ಭದ್ರಾವತಿ | ಸಮಸ್ಯೆಗಳ ಬಗ್ಗೆ ಹೋರಾಟಕ್ಕೆ ರೈತ ಸಂಘಟನೆಯನ್ನು ಬಲಪಡಿಸಬೇಕು: ಹೆಚ್‌. ಆರ್ ಬಸವರಾಜಪ್ಪ

Date:

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಆನವೇರಿ ಗ್ರಾಮದ ರೈತ ಸಂಘದ ಗ್ರಾಮ ಘಟಕದ ನಾಮಫಲಕವನ್ನು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷರಾದ ಹೆಚ್‌. ಆರ್ ಬಸವರಾಜಪ್ಪನವರು ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಅವರು, ರೈತರ ಸಮಸ್ಯೆಗಳ ಬಗ್ಗೆ ಹೋರಾಟ ಮಾಡಲು ರೈತ ಸಂಘಟನೆಯನ್ನು ಬಲಪಡಿಸಬೇಕು ಎಂದು ತಿಳಿಸಿದರು.

“ಇಂದು ಆನವೇರಿ ಗ್ರಾಮದಲ್ಲಿ ರೈತ ಸಂಘದ ನಾಮಫಲಕ ಹಾಕಿರುವುದು ಒಳ್ಳೆಯ ಕೆಲಸ. ಪ್ರತಿ ವರ್ಗವು ಕೂಡ ಸಂಘಟನೆ ಮಾಡಿಕೊಂಡಿದೆ. ರೈತರ ಸಮಸ್ಯೆಗಳ ಬಗ್ಗೆ ಹೊರಟ ಮಾಡಲು ರೈತ ಸಂಘಟನೆಯನ್ನ ಬಲಪಡಿಸಬೇಕು. ಹಿಂದೆ ಲೇವಿ ಚೀಟಿ ಸುಡುವುದು, ಜಪ್ತಿ ಮಾಡಿದ ರೈತರ ವಸ್ತುಗಳ ಮರು ಜಪ್ತಿ, ಭ್ರಷ್ಟ ಅಧಿಕಾರಿಗಳ ಮನೆ ಜಪ್ತಿ‌, ಇತ್ತೀಚೆಗೆ ರೈತ ವಿರೋಧಿ ಮೂರು ಕೃಷಿ ಕಾಯ್ದೆಗಳನ್ನ ಕೇಂದ್ರ ಸರ್ಕಾರ ವಾಪಸ್ಸು ಪಡೆದಿದ್ದು ಕೂಡ ದೆಹಲಿಯ ಬೃಹತ್ ಚಳುವಳಿಯಿಂದ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 10 31 at 1.48.56 PM 2 1

ರೈತ ಸಂಘದ ನಾಮಫಲಕಗಳನ್ನು ಪ್ರತಿ ಗ್ರಾಮದಲ್ಲಿ ಹಾಕಬೇಕು, ಸಂಘಟನೆ ಬಲಪಡಿಸಬೇಕು. ಈ ಭಾಗದಲ್ಲಿ ಬಗರ್ ಹುಕ್ಕುಂ ರೈತರನ್ನು ಒಕ್ಕಲೆಬ್ಬಿಸುತ್ತಿದ್ದಾರೆ ನಮ್ಮ ಭೂಮಿಯನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ಒಂದು ವೇಳೆ ಅಧಿಕಾರಿಗಳು ಕ್ರಮಕ್ಕೆ ಮುಂದಾದರೆ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ಕೊಟ್ಟರು.

ನವೆಂಬರ್ 26ರಂದು ಭಾರತ ದೇಶದ 500ಕ್ಕೂ ಹೆಚ್ಚು ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮಾಡಿ ಮನವಿ ಸಲ್ಲಿಸಲಾಗುವುದು ಎಂದು ರೈತ ಮುಖಂಡರಾದ ಹೆಚ್‌. ಆರ್ ಬಸವರಾಜಪ್ಪ ತಿಳಿಸಿದರು.

ಇದನ್ನು ಓದಿದ್ದೀರಾ? ಗ್ರೌಂಡ್ ರಿಪೋರ್ಟ್‌ | ಕಡಕೋಳ ಗಲಭೆ: ಗ್ರಾಮವನ್ನೇ ತೊರೆದ 70ಕ್ಕೂ ಹೆಚ್ಚು ಮುಸ್ಲಿಂ ಕುಟುಂಬಗಳು!

ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಟಿ.ಎಂ ಚಂದ್ರಪ್ಪ, ಜಿಲ್ಲಾಧ್ಯಕ್ಷರಾದ ಕೆ. ರಾಘವೇಂದ್ರ, ಜಿಲ್ಲಾ ಉಪಾಧ್ಯಕ್ಷರಾದ ಎಂ.ಮಹದೇವಪ್ಪ, ಎಂ.ಆರ್ ರಾಜರಾವ್, ಎಂ.ಎಸ್ ತಿಮ್ಮಪ್ಪ, ಭದ್ರಾವತಿ ತಾಲೂಕು ಗೌರವಾಧ್ಯಕ್ಷರಾದ ಎಂ.ಹೆಚ್ ತಿಮ್ಮಪ್ಪ, ತಾಲೂಕು ಅಧ್ಯಕ್ಷರಾದ ಜಿ.ಎನ್ ಪಂಚಾಕ್ಷರಿ, ತಾಲೂಕು ಪ್ರಧಾನ ಕಾರ್ಯದರ್ಶಿ ಹನುಮಂತಪ್ಪ, ತಾಲೂಕು ಉಪಾಧ್ಯಕ್ಷರಾದ ಇ.ತಿಮ್ಮಪ್ಪ, ಮುಖಂಡರಾದ ಹೆಚ್ ಗಂಗಾಧರಪ್ಪ, ಜಗದೀಶ್ ಗೌಡ್ರು, ದಾನೇಶಪ್ಪ, ಮಹದೇವಪ್ಪ, ಕುಪೇಂದ್ರಪ್ಪ, ನಟರಾಜ್ ಗೌಡ್ರು ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದರು.

WhatsApp Image 2024 10 31 at 1.48.57 PM
WhatsApp Image 2024 10 31 at 1.48.58 PM 1
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...