ಚಿತ್ರದುರ್ಗ | ಭದ್ರಾ ಮೇಲ್ದಂಡೆ ಯೋಜನೆ; ಅನುದಾನ ಬಿಡುಗಡೆಗೆ ಆಗ್ರಹಿಸಿ ಧರಣಿ

Date:

ಹಿಂದುಳಿದ ಚಿತ್ರದುರ್ಗ ಜಿಲ್ಲೆಯ ಮಹತ್ವದ ನೀರಾವರಿ ಯೋಜನೆಗೆ ಕೇಂದ್ರ ಸರ್ಕಾರ ಅನುದಾನ ಘೋಷಿಸಿದೆ. ಆ ಹಣವನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಚಿತ್ರದುರ್ಗದಲ್ಲಿರುವ ಸಂಸದ ಎ ನಾರಾಯಣಸ್ವಾಮಿ ಕಚೇರಿ ಎದುರು ರೈತರು ಪ್ರತಿಭಟನೆ ನಡೆಸಿದ್ದಾರೆ.

ಕಳೆದ ಮೂರು ದಿನಗಳಿಂದ ರೈತರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಅವರ ಧರಣಿ 3ನೇ ದಿನಕ್ಕೆ ಕಾಲಿಟ್ಟಿದೆ.

ಮೂರು ದಿನಗಳಿಂದ ರೈತರು ನಾರಾಯಣಸ್ವಾಮಿ ಅವರ ಕಚೇರಿಯ ಬಾಗಿಲಲ್ಲೇ ರೈತರು ಮಲಗಿದ್ದರು. ಸಂಸದರ ಕಚೇರಿಯ ಮುಂದಿರುವ ಬೆಂಚುಗಳು ಕೂಡಾ ರೈತರಿಗೆ ಮಲಗುವ ತಾಣವಾಗಿದ್ದವು. ರೈತರ ಪ್ರತಿಭಟನೆಗಾಗಿ ಅನೇಕರು ಅಕ್ಕಿ, ಬೇಳೆ, ಎಣ್ಣೆ, ತರಕಾರಿ, ದಿನಸಿ ಸೇರಿದಂತೆ ಅನೇಕ ವಸ್ತುಗಳನ್ನು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಚೇರಿಯಿಂದ ಸ್ವಲ್ಪ ದೂರದಲ್ಲಿ ಧರಣಿ ನಡೆಸುವಂತೆ ಪೊಲೀಸರು ರೈತರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಹೀಗಾಗಿ, ಕೇಂದ್ರ ಸರ್ಕಾರದ ಮೇಲೆ ಒತ್ತಡ ತರುವ ಉದ್ದೇಶದಿಂದ ಮಾಡುತ್ತಿರುವ ಧರಣಿಯಿಂದಾಗಿ ಜಿಲ್ಲಾ ಪಂಚಾಯತಿ ಕೆಲಸಗಳಿಗೆ ತೊಂದರೆ ಆಗಬಾರದೆಂದು ರೈತರು ಧರಣಿ ಸ್ಥಳವನ್ನು ಜಿಲ್ಲಾ ಪಂಚಾಯತಿ ಪ್ರವೇಶ ದ್ವಾರಕ್ಕೆ ಸ್ಥಳಾಂತರಿಸಿದ್ದಾರೆ.

ಧರಣಿಯಲ್ಲಿ ಮಾತನಾಡಿದ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಈಚಘಟ್ಟದ ಸಿದ್ಧವೀರಪ್ಪ, “ಜಿಲ್ಲೆಯಲ್ಲಿ ಈಗಾಗಲೇ ಬರಗಾಲ ತಲೆದೋರಿದೆ. ಇದಕ್ಕೆ ಶಾಶ್ವತ ಪರಿಹಾರ ಭದ್ರಾಮೇಲ್ದಂಡೆ ಯೋಜನೆಯಾಗಿದೆ. ಕೇಂದ್ರ ಸಚಿವರು, ಚಿತ್ರದುರ್ಗ ಸಂಸದರೂ ಆಗಿರುವ ಎ.ನಾರಾಯಣಸ್ವಾಮಿ ಅವರಿಗೆ ಎರಡು ತಿಂಗಳ ಹಿಂದೆಯೇ ಅನುದಾನ ಬಿಡುಗಡೆಗಾಗಿ ಸತ್ಯಾಗ್ರಹ ನಡೆಸಿ, ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದೆವು. ಆದರೂ, ಕೇಂದ್ರ ಸರ್ಕಾರ ಈ ಬಗ್ಗೆ ಗಮನಹರಿಸಲಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಬಜೆಟ್‍ನಲ್ಲಿ ಘೋಷಣೆ ಮಾಡಿದಂತೆ, ಕೇಂದ್ರ ಸರ್ಕಾರ 5,300 ಕೋಟಿ ರೂ.ಗಳನ್ನು ಬಿಡುಗಡೆ ಮಾಡಬೇಕಾಗಿತ್ತು. ತುರ್ತಾಗಿ ಕಾಮಗಾರಿ ಮುಗಿಯಬೇಕಿತ್ತು. ಕಾಮಗಾರಿಯಲ್ಲಿ ಎಲ್ಲೆಲ್ಲಿ ಸಮಸ್ಯೆ ಇದೆ ಗಮನಿಸಿ ಸರಿಪಡಿಸಬೇಕಾಗಿತ್ತು. ಆದರೆ, ಯಾವುದನ್ನೂ ರಾಜ್ಯ ಅಥವಾ ಕೇಂದ್ರ ಸರ್ಕಾರಗಳು ಮಾಡಲಿಲ್ಲ. ನಮ್ಮ ಜಿಲ್ಲೆಯನ್ನು ಸಂಪೂರ್ಣ ನಿರ್ಲಕ್ಷಿಸಲಾಗುತ್ತಿದೆ. ಅನುದಾನ ಬಿಡುಗಡೆಯಾಗಿ ಜಿಲ್ಲೆಗೆ ನೀರು ಹರಿಯುವವರೆಗೆ ಧರಣಿಯಿಂದ ಹಿಂದೆ ಸರಿಯುವ ಮಾತೇ ಇಲ್ಲ” ಎಂದು ಪುನರುಚ್ಚರಿಸಿದರು.

ಧರಣಿಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಡಿ.ಎಸ್.ಹಳ್ಳಿ ಮಲ್ಲಿಕಾರ್ಜುನ್, ಮುಖಂಡರಾದ ರಾಮರೆಡ್ಡಿ, ಆರ್.ಬಿ.ನಿಜಲಿಂಗಪ್ಪ, ಮಂಜುನಾಥ್, ಸಿದ್ದಪ್ಪ ಹಳಿಯೂರು, ಬಸವರಾಜಪ್ಪ, ನಾಗರಾಜ ರೆಡ್ಡಿ, ಬಿ.ಲೋಕಣ್ಣ, ಮಂಜಣ್ಣ, ಶರಣಪ್ಪ, ಪ್ರಸನ್ನ, ಪರಮಶಿವಪ್ಪ ಮತ್ತಿತರರು ಭಾಗವಹಿಸಿದ್ದರು.

ಮಂಗಳವಾರ ಬೆಳಗ್ಗೆ ರೈತ ಸಂಘದ ಕಾರ್ಯಾಧ್ಯಕ್ಷ ಈಚಘಟ್ಟದ ಸಿದ್ಧವೀರಪ್ಪ ಅವರಿಗೆ ಕರೆ ಮಾಡಿ ನಾರಾಯಣಸ್ವಾಮಿ ಮಾತನಾಡಿದ್ದಾರೆ ಎನ್ನಲಾಗಿದೆ. “ಅಧಿವೇಶನ ಇರುವುದರಿಂದ ಸ್ಥಳಕ್ಕೆ ಬರಲಾಗಿಲ್ಲ. ಅಗತ್ಯ ಕೆಲಸಗಳನ್ನು ಮಾಡುತ್ತೇವೆ. ಅನುದಾನ ಬಿಡುಗಡೆಗೆ ಸಚಿವರೊಂದಿಗೆ ಚರ್ಚಿಸುತ್ತೇನೆ” ಎಂದು ಭರವಸೆ ನೀಡಿರುವುದಾಗಿ ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...