೆಗೆ ಬೆಂಗಳೂರಿನ ಜನತೆಗೆ ಒಂಚೂರು ನೆಮ್ಮದಿ ತಂದಿದೆ. ಮಳೆಯ ಫೋಟೋ, ವಿಡಿಯೋಗಳನ್ನು ಜನರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

#BengaluruRains ಅನ್ನೋ ಹ್ಯಾಷ್‌ಟ್ಯಾಗ್‌ ಜೊತೆಗೆ ಮಳೆಯ ವಿಡಿಯೋಗಳನ್ನು ವೈರಲ್ ಮಾಡಲಾಗುತ್ತಿದೆ. ಪುಟ್ಟ ಮಕ್ಕಳು ಮೊದಲ ಮಳೆಯಲ್ಲೇ ಮೈ ಒದ್ದೆ ಮಾಡಿಕೊಂಡು ಖುಷಿ ಪಡುತ್ತಿದ್ದಾರೆ.

ಮೊದಲ ಮಳೆಗೆ ಟ್ರಾಫಿಕ್ ಜಾಮ್

ಮೊದಲ ಮಳೆಗೆ ಹಲವು ಕಡೆಯ ರಸ್ತೆಗಳಲ್ಲಿ ವಿಪರೀತ ನೀರು ನಿಂತ ಪರಿಣಾಮ ಟ್ರಾಫಿಕ್ ಜಾಮ್ ಉಂಟಾಗಿದೆ. ಮಳೆಯಿಂದಾದ ಟ್ರಾಫಿಕ್ ಜಾಮ್ ಬಗ್ಗೆ ಬೆಂಗಳೂರು ನಗರ ಸಂಚಾರ ಪೊಲೀಸರು ಸೋಷಿಯಲ್ ಮೀಡಿಯಾ ಮೂಲಕ ಮಾಹಿತಿ ನೀಡುತ್ತಿದ್ದಾರೆ.

“ಮಾನ್ಯತಾ ಬಳಿ ರಸ್ತೆಯಲ್ಲಿ ನೀರು ನಿಂತಿರುವುದರಿಂದ. ನಾಗವರ ಜಂಕ್ಷನ್ ಕಡೆಗೆ ನಿಧಾನಗತಿಯ ಸಂಚಾರ ವಿರುತ್ತದೆ, ದಯಮಾಡಿ ಸಹಕರಿಸಿ” ಎಂದು ರಸ್ತೆಯಲ್ಲಿ ನೀರು ನಿಂತಿರುವ ಫೋಟೋವನ್ನು ಟ್ರಾಫಿಕ್ ಪೊಲೀಸರು ಹಂಚಿಕೊಂಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

37 ಸಾವಿರ ಕೋಟಿ ಗುತ್ತಿಗೆ ಹಣ ಬಾಕಿ; ತಕ್ಷಣ ಬಿಡುಗಡೆಗೆ ಒತ್ತಾಯಿಸಿ ಪ್ರತಿಭಟನೆ

ರಾಜ್ಯ ಸರಕಾರ ವಿವಿಧ ಇಲಾಖೆಗಳಿಂದ ಗುತ್ತಿಗೆದಾರರಿಗೆ ಬರಬೇಕಾದ ಬಾಕಿ ಮೊತ್ತ 37,370...

ಕರ್ನಾಟಕ ಶಾಲಾ ಶಿಕ್ಷಣದ ಸ್ಥಿತಿಗತಿ ಕುರಿತ ಒಂದು ದಿನದ ವಿಚಾರ ಸಂಕಿರಣ: ಒಮ್ಮತದ ನಿರ್ಣಯ

ಒಂದು ಸಮಗ್ರ ನೀತಿಯು ಅಸ್ತಿತ್ವದಲ್ಲಿಲ್ಲದಿದ್ದಾಗ ನೀತಿ, ಕಾರ್ಯಕ್ರಮ, ತೀರ್ಮಾನಗಳು ಸಂವಿಧಾನ ಹಾಗೂ...

ಬಸವಕಲ್ಯಾಣದಲ್ಲಿ ವಚನ ವಿಶ್ವವಿದ್ಯಾಲಯ ಸ್ಥಾಪಿಸಿ : ಮಠಾಧಿಪತಿಗಳ ಒಕ್ಕೂಟದಿಂದ ಸಿಎಂಗೆ ಮನವಿ

ವಿಶ್ವಕ್ಕೆ ಪ್ರಜಾಪ್ರಭುತ್ವದ ಪರಿಕಲ್ಪನೆ ನೀಡಿದ ಬೀದರ್ ಜಿಲ್ಲೆಯ ಬಸವಕಲ್ಯಾಣ ನೆಲದಲ್ಲಿ ಸಾರ್ವಜನಿಕ...