ಭದ್ರಾವತಿ | ಸಂವಿಧಾನ ಮುಖೇನ ಸಮಾನ ನ್ಯಾಯ ನೀಡಿದವರು ಅಂಬೇಡ್ಕರ್: ರವಿಕುಮಾರ್

Date:

ದೇಶದ ಜಾತಿವ್ಯವಸ್ಥೆಯಿಂದ ಘೋರ ಅವಮಾನ, ದೌರ್ಜನ್ಯಗಳನ್ನು ಅನುಭವಿಸಿದ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು, ತಾವು ಬರೆದ ಸಂವಿಧಾನದಲ್ಲಿ ಯಾವುದೇ ಜಾತಿಗಳ ವಿರುದ್ದವೂ ಕೇಡು, ಸೇಡು ಬಯಸದೆ ಎಲ್ಲ ಜಾತಿ, ಧರ್ಮ, ವರ್ಗಗಳಿಗೂ ಸಮಾನ ನ್ಯಾಯ ಕಲ್ಪಿಸುವ ಮೂಲಕ ಮಾನವೀಯ ಮೌಲ್ಯವನ್ನು ಎತ್ತಿಹಿಡಿದಿದ್ದಾರೆ. ಈ ಕಾರಣಕ್ಕಾಗಿಯೇ ಅಂಬೇಡ್ಕರ್ ಭಾರತದ ಮಹಾತಾಯಿಯೇ ಆಗಿದ್ದಾರೆ ಎಂದು ಪತ್ರಕರ್ತ, ಲೇಖಕ ಎನ್ ರವಿಕುಮಾರ್(ಟೆಲೆಕ್ಸ್) ವಿಶ್ಲೇಷಿಸಿದರು.

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಡಾ. ಬಿ ಆರ್ ಅಂಬೇಡ್ಕರ್ ಎಜುಕೇಶನ್ ಟ್ರಸ್ಟ್‌ನ ರಾಜೀವ್ ಗಾಂಧಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ಈ ದೇಶದ ಸಮಾಜದಲ್ಲಿ ಅವಮಾನ, ನೋವು, ದೌರ್ಜನ್ಯಗಳನ್ನು ನುಂಗಿದ ಅಂಬೇಡ್ಕರ್‌ ಅವರು ಈ ದೇಶದ ದಲಿತ, ದಮನಿತರ ಪಾಲಿಗೆ ಬದುಕನ್ನು ರೂಪಿಸಿಕೊಟ್ಟವರು. ಜಾತೀಯತೆಯಿಂದ ಕುರುಡಾಗಿದ್ದ ಭಾರತಕ್ಕೆ ಅರಿವಿನ ಕಣ್ಣುಗಳನ್ನು ಕೊಟ್ಟ ನಿಜವಾದ ನಾಯಕ ಅಂಬೇಡ್ಕರ್” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಂಬೇಡ್ಕರ್ ಅವರ ಅಸ್ತಿತ್ವ, ಅಸ್ಮಿತೆಯನ್ನು ಹತ್ತಿಕ್ಕಲು ಹಿಂದಿನಿಂದಲೂ ಕುತಂತ್ರಗಳು ನಡೆಯುತ್ತಲೇ ಬಂದಿವೆ. ಆದರೆ ಹತ್ತಿಕ್ಕಿದಷ್ಟು ಅಂಬೇಡ್ಕರ್ ಎದ್ದು ನಿಲ್ಲುತ್ತಿದ್ದಾರೆ. ಅವರನ್ನು ನಿರಾಕರಿಸಿದಷ್ಟು ಆವರಿಸಿಕೊಳ್ಳುತ್ತಿದ್ದಾರೆ” ಎಂದು ಹೇಳಿದರು.

“ಅಂಬೇಡ್ಕರ್ ಅವರು ಸಂವಿಧಾನವನ್ನೇ ಬರೆದಿಲ್ಲ. ಅಂಬೇಡ್ಕರ್, ಅಂಬೇಡ್ಕರ್ ಎನ್ನುವುದು ಶೋಕಿಯಾಗಿದೆ ಎಂದವರೇ ಇಂದು ಅಂಬೇಡ್ಕರ್ ಅವರನ್ನು ಎತ್ತಿಕೊಂಡು ಮೆರವಣಿಗೆ ಹೊರಟಿದ್ದಾರೆ. ಇದು ಅಂಬೇಡ್ಕರ್ ಮತ್ತು ಅವರು ಬರೆದ ಸಂವಿಧಾನಕ್ಕಿರುವ ತಾಕತ್ತು. ಅಂಬೇಡ್ಕರ್ ಎಂದಿಗೂ ಅಳಿಸಲಾಗದ ಮಹಾ ಪ್ರತಿಭೆ ಎನ್ನುವುದನ್ನು ಅರ್ಥಮಾಡಿಕೊಳ್ಳಬೇಕು” ಎಂದರು.

“ವೈವಿಧ್ಯಮಯ ಮತ್ತು ವೈರುಧ್ಯಮಯವಾದ ಭಾರತಕ್ಕೆ ಕೇವಲ ರಾಜಕೀಯ ಸ್ವಾತಂತ್ರ್ಯವಲ್ಲದೆ, ಸಾಮಾಜಿಕ, ಆರ್ಥಿಕ ಸ್ವಾತಂತ್ರ್ಯದ ಹೊಳವನ್ನು ಕೊಟ್ಟ ಅಂಬೇಡ್ಕರ್ ಸಾಮಾಜಿಕ, ಆರ್ಥಿಕ ಸ್ವಾತಂತ್ರ್ಯವಿಲ್ಲದ ರಾಜಕೀಯ ಸ್ವಾತಂತ್ರ್ಯ ನಿರರ್ಥಕವೆಂದು ಹೇಳಿದ್ದು, ಸ್ವಾತಂತ್ರ್ಯದ ಪರಿಕಲ್ಪನೆಗೆ ಸ್ಪಷ್ಟತೆಯ ಜೀವ ತುಂಬಿದ ಅಂಬೇಡ್ಕರ್ ಅವರ ಹೋರಾಟ, ತ್ಯಾಗ ಮತ್ತು ಅವರು ಬರೆದ ಶ್ರೇಷ್ಠ ಸಂವಿಧಾನದಿಂದಾಗಿ ಎಲ್ಲರಿಗೂ ನ್ಯಾಯ ಹಾಗೂ ಹಕ್ಕುಗಳು ಸಿಕ್ಕಿವೆ. ಇಂತಹ ಸಂವಿಧಾನವನ್ನು ಉಳಿಸಿಕೊಳ್ಳುವಲ್ಲಿಯೇ ದೇಶದ ಉಳಿವಿದೆ. ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ದೈವೀಕರಿಸುವುದಕ್ಕಿಂತ ಅವರ ವಿಚಾರಧಾರೆಗಳನ್ನು ಅನುಸರಿಸುವ ಮೂಲಕ ಬಹುಜನ ಭಾರತವನ್ನು ಮುನ್ನಡೆಸಬೇಕಾದ ಹೊಣೆಗಾರಿಕೆ ಯುವ ಸಮೂಹದ ಮೇಲಿದೆ” ಎಂದು ಕರೆ ನೀಡಿದರು.

“ಅಂಬೇಡ್ಕರ್ ಅವರು ಬರೆದ ಸಂವಿಧಾನದ ಫಲವಾಗಿ ಶಿಕ್ಷಣ, ಉದ್ಯೋಗ, ನ್ಯಾಯ, ಹಕ್ಕುಗಳನ್ನು ಪಡೆದ ಜನಸಮುದಾಯಗಳೇ ಇಂದು ಅಂಬೇಡ್ಕರ್ ಅವರ ಸಿದ್ಧಾಂತವನ್ನು ವಿರೋಧಿವವರು, ಜಾತಿವಾದಿಗಳು ಹಾಗೂ ಕೋಮುವಾದಿಗಳ ಜೊತೆ ನಿಲ್ಲುತ್ತಿವೆ. ಮೀಸಲಾತಿ ಫಲಾನುಭವಿಗಳೇ ಮೀಸಲಾತಿ ವಿರೋಧಿ ಶಕ್ತಿಗಳ ಜೊತೆ ಕೈ ಜೋಡಿಸುತ್ತಿರುವುದು ಅಂಬೇಡ್ಕರ್ ಅವರಿಗೆ ಬಗೆದ ದ್ರೋಹವಾಗಿದೆ. ದೇಶವೆಂದರೆ ಕೇವಲ ಮಣ್ಣಲ್ಲ, ಜನತೆಯೇ ಆಗಿದ್ದಾರೆ. ಅದಕ್ಕಾಗಿ ಸಂವಿಧಾನದ ಪೀಠಿಕೆ ’ಭಾರತದ ಜನತೆಯಾದ ನಾವು’ಗಳೆಂದು ಆರಂಭವಾಗುತ್ತದೆ. ಇಂತಹ ಉದಾತ್ತ ಬಂಧುತ್ವ ಪರಿಕಲ್ಪನೆಯನ್ನು ಕೊಟ್ಟವರು ಅಂಬೇಡ್ಕರ್. ಹಾಗಾಗಿ ಇಂಥ ಅದ್ಭುತವಾದ ಸಂವಿಧಾನವನ್ನು ಉಳಿಸಿಕೊಂಡರೆ ಮಾತ್ರ ದೇಶ ಉಳಿಯುತ್ತದೆ. ದೇಶ ಉಳಿದರೆ ನಾವು ಉಳಿಯುತ್ತೇವೆ. ಹೊಸ ತಲೆಮಾರುಗಳನ್ನು ಜಾತಿ, ಧರ್ಮದ ಹೆಸರಿನ ರಾಜಕೀಯ ಪಿತೂರಿಗಳಿಂದ ಬಿಡಿಸಿ ಅಂಬೇಡ್ಕರ್ ಮತ್ತು ಅವರು ಬರೆದ ಸಂವಿಧಾನವನ್ನು ಮಾದರಿಯನ್ನಾಗಿ ಅನುಸರಿಸಲು ಸನ್ನದ್ಧಗೊಳಿಸುವುದೇ ಅಂಬೇಡ್ಕರ್ ಅವರಿಗೆ ಸಲ್ಲಿಸುವ ನಿಜ ಗೌರವವಾಗುತ್ತದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ವಿವಾಹೇತರ ಸಂಬಂಧದ ಶಂಕೆ; ಮಸೀದಿ ಎದುರು ಮಹಿಳೆಯ ಮೇಲೆ ಹಲ್ಲೆ

ಕಾರ್ಯಕ್ರಮಕ್ಕೂ ಮುನ್ನ ರವಿಕುಮಾರ್(ಟೆಲೆಕ್ಸ್) ಅವರು ಈ ದಿನ ಡಾಟ್ ಕಾಮ್‌ ಹೊರತಂದಿರುವ ʼಅರಿವೇ ಅಂಬೇಡ್ಕರʼ ವಿಶೇಷ ಸಂಚಿಕೆಯನ್ನು ಬಿಡುಗಡೆಗೊಳಿಸಿದರು.

ಸಮಾರಂಭದಲ್ಲಿ ಕಾಲೇಜಿನ ಶಿಕ್ಷಣಾರ್ಥಿಗಳಿಂದ ಅಂಬೇಡ್ಕರ್ ಜೀವನ ಚರಿತ್ರೆಯ ಕಿರು ನಾಟಕವನ್ನು ಪ್ರದರ್ಶಿಸಲಾಯಿತು. ಅಂಬೇಡ್ಕರ್‌ ಕುರಿತು ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಕಾಲೇಜು ಪ್ರಾಂಶುಪಾಲ ಡಾ. ಸಿದ್ದರಾಜು, ಕುವೆಂಪು ವಿವಿ ಸಿಂಡಿಕೇಟ್ ಸದಸ್ಯ ಮುಶವಿರ್ ಬಾಷಾ, ಸಂಶೋಧಕ ಹನುಮಂತಪ್ಪ, ಡಾ. ಬಿ ಆರ್ ಅಂಬೇಡ್ಕರ್ ಎಜುಕೇಷನಲ್ ಟ್ರಸ್ಟ್‌ನ ನಿದೇಶಕಿ ನೇತ್ರಾವತಿ ಸುಭಾಷ್, ಸಾವಿತ್ರಿ ಗಣೇಶಪ್ಪ, ಪತ್ರಕರ್ತ ಶಿವಶಂಕರ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...