ಬೀದರ್‌ | ಬೀದಿಗೊಂದು ಪುಸ್ತಕದ ಅಂಗಡಿ ತೆರೆಯಬೇಕು : ವೀರಕಪುತ್ರ ಶ್ರೀನಿವಾಸ

Date:

ಯುವಕರಲ್ಲಿ ಪುಸ್ತಕ ಓದುವ ಹವ್ಯಾಸ ಬೆಳೆಸಬೇಕಿದ್ದು, ಹೊಟೇಲ್‌, ಬಟ್ಟೆ ಅಂಗಡಿ ಪ್ರತಿ ಬೀದಿಯಲ್ಲಿ ಇರುವಂತೆ ಪುಸ್ತಕದ ಅಂಗಡಿಗಳನ್ನೂ ತೆರೆಯಬೇಕಾದ ಅವಶ್ಯಕತೆ ಇದೆ ಎಂದು ವೀರಲೋಕ ಬುಕ್ಸ್ ಬೆಂಗಳೂರಿನ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ ಅಭಿಪ್ರಾಯಪಟ್ಟರು.

ಬೀದರ್ ನಗರದಲ್ಲಿ ವೀರಲೋಕ ಬುಕ್ಸ್ ಬೆಂಗಳೂರು ಮತ್ತು ಅತಿವಾಳೆ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ವೇದಿಕೆ ಆಶ್ರಯದಲ್ಲಿ ನಡೆದ ‘ದೇಸಿ ಜಗಲಿ ಕಥಾಕಮ್ಮಟ’ದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

“ಹಳ್ಳಿಗಳಲ್ಲೂ ಕುವೆಂಪು, ಬೇಂದ್ರೆ ಅವರಂತಹ ಕಥೆಕಾಗಾರರು ಸಿಗಬಹುದು ಎಂಬ ನಿಟ್ಟಿನಲ್ಲಿ ಹಲವು ಜಿಲ್ಲೆಗಳಲ್ಲಿ ಕಥಾ ಕಮ್ಮಟ ಏರ್ಪಡಿಸಿ, ಕಥೆ ಕಾದಂಬರಿಕಾರರನ್ನು ಬೆಳಕಿಗೆ ತರುವ ಪ್ರಯತ್ನ ಮಾಡುತ್ತಿದ್ದೇವೆ. ನಾವು ಈವರೆಗೆ ಒಂದು ವರ್ಷದಲ್ಲಿ 44 ಕೃತಿಗಳನ್ನು ಪ್ರಕಟಣೆ ಮಾಡಿದ್ದೇವೆ. ಕಥಾಕಾರರಿಗೆ ವೀರಲೋಕ ಸೇತುವೆಯಾಗಿ ಕಾರ್ಯ ಮಾಡಲಿದೆ. ಆದ್ದರಿಂದ ಜಿಲ್ಲೆಯಲ್ಲಿನ ಕಥಾಕಾರರು ಹೆಚ್ಚು ಹೆಚ್ಚು ಬೆಳಕಿಗೆ ಬರಬೇಕು” ಎಂದು ನುಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿದೇಶದಲ್ಲಿ ಒಬ್ಬ ಕವಿ ತನ್ನ ಸಾಹಿತ್ಯ ಬರೆಯಲು ಆರಂಭಿಸಿದರೆ ಆ ಕೃತಿ ಖರೀದಿಸಲು ಆರು ತಿಂಗಳು ಮೊದಲೇ ಬುಕಿಂಗ್ ಆರಂಭವಾಗುತ್ತವೆ. ಆದರೆ, ನಮ್ಮಲ್ಲಿ ಕೃತಿ ರಚಿಸಿ, ಮನೆಯಲ್ಲಿಟ್ಟು, ಕೈಯಲ್ಲಿ ಹಿಡಿದುಕೊಂಡು ಓಡಾಡಿದರೂ ಯಾರೂ ಖರೀದಿಸುವುದಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಥೆಗಾರ ಬಾಳಾಸಾಹೇಬ ಲೋಕಾಪುರ ಮಾತನಾಡಿ, “ಕಥೆ ಎಂದರೆ ವ್ಯಕ್ತಿಯ ಸಂವೇದನೆ. ತನ್ನ ವೈಯಕ್ತಿಕ ವೇದನೆಗಳೇ ಕಥೆಯಾಗಿ ಮಾರ್ಪಡುತ್ತವೆ. ನಮ್ಮ ವೇದನೆ ಕೇಳಿ ಜನರ ಕಣ್ಣಲ್ಲಿ ನೀರು ಬಂದರೆ ಅದೇ ಕಥೆ. ಜನರ ಹೃದಯಕ್ಕೆ ಮುಟ್ಟಿದರೆ ಅದೇ ಕಥೆ. ಅಂತಹ ಗಟ್ಟಿ ಸಾಹಿತ್ಯದ ಕಥೆಗಳನ್ನು ರಚಿಸಬೇಕು” ಎಂದು ಸಲಹೆ ನೀಡಿದರು.

ಅತಿವಾಳೆ ಸಾಂಸ್ಕೃತಿಕ ಮತ್ತು ಸಾಹಿತ್ಯ ವೇದಿಕೆಯ ಗೌರವಾಧ್ಯಕ್ಷ ಡಾ. ಸಂಜೀವಕುಮಾರ ಅತಿವಾಳೆ ಮಾತನಾಡಿ, “ಬೀದರ್ ಜಿಲ್ಲೆಯ ಉದಯೋನ್ಮುಖ ಕಥೆಗಾರರಿಗೆ ಇನ್ನೂ ಹೆಚ್ಚಿನ ಸಹಕಾರವಾಗಲೆಂದು ಈ ಕಥಾಕಮ್ಮಟ ಏರ್ಪಡಿಸಲಾಗಿದೆ. ಆಸಕ್ತರು ಎರಡು ದಿನಗಳ ಕಾಲ ನಡೆಯುವ ಈ ದೇಸಿ ಜಗಲಿ ಕಥಾಕಮ್ಮಟದಲ್ಲಿ ಪಾಲ್ಗೊಂಡು ಇದರ ಸದುಪಯೋಗ ಪಡೆದುಕೊಳ್ಳಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯನಗರ | ಕಾರ್ಮಿಕರಿಗೆ ಭೂಮಿ ನೀಡುವಂತೆ ಗ್ರಾಕೂಸ ಆಗ್ರಹ

ಮಾತೃಭೂಮಿ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಗುರುನಾಥ ರಾಜಗಿರಾ ಮಾತನಾಡಿ, “ಕಥೆ ಹೇಗಿರಬೇಕು? ಹೇಗೆ ರಚಿಸಬೇಕು ಎಂಬುದನ್ನು ತಿಳಿಸುವುದೇ ಈ ಕಥಾಕಮ್ಮಟದ ಉದ್ದೇಶ. ವೀರಲೋಕ ಬುಕ್ಸ್ ಅಧ್ಯಕ್ಷ ಶ್ರೀನಿವಾಸ ಅವರು ಕೋಟ್ಯಧಿಪತಿ ಆದರೂ ಪುಸ್ತಕ ಸಂಸ್ಕೃತಿ ಬೆಳೆಸಲು ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ. ಸಾಹಿತ್ಯ ಮಾನವೀಯ ಪಂಥದ ಆಧಾರದ ಮೇಲೆ ರಚನೆಯಾಗಬೇಕು” ಎಂದು ಅಭಿಪ್ರಾಯಪಟ್ಟರು.

ಸಮಾರಂಭದಲ್ಲಿ ಕಥೆಗಾರರಾದ ಗುರುನಾಥ ಅಕ್ಕಣ್ಣ, ಶಿವಕುಮಾರ ನಾಗವಾರ, ಸಾಹಿತಿಗಳಾದ ರಜಿಯಾ ಬಳಬಟ್ಟಿ, ಡಾ. ರಾಮಚಂದ್ರ ಗಣಾಪುರ, ಅವಿನಾಶ ಸೋನೆ, ಲಕ್ಷ್ಮಿ ಮೇತ್ರೆ ಹಾಗೂ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...