ಶಿವಾಜಿನಗರ | ಕುಸಿದುಬಿದ್ದ ಬಿಬಿಎಂಪಿ ನರ್ಸರಿ ಶಾಲೆ ಕಟ್ಟಡ; 80 ಮಕ್ಕಳು ಅಪಾಯದಿಂದ ಪಾರು

Date:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ನರ್ಸರಿ ಶಾಲೆ ಕಟ್ಟಡವೊಂದು ನ.27ರ ಬೆಳಗಿನ ಜಾವ ಕುಸಿದು ಬಿದ್ದಿದೆ.

ಬೆಂಗಳೂರಿನ ಶಿವಾಜಿನಗರದ ಕುಕ್ಸ್ ರೋಡ್‌ನ ಬಿ ಕ್ರಾಸ್‌ನಲ್ಲಿರುವ ಬಿಬಿಎಂಪಿಯ ನರ್ಸರಿ ಶಾಲೆ ಕುಸಿದು ಬಿದ್ದಿದೆ. ಈ ಶಾಲೆಯಲ್ಲಿ 90ಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ನಿತ್ಯ 75 ರಿಂದ 80 ಮಕ್ಕಳು ಶಾಲೆಗೆ ಬರುತ್ತಿದ್ದವು.

ಈ ಅವಘಡ ನಡೆಯುವುದಕ್ಕೂ ನರ್ಸರಿ ಶಾಲೆ ಆರಂಭವಾಗುವುದಕ್ಕೂ ಕೆಲವೇ ಗಂಟೆಗಳ ವ್ಯತ್ಯಾಸವಿತ್ತು. ಬೆಳಗಿನ ಜಾವ ಈ ಕಟ್ಟಡ ಕುಸಿದಾಗ ಕಟ್ಟಡದಲ್ಲಿ ಯಾರು ಇರಲಿಲ್ಲ. ಇದರಿಂದ 80ಕ್ಕೂ ಹೆಚ್ಚು ಮಕ್ಕಳು, ಶಿಕ್ಷಕರು ಅಪಾಯದಿಂದ ಪಾರಾಗಿದ್ದಾರೆ. ಆದರೆ, ಶಾಲಾ ಆವರಣದಲ್ಲಿ ನಿಲ್ಲಿಸಿದ್ದ ಹತ್ತಾರು ವಾಹನಗಳು ಕಟ್ಟಡ ಅವಶೇಷಗಳಡಿ ಸಿಲುಕಿ ನಜ್ಜುಗುಜ್ಜಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ಥಳೀಯರ ಆಕ್ರೋಶ

“ಈ ಕಟ್ಟಡ ಬೆಳಗಿನ ಜಾವ ಬಿದ್ದಿದ್ದರಿಂದ ಶಾಲೆಯಲ್ಲಿ ಯಾವ ಮಕ್ಕಳು ಇರಲಿಲ್ಲ. ಅದೃಷ್ಟವಶಾತ್ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಶಾಲೆಯಲ್ಲಿ 80ಕ್ಕೂ ಹೆಚ್ಚು ಮಕ್ಕಳು ನರ್ಸರಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಒಂದು ವೇಳೆ ಶಾಲಾ ಸಮಯದಲ್ಲಿ ಕಟ್ಟಡ ಕುಸಿದಿದ್ದರೆ ಮಕ್ಕಳ ಗತಿ ಏನು? ಅಪಾಯ ಜರುಗಿದ್ದರೆ ಇದಕ್ಕೆ ಯಾರು ಹೊಣೆ? ಈ ಕಟ್ಟಡ ಬೀಳುವ ಸ್ಥಿತಿಯಲ್ಲಿದ್ದರೂ ಸಹ ಇಲ್ಲೇ ಶಾಲೆ ನಡೆಸುತ್ತಿರುವುದು ಎಷ್ಟು ಸರಿ?” ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಶಾಲೆಗೆ ಸುಮಾರು 75 ವರ್ಷಗಳ ಇತಿಹಾಸವಿದ್ದು, ಬಹಳ ವರ್ಷಗಳಿಂದಲೇ ಈ ಕಟ್ಟಡ ಕುಸಿಯುವ ಭೀತಿಯಲ್ಲಿತ್ತು. ಇದು ಬಿಬಿಎಂಪಿಗೆ ಸೇರಿದ ಇಂಗ್ಲಿಷ್ ಶಾಲೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಡಿ. 2ರಿಂದ ಮೂರು ದಿನ ಮಲ್ಲೇಶ್ವರದಲ್ಲಿ ಕಡಲೆಕಾಯಿ ಪರಿಷೆ

ಬಿಬಿಎಂಪಿಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಜೆಸಿಬಿ ಕಟ್ಟಡದ ಅವಶೇಷಗಳ ತೆರವು ಕಾರ್ಯ ನಡೆಸಿದೆ. ಇನ್ನು ವಾಹನಗಳಿಗೆ ಹಾನಿಯಾಗಿದ್ದರಿಂದ ಮಾಲೀಕರು ಕಂಗಾಲಾಗಿದ್ದಾರೆ.

“ಈ ಶಾಲೆಯಲ್ಲಿ ಕಲಿಯುತ್ತಿದ್ದ ಶಾಲಾ ಮಕ್ಕಳಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗುವುದು” ಎಂದು ಕಾಂಗ್ರೆಸ್ ನಾಯಕ ರಿಜ್ವಾನ್ ಅರ್ಷದ್ ಭರವಸೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...