ಹಾಂಗ್‌ಕಾಂಗ್‌ ಸಾಂಸ್ಕೃತಿಕ ಉತ್ಸವದಲ್ಲಿ ತುಮಕೂರಿನ ʼಸ್ವರವಿ ಕಲಾ ಕೇಂದ್ರʼದಿಂದ ಭರತನಾಟ್ಯ ಪ್ರದರ್ಶನ

Date:

ಹಾಂಗ್‌ಕಾಂಗ್‌ ವಿಶ್ವವಿದ್ಯಾಲಯ ಹಾಗೂ ಹಾಂಗ್‌ಕಾಂಗ್‌ ಸ್ಥಳೀಯ ಕನ್ನಡ ಸಂಘದ ಸಂಯುಕ್ತಾಶ್ರಯದಲ್ಲಿ ಹಾಂಗ್‌ಕಾಂಗ್‌ನಲ್ಲಿ ಆಯೋಜಿಸಲಾಗಿದ್ದ ‘ಮಲ್ಟಿ-ಕಲ್ಚರಲ್ ಅಂಡ್ ಗ್ಲೋಬಲ್ ಡೈವರ್ಸಿಟಿ ಪ್ರಾಜೆಕ್ಟ್’ ಅಂತಾರಾಷ್ಟ್ರೀಯ ಸಾಂಸ್ಕೃತಿಕ ವೇದಿಕೆಯಲ್ಲಿ ತುಮಕೂರಿನ ಪ್ರತಿಷ್ಠಿತ ಕಲಾಸಂಸ್ಥೆ ಸ್ವರವಿ ಆರ್ಟ್ಸ್ ಫೌಂಡೇಶನ್ ರಾಜ್ಯವನ್ನು ಪ್ರತಿನಿಧಿಸಿ ಉತ್ತಮ ಪ್ರದರ್ಶನ ನೀಡಿ, ಗಮನ ಸೆಳೆದಿದೆ.

WhatsApp Image 2025 05 07 at 6.17.31 PM

ಹಾಂಗ್‌ಕಾಂಗ್‌ ವಿಶ್ವವಿದ್ಯಾಲಯದ ಪ್ರಸಿದ್ಧ ರೇಸನ್ ಹುವಾಂಗ್ ರಂಗಮಂದಿರದಲ್ಲಿ ಆಯೋಜನೆಯಾಗಿದ್ದ ಈ ಕಾರ್ಯಕ್ರಮದಲ್ಲಿ, ಸ್ವರವಿ ತಂಡವು ಕರ್ನಾಟಕದ ಶಾಸ್ತ್ರೀಯ ಕಲಾ ಪ್ರಕಾರವಾದ ಭರತನಾಟ್ಯಕ್ಕೆ ವಿಶೇಷ ಒತ್ತು ನೀಡಿ, ಕಲೆಯ ಔನ್ನತ್ಯತೆ ಹಾಗೂ ವೈಶಿಷ್ಟ್ಯತೆಯನ್ನು ಪ್ರಪಂಚದ ಎದುರು ಪ್ರದರ್ಶಿಸಿತು. ಕರ್ನಾಟಕದ ಹೆಮ್ಮೆಯ ಜಾನಪದ ಕಲೆಯಾದ ಯಕ್ಷಗಾನದ ರೋಮಾಂಚಕ ಪ್ರಸ್ತುತಿಯೊಂದಿಗೆ ಅವರು ಪ್ರೇಕ್ಷಕರನ್ನು ಮತ್ತಷ್ಟು ಆಕರ್ಷಿಸಿದರು. ತಂಡವು ನೀಡಿದ ಎರಡೂವರೆ ಗಂಟೆಗಳ ಅತ್ಯುತ್ತಮ ಪ್ರದರ್ಶನದಲ್ಲಿ, ಸಂವಾದಕ ಭರತನಾಟ್ಯ ಹಾಗೂ ಜನಪದ ಕಾರ್ಯಾಗಾರಗಳು ಸಹ ಸೇರಿದ್ದವು. ಈ ಪ್ರದರ್ಶನಕ್ಕೆ ಕಲಾವಿದರಿಗೆ ಉತ್ತಮ ಬೆಂಬಲದ ಪ್ರತಿಕ್ರಿಯೆ ದೊರೆಯಿತು.

WhatsApp Image 2025 05 07 at 6.17.32 PM 2

ಕಾರ್ಯಕ್ರಮವನ್ನು ತುಮಕೂರಿನ ಪ್ರಸಿದ್ಧ ಕಲಾವಿದೆ ವಿದುಷಿ ವರ್ಷ ರವಿಪ್ರಕಾಶ್ ನೇತೃತ್ವದಲ್ಲಿ ನಡೆಸಲಾಯಿತು. ಇವರೊಂದಿಗೆ ಪ್ರತಿಭಾನ್ವಿತ ಹೆಸರಾಂತ ಕಲಾವಿದೆಯರಾದ ಮೇಘನಾ ಬಾಲಾಜಿ ಮತ್ತು ಕಾಜಲ್ ಬಂಗೇರಾ ಅವರು ಕರ್ನಾಟಕದ ಸಾಂಸ್ಕೃತಿಕ ಪರಂಪರೆಯ ಚೈತನ್ಯವನ್ನು ಜಾಗತಿಕ ವೇದಿಕೆಗೆ ತರುವಲ್ಲಿ ಸಹಕರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ತುಮಕೂರು | ಖಾಸಗೀಕರಣ ಸಾಮಾಜಿಕ ಭದ್ರತೆ ಕಿತ್ತುಕೊಂಡಿದೆ : ಬಿ. ಸುರೇಶ್

ಕಾರ್ಯಕ್ರಮದಲ್ಲಿ ಭಾರತದ ಹಾಂಗ್‌ಕಾಂಗ್‌ ಕಾನ್ಸುಲೇಟ್‌ನ ಕೌನ್ಸುಲ್ ಸುರಭಿ ಗೋಯಲ್ ಪಾಲ್ಗೊಂಡು ತಂಡದ ಅಸಾಧಾರಣ ಪ್ರಸ್ತುತಿಯನ್ನು ಶ್ಲಾಘಿಸಿದರು. ಹಾಂಗ್‌ಕಾಂಗ್‌ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ವಾಸ್ಕಜ್, ಪ್ರೊ. ಕಿಮ್ ಮತ್ತು ಶ್ರೀ ನಕ್ಕಾ, ಕನ್ನಡ ಸಂಘದ ಅಧ್ಯಕ್ಷೆ ವಾಣಿ ರಾಮೇಶ್ ಬಾಬು, ಕಾರ್ಯದರ್ಶಿ ಡಾ. ಪ್ರದೀಪ್ ಉಪಸ್ಥಿತರಿದ್ದು, ತಂಡದ ಪ್ರದರ್ಶನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

WhatsApp Image 2025 05 07 at 6.17.31 PM 1

ತುಮಕೂರು ಮತ್ತು ಬೆಂಗಳೂರಿನಲ್ಲಿ ಶಾಲೆಗಳನ್ನು ಹೊಂದಿರುವ ಸ್ವರವಿ ಆರ್ಟ್ಸ್ ಫೌಂಡೇಶನ್ ತನ್ನ ಕಲಾತ್ಮಕ ಶಿಸ್ತು, ತಾಂತ್ರಿಕ ಪರಿಣಿತಿ ಹಾಗೂ ನೃತ್ಯದ ಆಧ್ಯಾತ್ಮಿಕ ಅಂಶಗಳ ಮೂಲಕ ಕನ್ನಡದ ಸಾಂಸ್ಕೃತಿಕ ಪರಂಪರೆಯ ಪ್ರಭಾವವನ್ನು ಜಗತ್ತಿನಾದ್ಯಂತ ಹರಡುವ ಯೋಜನೆಯನ್ನು ಕೈಗೆತ್ತಿಕೊಂಡು ಮುನ್ನಡೆಯುತ್ತಿದೆ.

WhatsApp Image 2025 05 07 at 6.17.32 PM 1
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...