ರಾಯಚೂರು | ಸಾಮಾಜಿಕ ಮೌಲ್ಯಗಳನ್ನು ಬೆಳೆಸುವುದು ಅಗತ್ಯವಾಗಿದೆ : ಸಾಹಿತಿ ಜಿ ಸಿದ್ದರಾಮಯ್ಯ

Date:


ಸರ್ವರನ್ನು ಸಮಾನವಾಗಿ ಕಾಣುವ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಯಲ್ಲಿದ್ದರೂ ಸಂವಿಧಾನ, ಪ್ರಜಾಪ್ರಭುತ್ವದ ವಿರೋಧಿ ಕೃತ್ಯಗಳು ನಡೆಯುತ್ತಿರುವುದು ವಿಷಾದನೀಯ. ಸದ್ಯ ಸಾಮಾಜಿಕ ಮೌಲ್ಯಗಳನ್ನು ಬೆಳೆಸುವುದು ಅಗತ್ಯವಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸಾಹಿತಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಹೇಳಿದರು.

ರಾಯಚೂರು ಜಿಲ್ಲಾ ಘಟಕ ಕನ್ನಡ ಸಾಹಿತ್ಯ ಪರಿಷತ್ತು, ಡಿ.ದೇವರಾಜ ಅರಸು ವಿಚಾರ ವೇದಿಕೆ ವತಿಯಿಂದ ನಗರದದಲ್ಲಿ ಆಯೋಜಿಸಿದ್ದ ಸಾಹಿತಿ ಭಗತರಾಜ ನಿಜಾಮಾಕಾರಿ ಅವರ ‘ಭಗತನ ಪದಗಳು’ ಕೃತಿ ಬಿಡುಗಡೆ ಮಾಡಿ ಅವರು ಮಾತನಾಡಿದರು.

ಸಮಗ್ರ ಇತಿಹಾಸವನ್ನು ತಿರುಚಿ ಇಂದಿನ ಯುವ ಪೀಳಿಗಿಗೆ ವಾಟ್ಸಪ್‌ ಯುನಿರ್ವಸಿಟಿ ಮೂಲಕ ತಪ್ಪು ಮಾಹಿತಿ ನೀಡಿ, ವಿಷ ಬೀಜ ಬಿತ್ತುವ ಕೆಲಸಗಳು ಇಂದು ವ್ಯವಸ್ಥಿತವಾಗಿ ನಡೆಯುತ್ತಿದೆ. ಸಮಾಜದಲ್ಲಿ ನೈತಿಕತೆ ಕುಸಿಯುತ್ತಿದೆ. ಇತಿಹಾಸ ತಿರುಚಿ ದ್ವೇಷ ಹರಡಿಸುವುದು ಸಲ್ಲದು. ಇದಕ್ಕೆ ಕೊನೆಗಾಣಿಸುವುದು ಅವಶ್ಯ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ನಿಕಟಪೂರ್ವ ಅಧ್ಯಕ್ಷ ಡಾ. ಬಸವಪ್ರಭು ಪಾಟೀಲ ಬೆಟ್ಟದೂರು ಮಾತನಾಡಿ, ಭಗತರಾಜ ನಿಜಾಮಕಾರಿ ಬಂಡಾಯ ಸಾಹಿತ್ಯ ಹುಟ್ಟುಹಾಕಿದವರಲ್ಲಿ ಇವರೂ ಒಬ್ಬರು. ಕಷ್ಟಕರ ಜೀವನದಲ್ಲಿಯೂ ಸಾಹಿತ್ಯ ಕ್ಷೇತ್ರದ ಬೆಳವಣಿಗೆಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಬೋಳಬಂಡೆಪ್ಪ, ಜಂಬಣ್ಣ ಅಮರಚಿಂತ, ಶಾಂತರಸ ಸಮಕಾಲೀನರು. ಜೊತೆಗೆ ಶಾಂತರಸರ ಪ್ರೀತಿಯ ಶಿಷ್ಯರಾಗಿದ್ದಾರೆ. ಭಗತನ ಪದಗಳು ಕೃತಿಯಲ್ಲಿ 128 ಗದ್ಯಗಳಿದ್ದು, ಪ್ರಸ್ತುತ ವಿದ್ಯಮಾನಗಳನ್ನೂ ಕೂಡ ಒಳಗೊಂಡಿದೆ ಎಂದು ಹೇಳಿದರು.

ಇದನ್ನು ಓದಿದ್ದೀರಾ? ಬೆಂಗಳೂರು | ‘ಒತ್ತುವರಿ’ ಆರೋಪ: ದಾಖಲೆಗಳಿದ್ದರೂ ಕೃಷಿಕರ ಜಮೀನಿಗೆ ಜೆಸಿಬಿ ನುಗ್ಗಿಸಿದ ಅರಣ್ಯಾಧಿಕಾರಿ!

ಬೆಂಗಳೂರಿನ ಸಾಹಿತಿ ಹಾಗೂ ಚಿತ್ರ ಕಲಾವಿದ ಎಂ ಕೃಷ್ಣ, ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಘಟಕದ ಅಧ್ಯಕ್ಷ ವೆಂಕಟೇಶ ಬೇವಿನಬೆಂಚಿ, ಕಾರ್ಯದರ್ಶಿ ತಾಯಪ್ಪ ಬಿ.ಹೊಸೂರ್, ಬಷೀರ್ ಅಹ್ಮದ್ ಹೊಸಮನಿ, ಸಾಹಿತಿಗಳಾದ ಬಾಬು ಭಂಡಾರಿಗಲ್ , ಅಯ್ಯಪ್ಪಯ್ಯ ಹುಡಾ, ಆಂಜನೇಯ ಜಾಲಿಬೆಂಚಿ, ನರಸಿಂಹಲು ವಡವಾಟಿ, ನರಸಪ್ಪ, ರುದ್ರಯ್ಯ, ಬಿ.ವಿಜಯ ರಾಜೇಂದ್ರ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...