ಮಾಹಿತಿ ಆಯೋಗದ ವೆಬ್‌ಸೈಟ್‌ನಲ್ಲಿ ಪಾರದರ್ಶಕತೆ ಮರೆ: ನಿಗದಿತ ಸಮಯದ ಬಳಿಕ ಮಾಹಿತಿ ಲಾಕ್

Date:

ಪಾರದರ್ಶಕತೆ ಮತ್ತು ಹೊಣೆಗಾರಿಕೆಯ ಸಂಕೇತವಾಗಿ ಅಸ್ತಿತ್ವಕ್ಕೆ ಬಂದಿರುವ ಕರ್ನಾಟಕ ಮಾಹಿತಿ ಆಯೋಗ(KIC) ಇದೀಗ ಸ್ವತಃ ಪಾರದರ್ಶಕತೆ ಕೊರತೆಯ ಆರೋಪಕ್ಕೆ ಗುರಿಯಾಗಿದೆ. ಆಯೋಗದ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕರಣ ಸಂಖ್ಯೆ ಇದ್ದರೂ ಕೂಡ ಅನೇಕ ಪ್ರಕರಣಗಳ ವಿವರಗಳು ಲಭ್ಯವಾಗದಿರುವುದು ಹಾಗೂ ನಿಗದಿತ ಸಮಯದ ಹೊರತಾಗಿ ವೆಬ್‌ಸೈಟ್ ಬಳಕೆಗೆ ಅಡ್ಡಿ ಉಂಟಾಗುತ್ತಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಮಾಹಿತಿ ಆಯೋಗದ ವೆಬ್‌ಸೈಟ್‌ನಲ್ಲಿ ಅನೇಕ ಮೇಲ್ಮನವಿಗಳು ಮತ್ತು ದೂರುಗಳ ವಿವರಗಳನ್ನು ಪರಿಶೀಲಿಸಲು ಪ್ರಯತ್ನಿಸಿದಾಗ, ʼDetails are not availableʼ ಎಂಬ ಒಂದೇ ಸಾಲಿನ ಉತ್ತರ ಕಾಣಿಸಿಕೊಳ್ಳುತ್ತಿದೆ. ಕೇಸ್ ನಂಬರ್ ಇದ್ದರೂ ಆದೇಶದ ವಿವರ, ವಿಚಾರಣೆಯ ಸ್ಥಿತಿ ಅಥವಾ ಫಲಿತಾಂಶ ಯಾವುದೂ ಲಭ್ಯವಾಗದಿರುವುದು ಮೇಲ್ಮನವಿದಾರರನ್ನೇ ಗೊಂದಲಕ್ಕೆ ದೂಡಿದೆ.

ಮಾಹಿತಿ ಹಕ್ಕು ಹೋರಾಟಗಾರ ಸಿ ಪಿ ತಿಪ್ಪೇಸ್ವಾಮಿ ಈ ಕುರಿತು ಆಯೋಗದ ಅಧೀನ ಕಾರ್ಯದರ್ಶಿಗಳಿಗೆ ಜನವರಿ 16ರಂದು ಅಧಿಕೃತ ದೂರು ಸಲ್ಲಿಸಿದ್ದಾರೆ. ಅವರ ಪ್ರಕಾರ, ವೆಬ್‌ಸೈಟ್ ಬೆಳಿಗ್ಗೆ ಸುಮಾರು 11ರ ಬಳಿಕ ಕಾರ್ಯನಿರ್ವಹಿಸುತ್ತಿದೆ.
ಸಂಜೆ 5:30ರ ನಂತರ ಪ್ರಕರಣಗಳ ವೀಕ್ಷಣೆಗೆ ಸಾಧ್ಯವಾಗುತ್ತಿಲ್ಲ. ಇದು ಯಾವುದೇ ಸರ್ಕಾರಿ ನಿಯಮಾವಳಿಗೂ ಹೊಂದಿಕೆಯಾಗುವುದಿಲ್ಲ. ʼಸಾರ್ವಜನಿಕ ಮಾಹಿತಿ ವ್ಯವಸ್ಥೆ ದಿನದ 24 ಗಂಟೆಯೂ ಲಭ್ಯವಿರಬೇಕುʼ ಎಂಬ ಮೂಲ ತತ್ವವನ್ನೇ ಇದು ಉಲ್ಲಂಘಿಸುತ್ತದೆ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಹಿತಿ ಹಕ್ಕು ಕಾಯಿದೆ 2005 ಪಾರದರ್ಶಕತೆ, ಹೊಣೆಗಾರಿಕೆ ಮತ್ತು ಸಾರ್ವಜನಿಕ ನಿಗಾವನ್ನು ಗುರಿಯಾಗಿಟ್ಟುಕೊಂಡಿದೆ. ಆದರೆ, ಮಾಹಿತಿಯನ್ನು ಜಾರಿಗೆ ತರಬೇಕಾದ ಆಯೋಗವೇ ತನ್ನ ಡಿಜಿಟಲ್ ವೇದಿಕೆಯಲ್ಲಿ ಮಾಹಿತಿಯನ್ನು ಭಾಗಶಃ ಅಥವಾ ಸಮಯಾಧಾರಿತವಾಗಿ ‘ಲಾಕ್’ ಮಾಡುತ್ತಿರುವುದು ಕಾಯಿದೆಯ ಮೂಲ ಆಶಯಕ್ಕೆ ವಿರುದ್ಧವಾಗಿದೆ ಎಂಬ ಟೀಕೆಗಳು ಕೇಳಿಬರುತ್ತಿವೆ.

ಇದು ಕೇವಲ ತಾಂತ್ರಿಕ ದೋಷವೇ ಅಥವಾ ಕೆಲವು ಪ್ರಕರಣಗಳ ವಿವರಗಳು ಸಾರ್ವಜನಿಕರಿಗೆ ತಲುಪದಂತೆ ಮಾಡುವ ಉದ್ದೇಶಿತ ಕ್ರಮವೇ ಎಂಬ ಪ್ರಶ್ನೆ ಈಗ ಸಾರ್ವಜನಿಕ ವಲಯದಲ್ಲಿ ತೀವ್ರವಾಗಿ ಚರ್ಚೆಯಾಗುತ್ತಿದೆ. ಭ್ರಷ್ಟ ಅಧಿಕಾರಿಗಳಿಗೆ ಅನುಕೂಲವಾಗುವಂತೆ ಮಾಹಿತಿಯನ್ನು ಮರೆಮಾಚಲಾಗುತ್ತಿದೆಯೇ ಎಂಬ ಸಂಶಯವೂ ವ್ಯಕ್ತವಾಗುತ್ತಿದೆ.

ಈ ಸುದ್ದಿ ಓದಿದ್ದೀರಾ? ಶ್ರೀರಂಗಪಟ್ಟಣ | ಉಚಿತ ಕೌಶಲ್ಯ ತರಬೇತಿ: ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ

ಈ ವಿಷಯದಲ್ಲಿ ಕರ್ನಾಟಕ ಮಾಹಿತಿ ಆಯೋಗದ ಮುಖ್ಯ ಮಾಹಿತಿ ಆಯುಕ್ತರು ಹಾಗೂ ರಾಜ್ಯ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಬೇಕು. ವೆಬ್‌ಸೈಟ್‌ನ ತಾಂತ್ರಿಕ ದೋಷಗಳನ್ನು ಸರಿಪಡಿಸಿ, ಎಲ್ಲ ಪ್ರಕರಣಗಳ ವಿವರಗಳನ್ನು ಸಂಪೂರ್ಣವಾಗಿ ಅಪ್‌ಲೋಡ್ ಮಾಡಬೇಕು. ದಿನದ 24 ಗಂಟೆಯೂ ಸಾರ್ವಜನಿಕರಿಗೆ ಮಾಹಿತಿ ಲಭ್ಯವಾಗುವಂತೆ ವ್ಯವಸ್ಥೆ ಕಲ್ಪಿಸಬೇಕು ಎಂದು ಮಾಹಿತಿ ಹಕ್ಕು ಹೋರಾಟಗಾರರು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...