ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇಡೀ ದಿನ ಕಳೆದೆ ಎಂದು ಸುಳ್ಳು ಹೇಳಿದ ಯೂಟ್ಯೂಬರ್‌ ಬಂಧನ

Date:

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರವೇಶಿಸಿ ವಿಡಿಯೋ ರೆಕಾರ್ಡ್ ಮಾಡಿ ಇಡೀ ದಿನ ಅಲ್ಲಿಯೇ ಕಳೆದಿದ್ದೇನೆ ಎಂದು ಸುಳ್ಳು ಹೇಳಿಕೆ ನೀಡಿದ ಆರೋಪದ ಮೇಲೆ 23 ವರ್ಷದ ಯೂಟ್ಯೂಬರ್ ವಿಕಾಸ್ ಗೌಡರನ್ನು ಬಂಧಿಸಲಾಗಿದೆ ಎಂದು ಪೋಲಿಸರು ತಿಳಿಸಿದ್ದಾರೆ.

ಬೆಂಗಳೂರಿನ ಯಲಹಂಕದ ನಿವಾಸಿ ವಿಕಾಸ್ ಗೌಡ ಅವರು ಏಪ್ರಿಲ್ 7 ರಂದು ಮಧ್ಯಾಹ್ನ 12 ಗಂಟೆಗೆ ಚೆನ್ನೈಗೆ ಹೋಗುವ ಏರ್ ಇಂಡಿಯಾ ವಿಮಾನದ ಟಿಕೆಟ್‌ ಪಡೆದು ವಿಮಾನ ನಿಲ್ದಾಣವನ್ನು ಪ್ರವೇಶಿಸಿದ್ದಾರೆ. ಆದರೆ ‘ಉದ್ದೇಶಪೂರ್ವಕವಾಗಿ’ ವಿಮಾನವನ್ನು ಹತ್ತಿಲ್ಲ. ಬದಲಿಗೆ, ತಮ್ಮ ಮೊಬೈಲ್ ಫೋನ್‌ನಲ್ಲಿ ವಿಡಿಯೋ ರೆಕಾರ್ಡ್ ಮಾಡುತ್ತಾ ವಿಮಾನ ನಿಲ್ದಾಣದ ಸುತ್ತಲೂ ತಿರುಗುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಇದನ್ನು ಓದಿದ್ದೀರಾ?  27ನೇ ವಯಸ್ಸಿಗೆ ಬದುಕು ಮುಗಿಸಿದ ‘ಆ್ಯಂಗ್ರಿ ರಾಂಟ್‌ಮ್ಯಾನ್’ ಖ್ಯಾತಿಯ ಯೂಟ್ಯೂಬರ್  ಅಬ್ರದೀಪ್ ಸಾಹ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುಮಾರು 1.13 ಲಕ್ಷ ಚಂದಾದಾರರನ್ನು ಹೊಂದಿರುವ ಯೂಟ್ಯೂಬರ್ ವಿಕಾಸ್ ಗೌಡ ಏಪ್ರಿಲ್ 12 ರಂದು, ವಿಡಿಯೋವೊಂದನ್ನು ಅಪ್‌ಲೋಡ್ ಮಾಡಿದ್ದಾರೆ. ಈ ವಿಡಿಯೋದಲ್ಲಿ ವಿಕಾಸ್ ಗೌಡ “ಇಡೀ ದಿನ ವಿಮಾನ ನಿಲ್ದಾಣದಲ್ಲಿ ಕಳೆದಿದ್ದೇನೆ ಮತ್ತು ವಿಮಾನ ನಿಲ್ದಾಣದ ಆವರಣದ ಅನೇಕ ಪ್ರದೇಶಗಳಿಗೆ ಹೋಗಿದ್ದೇನೆ” ಎಂದು ಸುಳ್ಳು ಹೇಳಿದ್ದರು ಎಂದು ವರದಿಯಾಗಿದೆ. ಈ ವಿಡಿಯೋವನ್ನು ಬಳಿಕ ವಿಕಾಸ್ ಗೌಡ ಡಿಲೀಟ್ ಮಾಡಿದ್ದಾರೆ.

“ಅವರು ವಿಮಾನ ನಿಲ್ದಾಣವನ್ನು ಪ್ರವೇಶಿಸಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ -2 ನಲ್ಲಿ ಭದ್ರತಾ ತಪಾಸಣೆ ಬಳಿಕ ಬೋರ್ಡಿಂಗ್ ಲಾಂಜ್ ಕಡೆಗೆ ಹೊರಟರು. ಆದರೆ ಅವರು ವಿಮಾನ ಹತ್ತುವ ಬದಲು ವಿಮಾನ ನಿಲ್ದಾಣದ ಆವರಣದಲ್ಲಿ ಸುತ್ತಾಡುತ್ತಿದ್ದಾರೆ. ವಿಮಾನ ನಿಲ್ದಾಣದಲ್ಲಿ ಸುಮಾರು ಆರು ಗಂಟೆಗಳ ಕಾಲ ಕಳೆದಿದ್ದಾರೆ” ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಇದನ್ನು ಓದಿದ್ದೀರಾ?  ಹಾವಿನ ವಿಷ ಪ್ರಕರಣ | ಬಲಪಂಥೀಯ ಯೂಟ್ಯೂಬರ್ ಎಲ್ವಿಶ್ ಯಾದವ್ ಬಂಧನ

ವಿಡಿಯೋ ರೆಕಾರ್ಡ್ ಮಾಡಿದ ಬಳಿಕ ತನ್ನ ವಿಮಾನ ತಾನು ಬರುವಷ್ಟರಲ್ಲಿ ಹಾರಾಟ ನಡೆಸಿದೆ ಎಂದು ಭದ್ರತಾ ಸಿಬ್ಬಂದಿಗೆ ಸುಳ್ಳು ಹೇಳಿ ವಿಮಾನ ನಿಲ್ದಾಣದಿಂದ ನಿರ್ಗಮಿಸಿದ್ದಾರೆ. ಅವರು ಮಾನ್ಯವಾದ ಟಿಕೆಟ್ ಮತ್ತು ಬೋರ್ಡಿಂಗ್ ಪಾಸ್ ಹೊಂದಿದ್ದರಿಂದ ಭದ್ರತಾ ಸಿಬ್ಬಂದಿಗೆ ಅವರ ಮೇಲೆ ಯಾವುದೇ ಅನುಮಾನ ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ ಯೂಟ್ಯೂಬರ್ ಇದನ್ನು ಪ್ರಚಾರಕ್ಕಾಗಿ ಮಾಡಿದ್ದು ವಿಡಿಯೋದಲ್ಲಿ ಸುಳ್ಳು ಹೇಳಲಾಗಿದೆ ಎಂದು ವರದಿಯಾಗಿದೆ. ಈ ವಿಷಯ ಏಪ್ರಿಲ್ 15 ರಂದು ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿಯ ಗಮನಕ್ಕೆ ಬಂದಿದ್ದು, ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ಅಧಿಕಾರಿಯ ದೂರಿನ ಆಧಾರದ ಮೇಲೆ ವಿಕಾಸ್ ಗೌಡ ವಿರುದ್ಧ ಸೆಕ್ಷನ್ 505 (ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣವಾಗುವ ಹೇಳಿಕೆಗಳು) ಮತ್ತು 448 (ಅತಿಕ್ರಮಣ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅದಾದ ಬಳಿಕ ಬಂಧಿಸಲಾಗಿದ್ದು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...