ಮೈಸೂರು | ಮಾನಸಿಕ ತೊಳಲಾಟವನ್ನು ಮಣಿಸುವ ಶಕ್ತಿ ಭರತನಾಟ್ಯಕ್ಕಿದೆ: ಡಾ ಎನ್ ಶ್ರೀನಿವಾಸ್

Date:

ಆಧುನಿಕ ಪ್ರಪಂಚದಲ್ಲಿ ತಾಂತ್ರಿಕತೆಯನ್ನು ಕಂಡ ಮನುಷ್ಯ ಮಾನಸಿಕ ನೆಮ್ಮದಿಯ ಹುಡುಕಾಟದಲ್ಲಿದ್ದಾನೆ. ಆತನ ಮಾನಸಿಕ ತೊಳಲಾಟವನ್ನು ಮಣಿಸುವ ಶಕ್ತಿ ಭರತನಾಟ್ಯಕ್ಕಿದೆ ಎಂದು ಯೋಗನರಸಿಂಹ ಸ್ವಾಮಿ ದೇವಸ್ಥಾನದ ಆಡಳಿತಾಧಿಕಾರಿ ಡಾ.ಎನ್. ಶ್ರೀನಿವಾಸನ್ ಅಭಿಪ್ರಾಯಪಟ್ಟರು.

ಮೈಸೂರಿನ ಜಗನ್ಮೋಹನ ಅರಮನೆ ಆವರಣದಲ್ಲಿ ಗುರುದೇವ ಅಕಾಡೆಮಿ ಆಫ್ ಫೈನ್‌ಆರ್ಟ್ ವತಿಯಿಂದ ಶನಿವಾರ ಆಯೋಜಿಸಲಾಗಿದ್ದ ಚೇತನೋತ್ಸವ-೨೦೨೬ ಶಾಸ್ತ್ರೀಯ ನೃತ್ಯಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಆಧುನಿಕತೆಯ ಜಗದೊಳಗೆ ನಮ್ಮ ದೇಶದ ಸಂಸ್ಕೃತಿ, ಪರಂಪರೆಯನ್ನು ಮೈಗೂಡಿಸಿಕೊಳ್ಳುವಂತೆ ಪ್ರೇರೇಪಿಸಲು ಶಾಸ್ತ್ರೀಯ ನೃತ್ಯ ಕಲೆಗಳು ಉತ್ತಮ ಆಯ್ಕೆಯಾಗಿದೆ. ಇದು ರೋಗಕ್ಕೆ ಮದ್ದಾಗಿ ಕೆಲಸ ಮಾಡುತ್ತದೆ. ಆಧ್ಯಾತ್ಮಿಕ ಹಿನ್ನೆಲೆ, ಸಾಂಪ್ರದಾಯಿಕ ಪರಂಪರೆ ಒಳಗೊಂಡ ಶಿಕ್ಷಣ ನೀಡುವಲ್ಲಿ ಗುರುದೇವ ಅಕಾಡೆಮಿ ಆಫ್ ಫೈನ್‌ಆರ್ಟ್ ವಿಶೇಷ ಕಾಳಜಿ ವಹಿಸುತ್ತಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ. ದೀಪಕ್ ಮಾತನಾಡಿ, “ಈ ಹಿಂದೆ ಮಕ್ಕಳನ್ನು, ತಮ್ಮ ಹಿರಿಯರ ಹೋಲಿಕೆ ಅನುಗುಣವಾಗಿ ಗುರುತಿಸುತ್ತಿದ್ದೆವು. ಈಗ ಕಾಲ ಬದಲಾಗಿದೆ. ಮೊಬೈಲ್‌ನಂತೆ ಮಕ್ಕಳು ಎನ್ನುವ ಕಾಲಘಟ್ಟಕ್ಕೆ ಬಂದು ನಿಂತಿದ್ದೇವೆ. ಅತೀ ವೇಗದ ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಈ ದೇಶದ ಪರಂಪರೆ, ಸಂಸ್ಕೃತಿ, ಐತಿಹಾಸಿಕತೆ ಹಿನ್ನೆಲೆಯನ್ನು ಮೈಗೂಡಿಸಿಕೊಂಡು, ಡಿಜಿಟಲ್ ಜಗತ್ತಿಗೆ ತನ್ನ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕಿದೆ. ಇಂದಿನ ಕಾಲಘಟ್ಟದಲ್ಲಿ ಮಕ್ಕಳು ಯಶಸ್ವಿಯಾಗಬೇಕಾದರೆ ಸಹಜ ಶಿಕ್ಷಣದೊಂದಿಗೆ ಕೌಶಲ್ಯ ಇರಬೇಕು ಎಂದು ಹೇಳುತ್ತಾರೆ. ಆದರೆ, ಅವರಲ್ಲಿ ಕೌಶಲದೊಂದಿಗೆ ಸಂಸ್ಕೃತಿಯನ್ನು ಜೊತೆಯಾಗಿಸಿ ಮುಂದೆ ಸಾಗಿದಾಗ ಯಶಸ್ಸು ತಮ್ಮದಾಗುತ್ತದೆ” ಎಂದು ಕಿವಿಮಾತು ಹೇಳಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಗಾಂಧೀ ದೇಶಪ್ರೇಮ ಮೈಗೂಡಿಸಿಕೊಳ್ಳಿ : ಡಾ ಕವಿತಾ ರೈ

ಗುರುದೇವ ಅಕಾಡೆಮಿ ಆಫ್ ಫೈನ್‌ಆರ್ಟ್ ವತಿಯಿಂದ ಸಮಾಜ ಸೇವಕ ಅಚ್ಯುತ ರಾಮಪ್ರಸಾದ ಕಾಮತ್ ಅವರಿಗೆ ಗುರುದೇವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ತಾ.ಪಂ ಮಾಜಿ ಅಧ್ಯಕ್ಷ ಎಂ. ಮಲ್ಲಿಕಾರ್ಜುನ ಸ್ವಾಮಿ, ವಕೀಲ ವಿಶ್ವನಾಥ್ ದೇವಸ್ಯ, ವ್ಯವಸ್ಥಾಪಕ ನಿರ್ದೇಶಕ ಪಿ.ಎಂ. ರಾಧಾಕೃಷ್ಣ, ಕಲಾತ್ಮಕ ನಿರ್ದೇಶಕ ಡಾ. ಚೇತನ ರಾಧಾಕೃಷ್ಣ ಕಾರ್ಯಕ್ರಮದಲ್ಲಿ ಇದ್ದರು.

ಈ ವಿಡಿಯೋ ವೀಕ್ಷಿಸಿ:https://youtu.be/yue3D6jXHgI?si=0hfXbtYRTM1bGbLC

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...