ರಾಜ್ಯ ಒಕ್ಕಲಿಗರ ಸಂಘದೊಳಗಿನ ಕಿತ್ತಾಟಕ್ಕೆ ಹೈಕೋರ್ಟ್‌ ತೀವ್ರ ಬೇಸರ

Date:

  • ಕುದುರೆ ವ್ಯಾಪಾರ ಮೆರೆದಾಡುತ್ತಿದ್ದು, ಇದನ್ನೆಲ್ಲ ಹೇಳಲು ನನಗೆ ನಾಚಿಕೆ: ನ್ಯಾ. ಸಂದೇಶ್‌
  • ಒಕ್ಕಲಿಗರ ಸಂಘವು ಜು.17ರ ವರೆಗೆ ಯಾವುದೇ ಸಭೆ ನಡೆಸದಂತೆ ಹೈಕೋರ್ಟ್‌ ಸೂಚನೆ

ರಾಜ್ಯ ಒಕ್ಕಲಿಗರ ಸಂಘದೊಳಗಿನ ಕಿತ್ತಾಟಕ್ಕೆ ಸಂಬಂಧಿಸಿದಂತೆ, “ದೇಶದ ವ್ಯವಸ್ಥೆ ಕುಲಗೆಟ್ಟು ಹೋಗಿದ್ದು, ಎಲ್ಲೆಡೆ ಕುದುರೆ ವ್ಯಾಪಾರ ಮೆರೆದಾಡುತ್ತಿದೆ. ಇದನ್ನೆಲ್ಲ ಹೇಳಲು ನನಗೆ ನಾಚಿಕೆಯಾಗುತ್ತಿದೆ” ಎಂದು ಹೈಕೋರ್ಟು ನ್ಯಾಯಮೂರ್ತಿ ಎಚ್‌ ಪಿ ಸಂದೇಶ್‌ ಬೇಸರ ವ್ಯಕ್ತಪಡಿಸಿದ್ದಾರೆ.

ಸಿ.ಎನ್.ಬಾಲಕೃಷ್ಣ ಮತ್ತು ಕೋನಪ್ಪ ರೆಡ್ಡಿ ನೇತೃತ್ವದ ಕಾರ್ಯಕಾರಿ ಸಮಿತಿ ವಿರುದ್ಧ ಕೆಂಚಪ್ಪಗೌಡರ ಗುಂಪು 2023ರ ಮೇ 9ರಂದು ಅವಿಶ್ವಾಸ ನಿರ್ಣಯ ಮಂಡಿಸಿ, ನಂತರ ಚುನಾವಣೆ ನಡೆಸಿ ಅಧಿಕಾರ ಪಡೆದದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅಸಲು ದಾವೆಯಲ್ಲಿನ ಮಧ್ಯಂತರ ಅರ್ಜಿಯನ್ನು ವಜಾಗೊಳಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್‌ ರದ್ದುಪಡಿಸಿ, ಒಕ್ಕಲಿಗರ ಸಂಘವು ಜುಲೈ 17ರ ವರೆಗೆ ಯಾವುದೇ ಸಭೆ ನಡೆಸುವುದು ಮತ್ತು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳದಂತೆ ಆದೇಶಿಸಿದೆ.

ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಬಿ.ಕೆಂಚಪ್ಪಗೌಡ ಅಧ್ಯಕ್ಷತೆಯಲ್ಲಿ ನಡೆಯಬೇಕಿದ್ದ ಸಂಘದ ಕಾರ್ಯಕಾರಿ ಸಮಿತಿ ಸಭೆಯನ್ನು ಪ್ರಶ್ನಿಸಿ ಸಂಘದ ಸದಸ್ಯರಾದ ಹಾಸನ ಜಿಲ್ಲೆಯ ಸಂಕ್ಲಾಪುರದ ಎಸ್‌.ಎಸ್‌.ರಘುಗೌಡ, ಸೇರಿದಂತೆ ನಾಲ್ವರು ಸದಸ್ಯರು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆಂಚಪ್ಪಗೌಡರ ಪರ ಹಾಜರಾಗಿದ್ದ ಹಿರಿಯ ವಕೀಲ ಡಿ.ಆರ್.ರವಿಶಂಕರ್ ಅವರು ವಾದಮಂಡಿಸಿ, “ಉಭಯ ಬಣಗಳು 17ರವರೆಗೆ ಯಾವುದೇ ಸಭೆ ಹಾಗೂ ನಿರ್ಧಾರ ತೆಗೆದುಕೊಳ್ಳದಂತೆ ನಿರ್ದೇಶಿಸಬೇಕು. ಇಲ್ಲದಿದಲ್ಲಿ ಇದು ರೆಸಾರ್ಟ್ ರಾಜಕೀಯಕ್ಕೆ ದಾರಿ ಮಾಡಿಕೊಡುತ್ತದೆ’ ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದ್ದರು.

ಮನವಿ ಪರಿಗಣಿಸಿದ ನ್ಯಾಯಮೂರ್ತಿ ಎಚ್‌ ಪಿ ಸಂದೇಶ ಅವರು, ಹೈಕೋರ್ಟ್‌ ಮೆಟ್ಟಿಲೇರಿರುವ ಸದಸ್ಯರನ್ನು ಹೊರತುಪಡಿಸಿ ಉಳಿದ ಸದಸ್ಯರಿಗೆ ಪೂರ್ವ ನೋಟಿಸ್ ನೀಡಿ ಅವಿಶ್ವಾಸ ನಿರ್ಣಯ ಮಂಡಿಸುವಂತೆ ನಿರ್ದೇಶಿಸಿ ವಿಚಾರಣೆಯನ್ನು ಜು. 17ಕ್ಕೆ ಮುಂದೂಡಿದರು.

ಸಂಘದ ನಡೆ ಬಗ್ಗೆ ಅಸಮಾಧಾನ

ಒಕ್ಕಲಿಗರ ಸಂಘದ ಕುರಿತು ಪ್ರತಿಕ್ರಿಯಿಸಿರುವ ಪೀಠ, “ಸಂಘದಲ್ಲಿ ಮೆಡಿಕಲ್ ಸೀಟುಗಳನ್ನು ಅನಿವಾಸಿ ಭಾರತೀಯರಿಗೆ ಕೋಟಿಗಟ್ಟಲೇ ರೂಪಾಯಿಗಳಿಗೆ ಮಾರಿಕೊಳ್ಳಲಾಗುತ್ತಿದೆ. ಇದಕ್ಕಾಗಿಯೇ ಈ ಕುಸ್ತಿ ನಡೆಯುತ್ತಿದೆ. 1904ರಲ್ಲಿ ಸ್ಥಾಪನೆಗೊಂಡ ಈ ಸಂಘದ ಮೂಲ ಉದ್ದೇಶಗಳೇ ಇಂದು ಮರೆಯಾಗಿವೆ. ಸಂಘದ ಸದಸ್ಯರ ಆತ್ಮಾವಲೋಕನಕ್ಕೆ ಇದು ಸಕಾಲವಾಗಿದೆ” ಎಂದು ನ್ಯಾಯಮೂರ್ತಿಗಳು ಉಚ್ಛರಿಸಿದರು.

“ನನ್ನ ಮಗಳಿಗೆ ಕಿಮ್ಸ್‌ನಲ್ಲಿ (ಕೆಂಪೇಗೌಡ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ) ವೈದ್ಯಕೀಯ ಪದವಿಗೆ ಸೇರಿಸುವಂತೆ ನನ್ನನ್ನು ಬಲ್ಲವರೊಬ್ಬರು ಸಲಹೆ ನೀಡಿದ್ದರು. ಆದರೆ, ಸಂಘದೊಳಗಿನ ಕಿತ್ತಾಟ ನೋಡಿ ಇವರ ಸಹವಾಸವೇ ಬೇಡ ಎಂದು ಕಿಮ್ಸ್‌ನಿಂದ ದೂರ ಉಳಿದೆ” ಎಂದು ತಮ್ಮ ಅನುಭವ ಹಂಚಿಕೊಂಡರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...