ಭಟ್ಕಳ | ರಾಜ್ಯ ಸರ್ಕಾರದಿಂದ ‘ಭಟ್ಕಳ ನಗರಸಭೆ’ ಅಂತಿಮ ಅಧಿಸೂಚನೆ: 22.67 ಚ.ಕಿ.ಮೀ ಪ್ರದೇಶ ನಗರಸಭೆ ವ್ಯಾಪ್ತಿಗೆ

Date:

ಭಟ್ಕಳ: ರಾಜ್ಯ ಸರ್ಕಾರವು ಭಟ್ಕಳವನ್ನು ಅಧಿಕೃತವಾಗಿ ಪುರುಸಭೆಯಿಂದ ‘ನಗರಸಭೆ’ ದರ್ಜೆಗೆ ಮೇಲ್ದರ್ಜೆಗೇರಿಸಿ ಅಂತಿಮ ಅಧಿಸೂಚನೆಯನ್ನು ಪ್ರಕಟಿಸಿದೆ. ಹೊಸ ನಗರಸಭೆ ವ್ಯಾಪ್ತಿಯಲ್ಲಿ ಭಟ್ಕಳ ಪುರಸಭೆ, ಜಾಲಿ ಪಟ್ಟಣ ಪಂಚಾಯಿತಿ ಹಾಗೂ ಹೆಬಳೆ ಗ್ರಾಮ ಪಂಚಾಯಿತಿ ಸೇರಿ ಒಟ್ಟು 22.67 ಚದರ ಕಿಲೋಮೀಟರ್ ಪ್ರದೇಶ ನಿಗದಿಯಾಗಿದೆ.

ನಗರಸಭೆ ರಚನೆ ಪ್ರಕ್ರಿಯೆಯಲ್ಲಿ, “ಮುಸ್ಲಿಂ ಬಾಹುಳ್ಯ ಪ್ರದೇಶಗಳನ್ನು ಮಾತ್ರ ಸೇರಿಸಲಾಗಿದೆ” ಎಂಬ ಆಪಾದನೆಗಳನ್ನು ಮಾಡುತ್ತಿದ್ದ ಬಿಜೆಪಿ ಸ್ಥಳೀಯ ಮುಖಂಡರು, ಆಗಸ್ಟ್ 25ರಂದು ಪ್ರಕಟವಾದ ಕರಡು ಅಧಿಸೂಚನೆಗೆ ಯಾವುದೇ ಅಧಿಕೃತ ಆಕ್ಷೇಪಣೆ ಸಲ್ಲಿಸದೇ ಇರುವುದೇ ಇದೀಗ ಬಹಿರಂಗವಾಗಿದೆ. ಒಂದು ತಿಂಗಳ ಕಾಲ ಅವಕಾಶ ನೀಡಿದ್ದರೂ ಯಾವುದೇ ಆಕ್ಷೇಪಣೆ ದಾಖಲಾಗದ ಕಾರಣ, ಕರಡು ಅಧಿಸೂಚನೆಯಲ್ಲಿದ್ದದ್ದೇ ಗಡಿಯನ್ನು ಅಂತಿಮಗೊಳಿಸಲಾಗಿದೆ ಎಂದು ನಗರಾಭಿವೃದ್ಧಿ ಇಲಾಖೆ ತಿಳಿಸಿದೆ.

2015ರಿಂದಲೇ ಭಟ್ಕಳವನ್ನು ನಗರಸಭೆ ಮಾಡುವ ಪ್ರಕ್ರಿಯೆ ಆರಂಭವಾಗಿತ್ತು. 2025ರ ಜನವರಿ 12ರಂದು ನಗರಾಭಿವೃದ್ಧಿ ಸಚಿವರಿಗೆ ಬರೆದ ಪತ್ರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯರು, “2011ರ ಜನಗಣತಿ ಪ್ರಕಾರ ಭಟ್ಕಳದಲ್ಲಿ 32 ಸಾವಿರ, ಜಾಲಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 19 ಸಾವಿರ ಮತ್ತು ಹೆಬಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 19 ಸಾವಿರ ಜನಸಂಖ್ಯೆ ಇತ್ತು. ಈಗ ಈ ಮೂರು ಪ್ರದೇಶಗಳು ಸೇರಿ 75 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಆಗಲಿದ್ದು, ಭಟ್ಕಳದಲ್ಲಿ ನಗರಸಭೆ ರಚನೆ ಅಗತ್ಯ” ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಟ್ಕಳ ನಗರಸಭೆ ರಚನೆಗೆ ನಮ್ಮ ಕಡೆಯಿಂದ ಯಾವುದೇ ವಿರೋಧ ಇಲ್ಲ, ಭಟ್ಕಳ ಪುರಸಭೆ ಗಡಿಗೆ ಹೊಂದಿಕೊಂಡಿರುವ ಶಿರಾಲಿ, ಯಲ್ಪಡಿಕವೂರು, ಮಾವಿನಕುರ್ವಾ, ಮುಟ್ಟಳ್ಳಿ, ಮುಂಡಳ್ಳಿ ಪ್ರದೇಶಗಳನ್ನೂ ಭಟ್ಟಕಳಕ್ಕೆ ಸೇರಿಸಿ ನಗರಸಭೆಯನ್ನಾಗಿಸಿ ಎಂದು ಬಿಜೆಪಿ ಮುಖಂಡರು ಆಗಾಗ ಹೇಳುತ್ತಿದ್ದರು. ಆದರೆ, ಕರಡು ಅಧಿಸೂಚನೆಯ ಸಂದರ್ಭದಲ್ಲಿ ಈ ವಿಷಯವಾಗಿ ಸ್ಥಳೀಯ ಬಿಜೆಪಿ ಮುಖಂಡರು ಯಾವುದೇ ರೀತಿಯ ಅಧಿಕೃತ ಆಕ್ಷೇಪಣೆ ಸಲ್ಲಿಸದಿರುವುದು ಗಮನಾರ್ಹವಾಗಿದೆ.

ಈ ಸುದ್ದಿ ಓದಿದ್ದೀರಾ? ಮುಂಡಗೋಡ | ʼನಮ್ಮದೇ ಜಮೀನಿಗೆ ಕಾಲಿಟ್ಟರೆ ಕಳ್ಳತನದ ಕೇಸ್ ಹಾಕ್ತಾರೆʼ: ದಲಿತ ಮಹಿಳೆಯರ ಆರೋಪ

ನಗರಸಭೆಯ ಗಡಿ ವಿವರ: ಅಂತಿಮ ಅಧಿಸೂಚನೆಯ ಪ್ರಕಾರ, ಗಡಿ ಜಾಲಿ ಗ್ರಾಮದ ಸರ್ವೆ ನಂ. 251ರ ವಾಯುವ್ಯ ತುದಿಯಿಂದ ಆರಂಭವಾಗಿ,ವೆಂಕಾಪುರಹೊಳೆ ಭಾಗ → ಸೂಸಗಡಿ ಗ್ರಾಮ → ಪಟ್ಟದ ಹೊಳೆ → ಪುರವರ್ಗ–ಸೊಸಗಡಿ ಗಡಿಯ ಸಂಗಮ → ಸರಾಬಿಹೂಳೆ ಹೊಳೆಯ ಬಲದಂಡ → ಭಟ್ಕಳ–ಗೊರಟೆ ಸಂಪರ್ಕ ರಸ್ತೆ → ಪುರವರ್ಗ ಗ್ರಾಮದ ಭಾಗ → ಮುಂಡಳ್ಳಿಗಿಂದ ಬರುವ ರಸ್ತೆ → ಚೌಥನಿ ಗ್ರಾಮದ ಗಡಿ → ಸರಾಬಿ ಹೊಳೆಯ ಎಡದಂಡ → ಮತ್ತೆ ಸೂಸಗಡಿ ಗ್ರಾಮದ ಭಾಗ → ಅಂತಿಮವಾಗಿ ಜಾಲಿ ಗ್ರಾಮದ ಗಡಿಯನ್ನು ಸೇರಿಕೊಳ್ಳುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...