ಭಾಲ್ಕಿ | ನಾಳೆ ಬಾಳೂರನಲ್ಲಿ ಭಗವಾನ್ ಬುದ್ಧ ಪ್ರತಿಮೆ ಅನಾವರಣ

Date:

ಭಾಲ್ಕಿ ತಾಲೂಕಿನ ಬಾಳೂರ ಗ್ರಾಮದ ವಿದ್ಯಾಭಾರತಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ಉದ್ಘಾಟನೆ, ಶಾಲಾ ವಾರ್ಷಿಕೋತ್ಸವ ಹಾಗೂ ಭಗವಾನ್ ಬುದ್ಧ ಪ್ರತಿಮೆ ಅನಾವರಣ ಸಮಾರಂಭವನ್ನು ನಾಳೆ ಶಾಲೆಯ ಆವರಣದಲ್ಲಿ ನಡೆಯಲಿದೆ.

ಅಂದು ಬೆಳಿಗ್ಗೆ 11 ಗಂಟೆಗೆ ಗ್ರಾಮದಲ್ಲಿ ಭಗವಾನ್ ಗೌತಮ ಬುದ್ಧರ ಪ್ರತಿಮೆಯೊಂದಿಗೆ ಭವ್ಯ ಮೆರವಣಿಗೆ ನಡೆಯಲಿದ್ದು, ಮಧ್ಯಾಹ್ನ 12.30 ಗಂಟೆಗೆ ವೇದಿಕೆ ಕಾರ್ಯಕ್ರಮ ಜರುಗಲಿದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಡಾ.ಕಾಶಿನಾತ ಚೆಲ್ವಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಣದೂರ ಬುದ್ಧ ವಿಹಾರದ ಭಂತೆ ವರಜ್ಯೋತಿ, ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಸಾನಿಧ್ಯ ವಹಿಸಲಿದ್ದಾರೆ. ನೂತನ ಶಾಲಾ ಕಟ್ಟಡದ ಉದ್ಘಾಟನೆಯನ್ನು ಅರಣ್ಯ, ಪರಿಸರ, ಜೀವಿಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ನೆರವೇರಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗೌತಮ ಬುದ್ಧ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಕಾಶಿನಾಥ ಚೆಲ್ವಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೀದರ್ ಸಂಸದರಾದ ಸಾಗರ ಖಂಡ್ರೆ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಾಲಾ ಬಿ. ನಾರಾಯಣರಾವ್, ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬೀಳಿಮಲೆ, ಕಾರ್ಯದರ್ಶಿ ಪ್ರಕಾಶ ಮತ್ತಿಹಳ್ಳಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ ಭಾಗವಹಿಸಲಿದ್ದಾರೆ.

ಸಮಾರಂಭದಲ್ಲಿ ಕಾಂಗ್ರೆಸ್ ಮುಖಂಡರಾದ ದಶರಥ ದೊಡ್ಡಿ, ಬಸವರಾಜ ಬುಳ್ಳಾ, ಬಕ್ಕಪ್ಪ ಕೋಟೆ, ಶಿವರಾಜ ಹಾಸನಕರ್ ಹಾಗೂ ನ್ಯಾಯವಾದಿ ಬಾಪುರಾವ ದೇಶಮುಖ, ಬಾಳೂರ ಗ್ರಾಮ ಪಂಚಾಯತ್ ಅಧ್ಯಕ್ಷೆ ಲಕ್ಷ್ಮೀಬಾಯಿ ಚೆಲ್ವಾ, ಮಾಜಿ ಉಪಾಧ್ಯಕ್ಷ ಸಿದ್ರಾಮ ದೇಶಮುಖ ಸೇರಿದಂತೆ ವಿವಿಧ ಸಮಾಜದ ಗಣ್ಯರು, ಮುಖಂಡರು, ಅಧಿಕಾರಿಗಳು, ಸಾಮಾಜಿಕ ಚಿಂತಕರು ಪಾಲ್ಗೊಳ್ಳಲಿದ್ದಾರೆ.

ಇದನ್ನೂ ಓದಿ : ಬೀದರ್‌ | ವಿದ್ಯುತ್‌ ಶಾರ್ಟ್‌ ಸರ್ಕೀಟ್‌ : 4 ಎಕರೆ ಕಬ್ಬು ಬೆಂಕಿಗಾಹುತಿ, ಪರಿಹಾರಕ್ಕೆ ಮನವಿ

ಬಳಿಕ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ವಿಶೇಷ ಸನ್ಮಾನ, ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...