ಮಂಗಳೂರು | ಬಿಜೆಪಿ ನೇತೃತ್ವದ ಭಾರತದಲ್ಲಿ ಯುವಜನರ ಆಶೋತ್ತರ ಕಡೆಗಣನೆ: ಸುನೀಲ್ ಕುಮಾರ್ ಬಜಾಲ್

Date:

ಭಾರತ ದೇಶದಲ್ಲಿಂದು ನಿರುದ್ಯೋಗದ ಪ್ರಮಾಣ ವಿಪರೀತವಾಗಿ ಏರಿಕೆಯಾಗಿದೆ. ಬಡತನ, ಹಸಿವು, ಅಸ್ಪ್ರಶ್ಯತೆ, ಮತೀಯವಾದದ ಸಾಗಿರುವಂತಹ ಭಾರತವನ್ನು ಭಗತ್ ಸಿಂಗ್ ಬಯಸಿರಲಿಲ್ಲ. ಕೇಂದ್ರದಲ್ಲಿ ಆಳುವ ಬಿಜೆಪಿ ನೇತೃತ್ವದ ಭಾರತದಲ್ಲಿ ಯುವಜನರ ಆಶೋತ್ತರಗಳನ್ನು ಕಡೆಗಣಿಸಲಾಗಿದೆ ಎಂದು ಡಿವೈಎಫ್ಐ ಮಾಜಿ ರಾಜ್ಯಾಧ್ಯಕ್ಷರಾದ ಸುನೀಲ್ ಕುಮಾರ್ ಬಜಾಲ್ ಕಿಡಿಕಾರಿದರು.

ಅವರು ಭಾನುವಾರ ಡಿವೈಎಫ್ಐ ಮಂಗಳೂರು ದ.ಕ ಜಿಲ್ಲಾ ಸಮಿತಿ ಭಗತ್ ಸಿಂಗರ ಹುತಾತ್ಮ ದಿನದ ಅಂಗವಾಗಿ ನಿರುದ್ಯೋಗದ ವಿರುದ್ಧ ಸೌಹಾರ್ದ ಭಾರತಕ್ಕಾಗಿ ನಗರದ ಜಿಲ್ಲಾ ಪಂಚಾಯತ್ ಕಚೇರಿಯಿಂದ ಉರ್ವಸ್ಟೋರ್ ಜಂಕ್ಷನ್ ವರೆಗೆ ನಡೆದ ಭಗತ್ ಸಿಂಗ್ ಹುತಾತ್ಮ ಜ್ಯೋತಿ ಮೆರವಣೆಗೆ ಹಾಗೂ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು.

1003893358

ಡಿವೈಎಫ್ಐ ದ.ಕ ಜಿಲ್ಲಾ ಕಾರ್ಯದರ್ಶಿ ಮಾತನಾಡುತ್ತಾ ಇವತ್ತಿನ ಶಿಕ್ಷಣ ಸಂಸ್ಥೆಗಳು ನಿರುದ್ಯೋಗಿ ಯುವಜನರನ್ನು ಸೃಷ್ಟಿಸುವ ಕಾರ್ಖಾನೆಯಾಗಿದೆ. ಶಿಕ್ಷಣ ಪಡೆದು ಹೊರ ಬರುತ್ತಿರುವ ಯುವಜನರಿಗೆ ಉದ್ಯೋಗವಿಲ್ಲ ಇರುವ ಉದ್ಯೋಗಳಿಗೆ ಭದ್ರತೆಯಿಲ್ಲ ಸಣ್ಣ ಪುಟ್ಟ ಅಂಗಡಿ ಮುಂಗಟ್ಟುಗಳಲ್ಲಿ ಕಡಿಮೆ ಆದಾಯಕ್ಕೆ ದುಡಿಯುತ್ತಿರುವ ಕಾರ್ಮಿಕರಿಗೆ ಕನಿಷ್ಠ ವೇತನವೂ ಇಲ್ಲ ಈ ಬಗ್ಗೆ ಒಬ್ಬನೇ ಒಬ್ಬ ಶಾಸಕ ವಿಧಾನಸೌಧದ ಒಳಗೆ ಧ್ವನಿ ಎತ್ತುತ್ತಿಲ್ಲ .ಅದೇ ಶಾಸಕರೆಲ್ಲ ತಮ್ಮ ಸಂಬಳ ಹೆಚ್ಚಳಗೊಳಿಸಿ ಅವರ ಬದುಕನ್ನಷ್ಟೇ ಭದ್ರಗೊಳಿಸುತ್ತಿರುವುದು ನಾಚಿಕೆಗೇಡಿನ ಸಂಗತಿ‌ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಭೆಯ ಅಧ್ಯಕ್ಷತೆ ವಹಿಸಿ ಡಿವೈಎಫ್ಐ ದ.ಕ ಜಿಲ್ಲಾಧ್ಯಕ್ಷರಾದ ಬಿ.ಕೆ ಇಮ್ತಿಯಾಜ್ ಮಾತನಾಡುತ್ತಾ, ಇಂದಿನ ಯುವತಲೆಮಾರಿಗೆ ಭಗತ್ ಸಿಂಗರ ಹೋರಾಟದ ಆಶಯಗಳನ್ನು ತಿಳಿಸುವ ಮತ್ತು ಅವರ ಕನಸಿನ ಭಾರತವನ್ನು ಕಟ್ಟುವ ಇತಿಹಾಸಗಳ ಕುರಿತು ತಿಳಿಸಬೇಕಾಗಿದೆ. ಯುವಜನರು ಎದುರಿಸುತ್ತಿರುವ ಸಮಸ್ಯೆಗಳ ವಿರುದ್ಧದ ಹೋರಾಟಗಳಿಗೆ ಅಣಿನೇರಿಸಬೇಕಾಗಿದೆ.

ವೇದಿಕೆಯಲ್ಲಿ ಡಿವೈಎಫ್ಐ ಜಿಲ್ಲಾ ಮುಖಂಡರಾದ ನವೀನ್ ಕೊಂಚಾಡಿ, ನಿತಿನ್ ಕುತ್ತಾರ್, ಪುನೀತ್ ಉರ್ವಸ್ಟೋರ್, ಮಾಧುರಿ ಬೋಳಾರ್ ಉಪಸ್ಥಿತರಿದ್ದರು.

ಈ ವೇಳೆ ಡಿವೈಎಫ್ಐ ಜಿಲ್ಲಾ ಮುಖಂಡರಾದ ಜಗದೀಶ್ ಬಜಾಲ್, ರಿಜ್ವಾನ್ ಹರೇಕಳ,‌ ರಾಜೇಶ್ ಉರ್ವಸ್ಟೋರ್, ಮನೋಜ್ ಉರ್ವಸ್ಟೋರ್, ಪ್ರದೀಪ್, ಧಿರಾಜ್ ಬಜಾಲ್, ಪ್ರಕಾಶ್ ಶೆಟ್ಟಿ ಬಜಾಲ್, ಭಾರತೀ ಬೋಳಾರ, ದಯಾನಂದ ಶೆಟ್ಟಿ, ಇಕ್ಬಾಲ್ ಉರ್ವಸ್ಟೋರ್ ಮುಂತಾದವರು ಉಪಸ್ಥಿತರಿದ್ದರು.

1003893354
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...