ಯಲಹಂಕ | 10 ಕೋಟಿ ರೂ. ಮೌಲ್ಯದ ಒತ್ತುವರಿ ಜಮೀನು ಸರ್ಕಾರದ ವಶಕ್ಕೆ

Date:

  • ಕಂದಾಯ ಇಲಾಖೆಯಿಂದ ಮುಂದುವರೆದ ಸರ್ಕಾರಿ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ
  • 10 ಕೋಟಿ ರೂ. ಮೌಲ್ಯದ 6.05 ಎಕರೆ ಸರ್ಕಾರಿ ಜಮೀನು ಸರ್ಕಾರದ ವಶಕ್ಕೆ

ಬೆಂಗಳೂರಿನಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿಸಿರುವ ಕಂದಾಯ ಇಲಾಖೆ ಅಧಿಕಾರಿಗಳು, ಯಲಹಂಕ ತಾಲೂಕು, ಜಾಲ ಹೋಬಳಿ, ಕಟ್ಟಿಗೇನಹಳ್ಳಿ ಗ್ರಾಮದ ಸರ್ವೆ ನಂ.28 ರಲ್ಲಿ ಒತ್ತುವರಿಯಾಗಿದ್ದ ಸುಮಾರು 10 ಕೋಟಿ ರೂ. ಮೌಲ್ಯದ 6.05 ಎಕರೆ ಸರ್ಕಾರಿ ಜಮೀನನ್ನು ವಶಕ್ಕೆ ಪಡೆದಿದ್ದಾರೆ.

ಈ ಮೂಲಕ ಭೂ ಒತ್ತುವರಿದಾರರು ಹಾಗೂ ಭೂ ಮಾಫಿಯಾಗೆ ಸರ್ಕಾರ ಬಿಸಿ ಮುಟ್ಟಿಸಿದೆ. ಬೆಂಗಳೂರಿನಾದ್ಯಂತ ಭೂ ಒತ್ತುವರಿ ತೆರವು ಮಾಡುವಂತೆ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಅದರಂತೆ ಕಳೆದ ವಾರ ಯಲಹಂಕದ ಬಾಗಲೂರಿನ ಬಳಿ 25 ಕೋಟಿ ರೂ. ಮೌಲ್ಯದ 6.07 ಎಕರೆ ಸರ್ಕಾರಿ ಭೂ ಒತ್ತುವರಿ ತೆರವುಗೊಳಿಸಲಾಗಿತ್ತು. ಈಗ ಕಾರ್ಯಾಚರಣೆ ಮುಂದುವರಿಸಿ ಇನ್ನಷ್ಟು ಒತ್ತುವರಿ ತೆರವು ಮಾಡಲಾಗಿದೆ.

ಯಲಹಂಕ ತಾಲ್ಲೂಕು ಜಾಲ ಹೋಬಳಿ, ಕಟ್ಟಿಗೇನಹಳ್ಳಿ ಗ್ರಾಮದ ಸರ್ವೆ ನಂ.28 ರ ಜಮೀನಿಗೆ ಸಂಬಂಧಿಸಿದಂತೆ, ಗೋಮಾಳದ ಜಮೀನಿಗೆ ವಿವರವಾದ ವರದಿಯನ್ನು ದಾಖಲೆಗಳೊಂದಿಗೆ ಸಲ್ಲಿಸಲು ಮತ್ತು ಜಮೀನಿನಲ್ಲಿ ಯಾವುದೇ ಖಾತೆ ಅನುಭವವಿಲ್ಲದೇ ಇರುವ ಒತ್ತುವರಿದಾರರನ್ನು ಖುಲ್ಲಾಪಡಿಸಿ ಕ್ರಮವಹಿಸುವಂತೆ ನಿರ್ದೇಶಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕ ಭೂ ಕಂದಾಯ ಕಾಯ್ದೆ 1964 ಕಲಂ 104 ರ ಅಡಿ ವಿಚಾರಣೆ ನಡೆಸಲು ನಿರ್ಧರಿಸಿ ಪ್ರತಿವಾದಿಗಳಿಗೆ ನೋಟೀಸ್ ಕೂಡ ನೀಡಲಾಗಿತ್ತು. ಅದರಂತೆ ಕಟ್ಟಿಗೇನಹಳ್ಳಿಯ ಸರ್ವೆ ನಂ.28 ರ ಜಮೀನಿನಲ್ಲಿ ತಾಲೂಕು ಮೋಜಿಣಿದಾರರು ಒತ್ತುವರಿ ಎಂದು ಗುರುತಿಸಿದ 6.05 ಎಕರೆ ಜಮೀನನಲ್ಲಿ ಒತ್ತುವರಿ ತೆರವುಗೊಳಿಸಲಾಗಿದೆ.

ಒತ್ತುವರಿದಾರರ ವಿವರ

  • ಕೋಗಿಲು ಗ್ರಾಮದ ಸರ್ವೆ ನಂ. 100 ರ ಹಿಡುವಳಿದಾರರಾದ ಉಡುಪ ಅವರಿಂದ ಕಟ್ಟಿಗೇನಹಳ್ಳಿಯ ಸರ್ವೆ ನಂ.28 ರಲ್ಲಿ 0-10 ಗುಂಟೆ ಜಮೀನನ್ನು ಒತ್ತುವರಿ ಮಾಡಿದ್ದು, ಇದನ್ನು ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ.
  • ಎಸ್.ಜಯರಾಮ್ ಬಿನ್ ಸುಬ್ರಮಣ್ಯ ಮೊದಲಿಯಾರ್ ಅವರು ಹೆಚ್ಚುವರಿಯಾಗಿ ಸ್ವಾಧೀನ ಹೊಂದಿರುವ 0-20 ಗುಂಟೆ ಜಮೀನನ್ನು ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ.
  • ಸುಬ್ಬಣ್ಣ ಬಿನ್ ಚಿಕ್ಕಮುನಿಯಪ್ಪ ಅವರು ಹೆಚ್ಚುವರಿಯಾಗಿ ಸ್ವಾಧೀನ ಹೊಂದಿರುವ 2-29 ಎಕರೆ ಜಮೀನನ್ನು ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ.
  • ದೊಡ್ಡಕ್ಕಮ್ಮ ಕೋಂ ಲೇಟ್ ಕೆ.ಮುನಿಯಪ್ಪ, ಮುನಿರಾಜು ಮತ್ತು ಎಂ. ಮಂಜುನಾಥ ಅವರು ಹೆಚ್ಚುವರಿಯಾಗಿ ಸ್ವಾಧೀನ ಹೊಂದಿರುವ 0-12 ಗುಂಟೆ ಜಮೀನನ್ನು ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ.
  • ವೈ.ಜಿ.ಕೇಶವ ಬಿನ್ ಗೋವಿಂದಪ್ಪ ಅವರಿಗೆ ಸಂಬಂಧಿಸಿದಂತೆ, ನಂ.ಎಲ್ಎನ್ ಡಿ/ಎಸ್ ಆರ್/1/104/78-79 ರಂತೆ ಅಬ್ದುಲ್ ಸತ್ತಾರ್ ರವರಿಗೆ 2-00 ಎಕರೆ ಮಂಜೂರಾಗಿತ್ತು. ನಂತರ ಕ್ರಯವಿಕ್ರಯ ನಡೆದು, ವೈ.ಜಿ ಕೇಶವ ಬಿನ್ ಗೋವಿಂದಪ್ಪರವರಿಗೆ ಖಾತೆ ದಾಖಲಾಗಿತ್ತು. ವಿಶೇಷ ಜಿಲ್ಲಾಧಿಕಾರಿಗಳ ಆದೇಶದಂತೆ ಸರ್ಕಾರದ ಹೆಸರಿಗೆ ಖಾತೆ ದಾಖಲಾಗಿ, ಗೋಮಾಳ ಶೀರ್ಷಿಕೆಯಲ್ಲಿ ಖಾತೆ ಮುಂದುವರೆಯುತ್ತಿದೆ. 2.00 ಎಕರೆ ಜಮೀನಿನ ಪ್ರಕರಣ ವಿಶೇಷ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದೆ. ಆದರೆ, ಇವರು ಹೆಚ್ಚುವರಿಯಾಗಿ ಸ್ವಾಧೀನ ಹೊಂದಿರುವ 0.05 ಗುಂಟೆ ಜಮೀನನ್ನು ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ.
  • ರಮೇಶ್ ಬಿನ್ ಚಿಕ್ಕಪಾಪಮ್ಮ ಅವರು ಹೆಚ್ಚುವರಿಯಾಗಿ ಸ್ವಾಧೀನ ಹೊಂದಿರುವ 0.12 ಎಕರೆ ಜಮೀನು ಒತ್ತುವರಿ ತೆರವುಗೊಳಿಸಲಾಗಿದೆ. ಇದೇ ಗ್ರಾಮದಲ್ಲಿ ಬ್ಲಾಕ್ ನಂ.12ರಲ್ಲಿ 0.15 ಗುಂಟೆ ವಿಸ್ತೀರ್ಣದಲ್ಲಿ 4 ಮನೆಗಳು ನಿರ್ಮಾಣವಾಗಿದ್ದು, ತೆರವುಗೊಳಿಸಲು ಮೌಖಿಕವಾಗಿ 2 ದಿನಗಳ ಕಾಲಾವಕಾಶ ಕೋರಿದ್ದರು. ಅದರಂತೆ ಕಾಲಾವಕಾಶ ನೀಡಿ, ಸೂಕ್ತ ಪೊಲೀಸ್ ಬಂದೋಬಸ್ತ್‌ನೊಂದಿಗೆ ತೆರವುಗೊಳಿಸಲಾಗಿದೆ.
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...