ಬೀದರ್‌ | ಕಲಿಕೆಯ ಹೊಸ ಮಾದರಿ : ಪ್ರಕೃತಿ ಮಡಿಲಲ್ಲಿ ವಿದ್ಯಾರ್ಥಿಗಳ ಕಾಲ್ನಡಿಗೆ

Date:

ವಿದ್ಯಾರ್ಥಿಗಳಲ್ಲಿ ಹೊಸ ಕಲಿಕಾ ಆಸಕ್ತಿ ಹೆಚ್ಚಿಸುವ ನಿಟ್ಟಿನಲ್ಲಿ ಔರಾದ್‌ ತಾಲೂಕಿನ ಯನಗುಂದಾ ಸರಕಾರಿ ಪ್ರೌಢ ಶಾಲೆಯ ಶಿಕ್ಷಕರು ಪ್ರಕೃತಿ ಮಡಿಲಲ್ಲಿ ವಿದ್ಯಾರ್ಥಿಗಳನ್ನು ಕಾಲ್ನಡಿಗೆ ಮಾಡಿಸಿರುವುದು ಮಕ್ಕಳಲ್ಲಿ ಉತ್ಸಾಹ ಹೆಚ್ಚಿಸುವಂತೆ ಮಾಡಿತು.

ಶಿಕ್ಷಣವು ಮಕ್ಕಳಿಗೆ ಜೀವನ‌ ಕಲಿಸುವಂತಾಗಬೇಕು, ಇತ್ತೀಚಿಗೆ ಮಕ್ಕಳು ಮೊಬೈಲ್ ಬಳಕೆ ಅತಿಯಾಗಿ ಸಾಧಾರಣ ಚಟುವಟಿಕೆಗಳಿಂದ ವಂಚಿತರಾಗುತ್ತಿರುವುದು ಕಳವಳಕಾರಿ ಸಂಗತಿ. ತತ್ವಜ್ಞಾನಿ ರೂಸೋ ಅವರು ಮರಳಿ ನಿಸರ್ಗಕ್ಕೆ ಎನ್ನುವ ಸಂದೇಶ ನೀಡಿದ್ದಾರೆ. ಅದರಂತೆ ಯನಗುಂದಾ ಶಾಲಾ ಶಿಕ್ಷಕರು ಪ್ರತಿವರ್ಷ ಮಕ್ಕಳಿಗೆ ಶೈಕ್ಷಣಿಕ ಚಟುವಟಿಕಗಳ ಜೊತೆಗೆ ನಿಸರ್ಗದ ಬಗ್ಗೆ ಅರಿವು ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ.

ನಿಸರ್ಗದಲ್ಲಿ ಮಡಿಲಲ್ಲಿ ನಡೆದಾಡುವುದರಿಂದ ಮಾನಸಿಕವಾಗಿಯು ಮತ್ತು ದೈಹಿಕವಾಗಿಯು ಪ್ರಯೋಜನವಾಗಲಿದೆ. ಮಾನಸಿಕ ಒತ್ತಡ ಕಡಿಮೆ ಮಾಡುವ ಮೂಲಕ ನಮ್ಮಗೆ ಪರಿಶುದ್ಧ ಗಾಳಿ ಹಾಗೂ ವಿವಿಧ ಪಕ್ಷಿ, ಪ್ರಾಣಿ, ಸಸ್ಯ, ಮರ ಹೊಲದಲ್ಲಿನ ವಿವಿಧ ಬೆಳೆಗಳ ಬಗ್ಗೆ ಅರಿತುಕೊಳ್ಳಲು ಸಹಕಾರಿಯಾಗಿದೆ ಎಂದು ಶಾಲೆಯ ಮುಖ್ಯಗುರು ಬಸವರಾಜ ಮಠಪತಿ ಮಾಹಿತಿ ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಮ್ಮ ಶಾಲೆಯಲ್ಲಿ ಕಲಿಕೆಯ ಜೊತೆಗೆ ವಿವಿಧ ರಚನಾತ್ಮಕ ಚಟುವಟಿಕೆ ಹಮ್ಮಿಕೊಂಡು ವಿದ್ಯಾರ್ಥಿಗಳಲ್ಲಿ ರಚನಾತ್ಮಕ, ಕ್ರಿಯಾಶೀಲ, ಸೃಜನಶೀಲತೆ ಮೂಡಿಸಲಾಗುತ್ತಿದೆ. ಮಕ್ಕಳಿಗಾಗಿ ಪಥಸಂಚಲನ, ಮಡಬಾತ್, ಪರಿಸರ ಪ್ರಜ್ಞೆ ಹಾಗೂ ಪ್ರಕೃತಿ ಮಡಿಲಲ್ಲಿ ವನಭೋಜನ, ಸ್ವಚ್ಛ ಭಾರತ ಮಿಷನ್ ಜಾಗೃತಿ ಕಾರ್ಯಕ್ರಮ ಸಂಘಟಿಸುವ ಮೂಲಕ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ಒದಗಿಸಲಾಗುತ್ತಿದೆ ಎಂದು ಶಿಕ್ಷಕ ಲಕ್ಷ್ಮರಡ್ಡಿ ಗಂಗಾಪೂರೆ ತಿಳಿಸಿದ್ದಾರೆ‌.

WhatsApp Image 2025 10 31 at 3.46.38 PM

ʼನಮ್ಮ‌ ಗುರುಗಳು ನಮಗೆ ನಿಸರ್ಗದ ಮಡಿಲಲ್ಲಿ ಓಡಾಡಲು ನಮ್ಮನ್ನು ಕರೆದುಕೊಂಡು ಹೋಗಿರುವುದು ನಮಗೆ ತುಂಬಾ ಖುಷಿಯಾಗಿದೆ.ಇದರಿಂದ ಪ್ರಕೃತಿ ಸೌಂದರ್ಯ ಸವಿಯುವ ಜೊತೆಗೆ ಹೊಸತನ ಕಲಿಕೆಗೆ ಪ್ರೇರಣೆಯಾಗಿದೆʼ ಎಂದು ವಿದ್ಯಾರ್ಥಿ ಅರ್ಪಿತ ಈಶ್ವರ್ ಅವರು ನುಡಿದರು.

ಕಾರ್ಯಕ್ರಮದಲ್ಲಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಮಲ್ಲಿಕಾರ್ಜುನ ಟಂಕಸಾಲೆ, ಎಂ.ಡಿ ಸಿರಾಜ್, ಮುಸ್ತಫಾ ಆಜಾದ್ ಖುರ್ರಮ್ ಮುರ್ತುಜಾ, ತೇಜಸ್ವಿ ಚಾಂದಕವಠೆ ಭಾಗವಹಿಸಿ ಮಕ್ಕಳಿಗೆ ಮಾರ್ಗದರ್ಶನ ನೀಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...