ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

Date:

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು ಬೆದರಿಸಿ ₹20 ಲಕ್ಷ ರೂಪಾಯಿ ಸುಲಿಗೆ ಮಾಡಲು ಯತ್ನಿಸಿದ ಮೂವರು ಯುವಕರನ್ನು ಭಟ್ಕಳ ನಗರ ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ.

ಆಗಸ್ಟ್ 16ರ ರಾತ್ರಿ ವ್ಯಾಪಾರಿಯೊಬ್ಬರು ತಮ್ಮ ಅಂಗಡಿಯಲ್ಲಿ ಇದ್ದಾಗ ಅಪರಿಚಿತರಿಂದ ಫೋನ್‌ ಕರೆ ಬಂದಿದ್ದು, “ನಿನ್ನ ಮಗಳ ಖಾಸಗಿ ಚಿತ್ರ–ವಿಡಿಯೊ ನಮ್ಮ ಬಳಿ ಇದೆ. ತಕ್ಷಣ ₹20 ಲಕ್ಷ ಕೊಡಬೇಕು. ಇಲ್ಲವಾದರೆ ವಿಡಿಯೊ ವೈರಲ್ ಮಾಡಿ ನಿನ್ನ ಮಾನ ಮರ್ಯಾದೆ ಹಾಳು ಮಾಡುತ್ತೇವೆಂದು ಆರೋಪಿಗಳು ಬೆದರಿಕೆ ಹಾಕಿದ್ದಾರೆ. ಬಳಿಕ ಆಗಸ್ಟ್ 18 ಮತ್ತು 19ರಂದು ವ್ಯಾಪಾರಿ ಪತ್ನಿಯ ಮೊಬೈಲ್‌ಗೆ ಕರೆ ಮಾಡಿ, ₹20 ಲಕ್ಷ ಸಾಧ್ಯವಿಲ್ಲದಿದ್ದರೂ ಕನಿಷ್ಠ ₹15 ಲಕ್ಷ ಕೊಡಲೇಬೇಕು” ಎಂದು ಒತ್ತಾಯ ಮಾಡಿ ತಂದೆ ತಾಯಿಗೆ ಮಾನಸಿಕ ಹಿಂಸೆ ನೀಡಿದ್ದಾರೆ.

ಇದರಿಂದ ಬೇಸತ್ತು ಯುವತಿಯ ಪೋಷಕರು ಭಟ್ಕಳ ಪೋಲಿಸರಿಗೆ ದೂರನ್ನು ನೀಡಿದ್ದು, ದೂರು ಸ್ವೀಕರಿಸಿದ ಪೊಲೀಸರು ಇನ್ಸ್‌ಪೆಕ್ಟರ್ ದಿವಾಕರ ಹಾಗೂ ಪಿಎಸ್‌ಐ ನವೀನ್ ನಾಯ್ಕ ಅವರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ, ಆರೋಪಿಗಳಾದ ಮೊಹಮ್ಮದ್ ಫಾರಿಸ್, ಮೊಹಮ್ಮದ್ ಅರ್ಶದ್ ಮತ್ತು ವಿದ್ಯಾರ್ಥಿ ಅಮನ್ ಎಂಬುವವರನ್ನು ಪತ್ತೆಹಚ್ಚಿ ಬಂಧಿಸಿದರು. ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ಆಪರೇಷನ್ ಯಶಸ್ವಿಯಾಗಲು ಮಹೇಶ್ ಎಂ ಕೆ ಅವರ ಮಾರ್ಗದರ್ಶನ ದೊರೆತಿದ್ದು, ಠಾಣೆಯ ಸಿಬ್ಬಂದಿ ದಿನೇಶ್ ನಾಯಕ, ವಿನಾಯಕ ಪಾಟೀಲ್, ನಾಗರಾಜ ಮೊಗೇರ, ಮಹಾಂತೇಶ ಹಿರೇಮಠ, ಕಾಶಿನಾಥ ಕೊಟಗುಣಸಿ, ಲೊಕೇಶ ಕತ್ತಿ, ಮಹೇಶ್ ಅಮಗೋತ, ರಾಘವೇಂದ್ರ ಗೌಡ, ಜಗದೀಶ ನಾಯಕ ಹಾಗೂ ಜಿಲ್ಲಾ ತಾಂತ್ರಿಕ ವಿಭಾಗದ ಬಬನ್ ಮತ್ತು ಉದಯ ಎಂಬುವವರು ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...