ಬೆಂಗಳೂರಿನ ಈ ಪ್ರದೇಶದಲ್ಲಿ ವಾಹನ ಸಂಚಾರ ನಿಷೇಧ!

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಹೊಸದೇನಲ್ಲ ಎಂಬಂತೆ ಆಗಿದೆ. ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ವಿಶ್ವ ಮಟ್ಟದಲ್ಲಿ ಹೆಸರುವಾಸಿಯಾಗಿದೆ. ಜೆ.ಬಿ. ನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಕಗ್ಗದಾಸಪುರ ಮುಖ್ಯ ರಸ್ತೆಯ ವರ್ಸೋವಾ ಲೇಔಟ್ಬಳಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವತಿಯಿಂದ ಸೇತುವೆ ನಿರ್ಮಾಣ ಕಾಮಗಾರಿ ನಡೆಸುತ್ತಿದೆ. ಈ ಹಿನ್ನೆಲೆ, ಬೆಂಗಳೂರು ಸಂಚಾರ ಪೊಲೀಸರು ಟ್ರಾಫಿಕ್ ಸಮಸ್ಯೆಯನ್ನು ನಿಯಂತ್ರಿಸುವ ಸಲುವಾಗಿ ಕೆಲವು ಮಾರ್ಗಸೂಚಿ ನೀಡಿದ್ದಾರೆ.

“ಕಾಮಗಾರಿಯ ಸಮಯದಲ್ಲಿ ಪೂರ್ವಂಕರ ಅಪಾರ್ಟ್ಮೆಂಟ್‌ನಿಂದ ಕಗ್ಗದಾಸಪುರ ರೈಲ್ವೇ ಗೇಟ್ ಜಂಕ್ಷನ್ವರೆಗೆ ವಾಹನ ಸಂಚಾರವನ್ನು ನಿರ್ಬಂಧಿಸಿದ್ದು, ಕಗ್ಗದಾಸಪುರ ಮುಖ್ಯ ರಸ್ತೆಯಲ್ಲಿ ನಾಗವಾರ ಪಾಳ್ಯ ಕಡೆಯಿಂದ ಕಗ್ಗದಾಸಪುರ ರೈಲ್ವೇ ಗೇಟ್ ಸಂಚರಿಸುವ ಹಾಗೂ ಕಗ್ಗದಾಸಪುರ ರೈಲ್ವೇ ಗೇಟ್ ಕಡೆಯಿಂದ ನಾಗವಾರ ಪಾಳ್ಯ ಕಡೆಗೆ ಸಂಚರಿಸುವ ವಾಹನಗಳ ತಾತ್ಕಾಲಿಕ ಮಾರ್ಗ ಬದಲಾವಣೆ ಮಾಡಲಾಗಿದೆ” ಎಂದು ಬೆಂಗಳೂರು ಸಂಚಾರ ಪೊಲೀಸ್ ಮಾಹಿತಿ ನೀಡಿದೆ.

“ಕಾಮಗಾರಿಯ ಸಮಯದಲ್ಲಿ ಕಗ್ಗದಾಸಪುರ ಮುಖ್ಯ ರಸ್ತೆಯಲ್ಲಿ ನಾಗವಾರ ಪಾಳ್ಯ ಕಡೆಯಿಂದ ಕಗ್ಗದಾಸಪುರ ರೈಲ್ವೇ ಗೇಟ್ ಸಂಚರಿಸುವ ವಾಹನಗಳು ಪೂರ್ವಂಕರ ಅಪಾರ್ಟ್ಮೆಂಟ್ ಎದುರಿನ ಬೈರಸಂದ್ರ 5ನೇ ಕ್ರಾಸ್ ಜಂಕ್ಷನ್ನಲ್ಲಿ ಬಲ ತಿರುವು ಪಡೆದು, ಬೈರಸಂದ್ರ ಮುಖ್ಯ ರಸ್ತೆಯ ಮೂಲಕ ಜಿ.ಎಂ.ಪಾಳ್ಯ ಜಂಕ್ಷನ್ ಕಡೆಗೆ ಸಂಚರಿಸಲು ಅನುವು ಮಾಡಿಕೊಡಲಾಗಿದೆ” ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಗ್ಗದಾಸಪುರ ರೈಲ್ವೇ ಗೇಟ್ ಕಡೆಯಿಂದ ನಾಗವಾರ ಪಾಳ್ಯ ಕಡೆಗೆ ಸಂಚರಿಸುವ ವಾಹನಗಳು ಕಗ್ಗದಾಸಪುರ ರೈಲ್ವೇ ಗೇಟ್ ಜಂಕ್ಷನ್ನಲ್ಲಿ ಎಡ ತಿರುವು ಪಡೆದು ಕಗ್ಗದಾಸಪುರ ಮುಖ್ಯ ರಸ್ತೆ ವಿಜ್ಞಾನ ನಗರ ಜಂಕ್ಷನ್ಬಲತಿರುವು ಜಿ.ಎಂ ಪಾಳ್ಯ ಮುಖ್ಯ ರಸ್ತೆಬೆಮೆಲ್ ಜಂಕ್ಷನ್ ಬಲ ತಿರುವುಗೀತಾಂಜಲಿ ಲೇಔಟ್ ಜಂಕ್ಷನ್ ಬಲ ತಿರುವು ಪಡೆದು ಡಿ.ಆರ್.ಡಿ. ಮೂಲಕ ನಾಗವಾರ ಪಾಳ್ಯ ಕಡೆಗೆ ಸಂಚರಿಸಬಹುದು ಅಥವಾ ಜಿ.ಎಂ.ಪಾಳ್ಯ ಜಂಕ್ಷನ್ನಲ್ಲಿ ಬಲ ತಿರುವು ಪಡೆದು ಬೈರಸಂದ್ರ ಮುಖ್ಯ ರಸ್ತೆ ಮೂಲಕ ನಾಗವಾರ ಪಾಳ್ಯ ಕಡೆಗೆ ಸಂಚರಿಸಲು ಅನುವು ಮಾಡಿಕೊಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಭವಾನಿ ರೇವಣ್ಣ ವರ್ತನೆ ಮಾಜಿ ಪ್ರಧಾನಿ ಕುಟುಂಬಕ್ಕೆ ಶೋಭೆ ತರುವಂತದಲ್ಲ: ಬಿ.ಟಿ.ನಾಗಣ್ಣ

ಬಿಬಿಎಂಪಿ ಕೈಗೆತ್ತಿಕೊಂಡಿರುವ ನಿರ್ಮಾಣ ಕಾಮಗಾರಿ ಮುಗಿಯುವವರೆಗೂ ಪೂರ್ವಂಕರ ಅಪಾರ್ಟ್ಮೆಂಟ್ನಿಂದ ಕಗ್ಗದಾಸಪುರ ರೈಲ್ವೆ ಗೇಟ್ ನಿಲ್ದಾಣದವರೆಗೆ ಯಾವುದೇ ವಾಹನಗಳ ಸಂಚಾರಕ್ಕೆ ಅವಕಾಶ ಇರುವುದಿಲ್ಲ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...