ಭಟ್ಕಳ | ​ಮದುವೆ ಸಂಭ್ರಮ ಬಿಟ್ಟು ಫ್ಯಾಕ್ಟರಿಯಲ್ಲಿ ಕೂಲಿ ಕೆಲಸಕ್ಕೆ ಸೇರಿದ್ದ ಯುವಕ: 3 ತಿಂಗಳ ಬಳಿಕ ತುಮಕೂರಿನಲ್ಲಿ ಪತ್ತೆ!

Date:

ಭಟ್ಕಳ: ಮದುವೆಗೆಂದು ವಿದೇಶದಿಂದ ಊರಿಗೆ ಬಂದು, ಚಿನ್ನ ಖರೀದಿಸಲು ಹೋದವನು ಮಸೀದಿಯಿಂದ ನಾಪತ್ತೆಯಾದ ರೋಚಕ ಪ್ರಕರಣವೊಂದನ್ನು ಭಟ್ಕಳ ಪೊಲೀಸರು ಭೇದಿಸಿದ್ದಾರೆ.

ಕಳೆದ ಮೂರೂವರೆ ತಿಂಗಳಿನಿಂದ ಪೊಲೀಸರಿಗೆ ಸವಾಲಾಗಿದ್ದ ಕುಮಟಾ ಮೂಲದ ಯುವಕ ಜಾಕೀರ್ ಬೇಗ (33) ಎಂಬುವವರು ತುಮಕೂರಿನ ಫ್ಯಾಕ್ಟರಿಯೊಂದರಲ್ಲಿ ಪತ್ತೆಯಾಗಿದ್ದಾರೆ.

ಪ್ರಕರಣದ ಹಿನ್ನೆಲೆ: ವಿದೇಶದಲ್ಲಿ ಉದ್ಯೋಗದಲ್ಲಿದ್ದ ಜಾಕೀರ್ ಬೇಗ ಅವರಿಗೆ ಕೆಲವೇ ದಿನಗಳಲ್ಲಿ ಮದುವೆ ನಿಶ್ಚಯವಾಗಿತ್ತು. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 18, 2025 ರಂದು ತಮ್ಮ ಅತ್ತಿಗೆ ಹಾಗೂ ಸಂಬಂಧಿಕರೊಂದಿಗೆ ಮದುವೆಗೆ ಚಿನ್ನಾಭರಣ ಖರೀದಿಸಲು ಕುಮಟಾದಿಂದ ಭಟ್ಕಳಕ್ಕೆ ಬಂದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಧ್ಯಾಹ್ನ 1:15ರ ಸುಮಾರಿಗೆ ಇಲ್ಲಿನ ನೂರಪಳ್ಳಿ ಮಸೀದಿಗೆ ನಮಾಜ್‌ಗೆಂದು ಹೋದವರು ಮರಳಿ ಬಂದಿರಲಿಲ್ಲ. ಮೊಬೈಲ್ ಕೂಡ ಸ್ವಿಚ್ ಆಫ್ ಮಾಡಿಕೊಂಡಿದ್ದರಿಂದ ಆತಂಕಗೊಂಡ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದರು.

ಭಟ್ಕಳ ಶಹರ ಪೊಲೀಸರು ಪ್ರಕರಣದ ತನಿಖೆಯನ್ನು ತಾಂತ್ರಿಕ ಹಂತದಲ್ಲಿ ತೀವ್ರಗೊಳಿಸಿದಾಗ, ಜಾಕೀರ್ ತನ್ನ ಮೊಬೈಲ್ ಫೋನ್ ಅನ್ನು ಮಾರಾಟ ಮಾಡಿರುವುದು ಬೆಳಕಿಗೆ ಬಂದಿದೆ. ಈ ಸುಳಿವನ್ನೇ ಬೆನ್ನತ್ತಿದ ಇನ್ಸ್‌ಪೆಕ್ಟರ್ ದಿವಾಕರ್ ಪಿ.ಎಂ ಹಾಗೂ ಪಿ.ಎಸ್.ಐ ನವೀನ ನಾಯ್ಕ ನೇತೃತ್ವದ ವಿಶೇಷ ತಂಡಕ್ಕೆ ಜಾಕೀರ್ ತುಮಕೂರಿನಲ್ಲಿರುವ ಮಾಹಿತಿ ಲಭ್ಯವಾಯಿತು.

ಈ ಸುದ್ದಿ ಓದಿದ್ದೀರಾ ? ಕಾರವಾರ | ಸರಕಾರಿ ಬಾಲಮಂದಿರದಲ್ಲಿ ಪೋಕ್ಸೋ ಸಂತ್ರಸ್ತೆಯ ಆತ್ಮಹತ್ಯೆ ಯತ್ನ; ಆಸ್ಪತ್ರೆಗೆ ದಾಖಲು

ಪೊಲೀಸರು ಅಲ್ಲಿಗೆ ದಾಳಿ ನಡೆಸಿದಾಗ, ವಿದೇಶದಲ್ಲಿ ಕೈತುಂಬಾ ಸಂಪಾದಿಸುತ್ತಿದ್ದ ಯುವಕ ಮದುವೆ ಸಂಭ್ರಮವನ್ನು ಬಿಟ್ಟು ಅಲ್ಲಿನ ಕಾರ್ಖಾನೆಯೊಂದರಲ್ಲಿ ಕೂಲಿ ಕೆಲಸಕ್ಕೆ ಸೇರಿಕೊಂಡಿರುವುದು ಪತ್ತೆಯಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಪಿಎಸ್‌ಐ ನವೀನ್ ನಾಯ್ಕ್ ಮತ್ತು ಸಿಬ್ಬಂದಿಗಳಾದ ರವಿ ಪಟಗಾರ, ದೇವು ನಾಯ್ಕ್, ಕಾಶಿನಾಥ ಹಾಗೂ ಟೆಕ್ನಿಕಲ್ ಸೆಲ್‌ನ ಉದಯ್ ಮತ್ತು ಬಬನ್ ಕದಂ ಪಾಲ್ಗೊಂಡಿದ್ದರು.

ಅತ್ಯಂತ ಕ್ಲಿಷ್ಟಕರವಾಗಿದ್ದ ಈ ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿದ ಪೊಲೀಸ್ ತಂಡದ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...