ಅಪಾಯದ ಸ್ಥಿತಿಯಲ್ಲಿ ಭೀಮನಕಟ್ಟೆ ತೂಗು ಸೇತುವೆ; ದುರಸ್ತಿಗೆ ಗ್ರಾಮಸ್ಥರ ಮನವಿ

Date:

ತೀರ್ಥಹಳ್ಳಿ ತಾಲ್ಲೂಕಿನ ರಜಂದಕಟ್ಟೆ ಸಮೀಪದ ಭೀಮನಕಟ್ಟೆ ತೂಗು ಸೇತುವೆ ಈಗ ನಿರ್ವಹಣೆ ಇಲ್ಲದೆ ತುಕ್ಕು ಹಿಡಿಯಲಾರಂಭಿಸಿದೆ. ಸೇತುವೆ 2007ರಲ್ಲಿ ಮಾಲತಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದು, ಆಲಗೇರಿ, ಸೌಳಿ, ಬಾಳೇ ಕೋಡ್ಲೂ, ಹೊಳೆಮದ್ದು, ಬಿಕ್ಕಳ್ಳಿ, ಬೇಗಾರುಕೊಪ್ಪ ಊರುಗಳಿಗೆ ಸಂಪರ್ಕ ಕಲ್ಪಿಸುತ್ತದೆ. ದ್ವಿಚಕ್ರ ವಾಹನ ಸವಾರರು ಸೇರಿದಂತ ಮಹಿಳೆಯರು, ಮಕ್ಕಳು ಈ ತೂಗು ಸೇತುವೆಯನ್ನು ಅವಲಂಬಿಸಿದ್ದಾರೆ. 1981ರಲ್ಲಿ ಅಂದಿನ ಶಾಸಕ ಡಿ.ಬಿ ಚಂದ್ರೇಗೌಡರು ಈ ಸೇತುವೆ ನೀಲಿ ನಕ್ಷೆ ಸಿದ್ಧಪಡಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಆ ಪ್ರಸ್ತಾವನೆ ಹಾಗೇ ಮೂಲೆ ಸೇರಿತು. ನಂತರ ಪ್ರತೀ ಚುನಾವಣೆ ಸಂದರ್ಭದಲ್ಲಿಯೂ ಸೇತುವೆ ಪ್ರಮುಖ ಪಾತ್ರ ವಹಿಸುತ್ತಾ ಬರುತ್ತಿತ್ತು.

2007ರಲ್ಲಿ ಅಂದಿನ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಪದ್ಮನಾಭ ಭಟ್ 25 ಲಕ್ಷ ರೂಪಾಯಿ ವೆಚ್ಚದ ಅನುದಾನ ನೀಡಿ ತೂಗು ಸೇತುವೆ ನಿರ್ಮಿಸಲು ಕ್ರಮ ಕೈಗೊಂಡರು. ಅನುದಾನ ನೀಡಿ 16 ವರ್ಷ ಕಳೆದಿದೆ. ಈಗ ಸೇತುವೆ ಶಿಥಿಲಾವಸ್ಥೆ ತಲುಪಿದೆ. ಮಳೆಗಾಲ ಪ್ರಾರಂಭ ವಾಗಿದ್ದು ನೇತುವೆಯು ಕಬ್ಬಿಣ ತುಕ್ಕು ಹಿಡಿಯಲಾರಂಭಿಸಿದೆ. ಕೆಲವು ಕಡೆ ಸರಳುಗಳು ತುಕ್ಕು ಹಿಡಿದು ಬೀಳುವ ಹಂತ ತಲುಪಿದೆ. ಮೇಲ್ಭಾಗ ಹಾಸಿದ ಸಿಮೆಂಟ್ ಹಲಗೆ ಕಿತ್ತು ಬಂದಿರುವುದು, ಕಬ್ಬಿಣ ತುಕ್ಕು ಹಿಡಿದ ಬೇರ್ಪಟ್ಟಿರುವುದು ಹಲವು ಸಮಸ್ಯೆಗಳಿಗೆ ಎಡೆ ಮಾಡಿಕೊಟ್ಟಿದೆ.

ಸ್ಥಳೀಯ ಗ್ರಾಮಸ್ಥರನ್ನು ಈ ದಿನ.ಕಾಮ್ ಮಾತನಾಡಿಸಿದಾಗ 2007ಕ್ಕಿಂತಲೂ ಮೊದಲು ದೋಣಿಯಲ್ಲಿ ದಾಟುತ್ತಿದ್ದೆವು. 2007ರಲ್ಲಿ ತೂಗು ಸೇತುವೆ ನಿರ್ಮಾಣವಾಯಿತು. ಹನ್ನೊಂದು ವರ್ಷ ಕಳೆದರೂ ಒಂದು ಬಾರೊ ಪೈಂಟ್ ಮಾಡಿದ್ದಾರೆ. ಈಗ ಪೈಂಟೂ ಇಲ್ಲ ಪೂರ್ತಿ ಡ್ಯಾಮೇಜ್ ಆಗಿ ಹೋಗಿದೆ. ಕಬ್ಬಿಣದ ಅಂಶ ಎಲ್ಲವೂ ತುಕ್ಕು ಹಿಡಿದು ಒಟ್ಟೆ ಆಗಿ ಹೋಗಿದೆ ಈ ತೂಗು ಸೇತುವೆ ತೆಗೆದು ನಾಲ್ಕು ಅಡಿ ಕಾಲ ಸೇತುವೆ ಮಾಡಿಕೊಟ್ಟರೆ ತುಂಬಾನೆ ಉಪಕಾರ ಆಗಬಹುದು ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈಗ ಇವರು ತೂಗು ಸೇತುವೆಯಲ್ಲಿ ದಾಟಿ ಹೋಗಲು ಭಯ ಆಗುತ್ತಿದೆ. ಇಲ್ಲಿ ನೂರಾರು ಹಳ್ಳಿ ಇದೆ. ಆ ಹಳ್ಳಿಗಳಿಗೆ ಎಲ್ಲ ಇರುವ ಸಂಪರ್ಕ ಸೇತುವೆ ಇದುವೇ ಆಗಿದೆ. ಈ ಪ್ರದೇಶದಲ್ಲಿ ಹೆಚ್ಚಾಗಿ ಓಡಾಡುವುದು ಬಡವರು ಮತ್ತು ರೈತರು ಸಂಭಂದ ಪಟ್ಟವರು ಬೇಕಾದರೆ ಇಲ್ಲಿ ಬಂದು ಸಮೀಕ್ಷೆ ಮಾಡಿ ನೋಡಲಿ” ಎಂದು ಹರೀಶ್ ಎಂಬುವವರು ಮನವಿ ಮಾಡಿಕೊಂಡಿದ್ದಾರೆ.

“ಅದೇ ಗ್ರಾಮದ ವಿದ್ಯಾರ್ಥಿನಿ ಸೌಮ್ಯ ಈದಿನ.ಕಾಮ್ ಜೊತೆ ಮಾತನಾಡಿ ವಿದ್ಯಾರ್ಥಿಗಳಿಗೆ ಓಡಾಡುವ ತುಂಬಾನೇ ಅನುಕೂಲ ಆಗಿದೆ ಈ ಸೇತುವೆ ಇಲ್ಲದಿದ್ದರೆ ಸುಮಾರು 20 ಕಿ ಲೋ ಮೀಟರ್ ಗಳಷ್ಟು ದೂರ ಸುತ್ತಾಡಿ ಬರಬೇಕು ದಯವಿಟ್ಟು ಎಲ್ಲರಿಗೂ ಉಪಕಾರ ಹಾಗುವ ಹಾಗೆ ಈ ಸೇತುವೆಯನ್ನು ಸರಿಮಾಡಿಸಿಕೊಡಿ” ಎಂದು ಹೇಳಿದರು.

ಒಟ್ಟಿನಲ್ಲಿ ಹೆಗ್ಗೋಡು ಮತ್ತು ಮುಳುಬಾಗಿಲು ಗ್ರಾಮ ಪಂಚಾಯತಿಯ ನಿರ್ಲಕ್ಷದಿಂದಾಗಿ ಜನರು ಸಂಕಷ್ಟ ಅನುಭವಿಸುವಂತಾಗಿದೆ. ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ಮುಂದಾಗುವ ಅನಾಹುತವನ್ನು ತಪ್ಪಿಸಬೇಕಿದೆ.

ಪೋಸ್ಟ್ ಹಂಚಿಕೊಳ್ಳಿ:

ಶಾರೂಕ್ ತೀರ್ಥಹಳ್ಳಿ
ಶಾರೂಕ್ ತೀರ್ಥಹಳ್ಳಿ
ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...