ವಿಪ್ರೋ ಕ್ಯಾಂಪಸ್‌ ಮೂಲಕ ವಾಹನ ಸಂಚಾರಕ್ಕೆ ಅವಕಾಶ; ಸಿಎಂ ಮನವಿ ತಿರಸ್ಕರಿಸಿದ ಅಜೀಂ ಪ್ರೇಮ್‌ಜಿ

Date:

ಬೆಂಗಳೂರಿನ ಹೊರ ವರ್ತುಲ ರಸ್ತೆಯಲ್ಲಿ (ಒಆರ್‌ಆರ್‌) ಉಂಟಾಗುವ ತೀವ್ರ ಸಂಚಾರ ದಟ್ಟಣೆಯನ್ನು ಸರಾಗಗೊಳಿಸಲು ವಿಪ್ರೊ ಕಂಪನಿಯ ಸರ್ಜಾಪುರ ಕ್ಯಾಂಪಸ್‌ನ ಮೂಲಕ ಸೀಮಿತ ಸಾರ್ವಜನಿಕ ವಾಹನ ಸಂಚಾರಕ್ಕೆ ಅವಕಾಶ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ್ದ ಕೋರಿಕೆಯನ್ನು ವಿಪ್ರೊ ಸಂಸ್ಥಾಪಕ ಅಜೀಂ ಪ್ರೇಮ್‌ಜಿ ತಿರಸ್ಕರಿಸಿದ್ದಾರೆ.

ಮುಖ್ಯಮಂತ್ರಿಗಳಿಗೆ ಬರೆದ ಪತ್ರದಲ್ಲಿ ಪ್ರೇಮ್‌ಜಿ ಅವರು ಕಾನೂನು, ಆಡಳಿತ ಮತ್ತು ಶಾಸನಬದ್ಧ ತೊಡಕುಗಳನ್ನು ಉಲ್ಲೇಖಿಸಿದ್ದಾರೆ. “ಸರ್ಜಾಪುರ ಕ್ಯಾಂಪಸ್ ಖಾಸಗಿ ಆಸ್ತಿಯಾಗಿದ್ದು, ಜಾಗತಿಕ ಗ್ರಾಹಕರಿಗೆ ಸೇವೆ ಒದಗಿಸುವ ವಿಶೇಷ ಆರ್ಥಿಕ ವಲಯ (ಎಸ್‌ಇಜೆಡ್‌) ಭಾಗವಾಗಿದೆ. ಒಪ್ಪಂದದ ಷರತ್ತುಗಳು ಕಟ್ಟುನಿಟ್ಟಾದ ಪ್ರವೇಶ ನಿಯಂತ್ರಣವನ್ನು ಕಡ್ಡಾಯಗೊಳಿಸುತ್ತವೆ,” ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಜೊತೆಗೆ, ಕ್ಯಾಂಪಸ್‌ನಲ್ಲಿ ಸಾರ್ವಜನಿಕ ವಾಹನ ಸಂಚಾರಕ್ಕೆ ಅವಕಾಶ ನೀಡುವುದು ಸುಸ್ಥಿರ ಅಥವಾ ದೀರ್ಘಕಾಲೀನ ಪರಿಹಾರವಾಗಲಾರದು ಎಂದು ಅವರು ಒತ್ತಿ ಹೇಳಿದ್ದಾರೆ.

ಆದರೂ, ಬೆಂಗಳೂರಿನ ಸಂಚಾರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ವಿಪ್ರೊ ಕಂಪನಿಯು ರಾಜ್ಯ ಸರ್ಕಾರದೊಂದಿಗೆ ಸಹಕರಿಸಲು ಸಿದ್ಧವಿದೆ ಎಂದು ಪ್ರೇಮ್‌ಜಿ ಭರವಸೆ ನೀಡಿದ್ದಾರೆ. ಈ ಸಂಕೀರ್ಣ ಸಮಸ್ಯೆಗೆ ಒಂದೇ ಪರಿಹಾರ ಸಾಧ್ಯವಿಲ್ಲ ಎಂದು ಗುರುತಿಸಿರುವ ಅವರು, ನಗರ ಸಾರಿಗೆ ನಿರ್ವಹಣೆ ತಜ್ಞರ ನೇತೃತ್ವದಲ್ಲಿ ಸಮಗ್ರ ವೈಜ್ಞಾನಿಕ ಅಧ್ಯಯನವೊಂದನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ವಿರೋಧದ ನಡುವೆಯೂ ಕಾವೇರಿಗೆ ಕಾಂಗ್ರೆಸ್ಸಿಗರ ಮೊಂಡಾರತಿ

“ಈ ಅಧ್ಯಯನವು ತಾತ್ಕಾಲಿಕ, ಮಧ್ಯಮ ಮತ್ತು ದೀರ್ಘಕಾಲೀನ ಪರಿಹಾರಗಳನ್ನು ಒಳಗೊಂಡ ಸಮಗ್ರ ರೂಪರೇಷೆಯನ್ನು ರೂಪಿಸಲು ಸಹಾಯ ಮಾಡುತ್ತದೆ. ಈ ಪ್ರಕ್ರಿಯೆಯಲ್ಲಿ ಭಾಗಿಯಾಗಲು ಮತ್ತು ಅಧ್ಯಯನದ ವೆಚ್ಚದ ಗಣನೀಯ ಭಾಗವನ್ನು ಭರಿಸಲು ವಿಪ್ರೊ ಸಿದ್ಧವಿದೆ,” ಎಂದು ಅವರು ತಿಳಿಸಿದ್ದಾರೆ.

ಒಆರ್‌ಆರ್‌ನ ಸಂಚಾರ ದಟ್ಟಣೆ, ವಿಶೇಷವಾಗಿ ಇಬ್ಲೂರು ಜಂಕ್ಷನ್‌ನಲ್ಲಿ ತೀವ್ರವಾಗಿದ್ದು, ಇದು ಉತ್ಪಾದನಾ ವಲಯ ಮತ್ತು ಸ್ಥಳೀಯ ಜನರ ಜೀವನದ ಗುಣಮಟ್ಟದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಈ ಸಮಸ್ಯೆಯ ಗಂಭೀರತೆಯನ್ನು ಗುರುತಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಪರಸ್ಪರ ಒಪ್ಪಿತ ಷರತ್ತುಗಳು ಮತ್ತು ಅಗತ್ಯ ಭದ್ರತಾ ಕ್ರಮಗಳೊಂದಿಗೆ ವಿಪ್ರೊ ಕ್ಯಾಂಪಸ್‌ನಲ್ಲಿ ವಾಹನ ಸಂಚಾರಕ್ಕೆ ಅವಕಾಶ ನೀಡುವಂತೆ ಕೋರಿದ್ದರು. ಆದರೆ, ಕಾನೂನು ಮತ್ತು ಒಪ್ಪಂದದ ಸೀಮಿತತೆಯನ್ನು ಗಮನದಲ್ಲಿಟ್ಟುಕೊಂಡು ಪ್ರೇಮ್‌ಜಿ ಈ ಕೋರಿಕೆಯನ್ನು ತಿರಸ್ಕರಿಸಿದ್ದಾರೆ.

ಇದೇ ಸಂದರ್ಭದಲ್ಲಿ ಕರ್ನಾಟಕಕ್ಕೆ ವಿಪ್ರೊ ಕೊಡುಗೆಯನ್ನು ಮುಖ್ಯಮಂತ್ರಿಗಳು ಗುರುತಿಸಿರುವುದಕ್ಕೆ ಅಜೀಂ ಪ್ರೇಮ್‌ಜಿ ಧನ್ಯವಾದ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...