ಬೆಂಗಳೂರು | ವಿದ್ಯುತ್ ದರದಲ್ಲಿ 49 ಪೈಸೆ ಹೆಚ್ಚಳಕ್ಕೆ ಬೆಸ್ಕಾಂ ಪ್ರಸ್ತಾವನೆ

Date:

ವಾರ್ಷಿಕ ಆಯವ್ಯಯದ ಭಾಗವಾಗಿ, ರಾಜ್ಯದ ಎಲ್ಲ ಇಂಧನ ಪೂರೈಕೆ ಕಂಪನಿಗಳು (ಎಸ್ಕಾಮ್‌) ವಿದ್ಯುತ್ ದರವನ್ನು ಹೆಚ್ಚಿಸಲು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ (ಕೆಇಆರ್‌ಸಿ) ಪ್ರಸ್ತಾವನೆ ಸಲ್ಲಿಸಿವೆ. ಬೆಸ್ಕಾಂ ಕೂಡ ತನ್ನ ಪ್ರಸ್ತಾವನೆ ಸಲ್ಲಿಸಿದೆ.

ಕಳೆದ ವರ್ಷ ಎಲ್ಲ ಎಸ್ಕಾಮ್‌ಗಳು 1.36 ರೂ. ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ್ದವು. ಅಂತಹ ಪ್ರಸ್ತಾವನೆಗಳ ನಡುವೆ ಕುತೂಹಲಕಾರಿಯಾಗಿ, ಬೆಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತವು (ಬೆಸ್ಕಾಂ) ಗ್ರಾಹಕರಿಗೆ ಪ್ರತಿ ಯೂನಿಟ್‌ಗೆ 49 ಪೈಸೆ ಹೆಚ್ಚಳ ಮಾಡಲು ಪ್ರಸ್ತಾವನೆ ಸಲ್ಲಿಸಿದೆ.

ಕೆಇಆರ್‌ಸಿ ಕಳೆದ ವರ್ಷ ಪ್ರತಿ ಯೂನಿಟ್‌ಗೆ 70 ಪೈಸೆಯಷ್ಟು ವಿದ್ಯುತ್ ದರ ಏರಿಕೆಗೆ ಅನುಮತಿ ನೀಡಿತ್ತು. ವಿದ್ಯುತ್ ದರವನ್ನು ಪ್ರತಿ ವರ್ಷ ಪರಿಷ್ಕರಿಸಲಾಗುತ್ತದೆ. ಈ ವೇಳೆ, ಪ್ರಸರಣ ಮತ್ತು ವಿತರಣಾ ನಷ್ಟಗಳು ಮತ್ತು ವಿದ್ಯುತ್ ಖರೀದಿ ಒಪ್ಪಂದಗಳನ್ನು ಲೆಕ್ಕಹಾಕಲಾಗುತ್ತದೆ. ಕಳೆದ ವರ್ಷ, ಪರಿಷ್ಕೃತ ದರಗಳನ್ನು 2023ರ ಮೇ 12 ರಂದು ಘೋಷಿಸಲಾಗಿತ್ತು. ಆ ದರವು ಏಪ್ರಿಲ್‌ನಿಂದ ಜಾರಿಗೆ ಬಂಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೀಗ, ಪ್ರಸ್ತಾವನೆ ಸಲ್ಲಿಸಿರುವ ಗೆಸ್ಕಾಂ ಪ್ರತಿ ಯೂನಿಟ್‌ಗೆ 1.63 ರೂ., ಮೆಸ್ಕಾಂ 59 ಪೈಸೆ, ಹೆಸ್ಕಾಂ 57 ಪೈಸೆ ಮತ್ತು ಚೆಸ್ಕಾಂ 50 ಪೈಸೆ ಹೆಚ್ಚಳ ಮಾಡಲು ಪ್ರಸ್ತಾಪಿಸಿವೆ. ಇದೆಲ್ಲದರಲ್ಲಿ ಬೆಸ್ಕಾಂ ಕಡಿಮೆ ದರದ (49 ಪೈಸೆ) ಪ್ರಸ್ತಾವನೆ ಸಲ್ಲಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...