ಬೀದರ್‌ | ಕಾಯಕದಲ್ಲಿ ಕೈಲಾಸ ಕಂಡ ಶರಣರು : ಸುರೇಖಾ ಕೆ.ಎ.ಎಸ್.

Date:

ಸಮಾಜದಲ್ಲಿ ಕಾಯಕ ನಿಷ್ಠೆಯ ಆದರ್ಶವನ್ನು ತಿಳಿಸಿಕೊಟ್ಟವರು ಶರಣರು. ಕಾಯ ಹಾಗೂ ಕಾಯಕದಲ್ಲಿ ಕೈಲಾಸವನ್ನು ಕಂಡು ಬಾಳಿದ ಮಹಾನುಭಾವರು ಬಸವಾದಿ ಶರಣರು ಎಂದು ಬೀದರ ವಿಶ್ವವಿದ್ಯಾಲಯದ ಆಡಳಿತ ಕುಲಸಚಿವರಾದ ಸುರೇಖಾ ಕೆ.ಎ.ಎಸ್. ಅವರು ಹೇಳಿದರು.

ಬೀದರ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕಾಯಕ ಶರಣರ ಜಯಂತಿಯ ಕಾರ್ಯಕ್ರಮದಲ್ಲಿ ಮಾತನಾಡಿ, ʼವೃತ್ತಿ ಮನುಷ್ಯನಿಗೆ ಶೋಭೆ, ಗೌರವ ತರುತ್ತದೆ. ಸತ್ಕರ್ಮದ ಕಾಯಕದಿಂದ ವ್ಯಕ್ತಿ ಉದಾತ್ತನಾಗುತ್ತಾನೆ. ಜೀವನದಲ್ಲಿ ಸದಾ ಕಾಯಕ ನಿರತರಾಗಬೇಕೆಂಬುದು ಶರಣರ ಧ್ಯೇಯ ಹಾಗೂ ಆದರ್ಶವಾಗಿತ್ತುʼ ಎಂದರು.

ʼಯಾವ ಕಾಯಕವೂ ದೊಡ್ಡದಲ್ಲ, ಚಿಕ್ಕದಲ್ಲ. ಮನಸ್ಸಿನಿಂದ ಮಾಡುವ ಕಾಯಕವೇ ದೊಡ್ಡದೆಂದು ನಂಬಿದವರು ಶರಣರು. ಮಾದಾರ ಚನ್ನಯ್ಯ, ಸಮಗಾರ ಹರಳಯ್ಯ, ಡೋಹರ ಕಕ್ಕಯ್ಯ, ಉರಿಲಿಂಗ ಪೆದ್ದಿ, ಮಾದಾರ ಧೂಳಯ್ಯರವರಂತಹ ಮುಂತಾದ ಮಹಾನ್ ಶರಣರು ತಮ್ಮ ಕಾಯಕದ ಆದರ್ಶದಿಂದ ಸಮಾಜದ ಸ್ವಾಸ್ಥ್ಯವನ್ನು ಕಾಪಾಡಿದವರು. ಯಾರೂ ದುಡಿಯದೇ ಪ್ರಸಾದ ಸೇವಿಸಬಾರದೆಂಬ ಮೌಲ್ಯವನ್ನು 12ನೇ ಶತಮಾನದಲ್ಲಿಯೇ ಹೇಳಿದಂತಹ ಮಹನೀಯರಾಗಿದ್ದಾರೆʼ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಪ್ರೊ.ಪರಮೇಶ್ವರ ನಾಯ್ಕ್ ಮಾತನಾಡಿ, ʼಶರಣರು ತಾವು ಮಾಡುವ ಕಾಯಕನಿಷ್ಠೆ ಹಾಗೂ ತಮ್ಮ ವಚನಗಳಿಂದಲೇ ಇಂದಿಗೂ ಜೀವಂತವಾಗಿದ್ದು ಸಮಾಜಕ್ಕೆ ಮಾದರಿಯಾಗಿದ್ದಾರೆ. ಶರಣರ ಸಮಾನತೆಯ ಸಿದ್ಧಾಂತ ಸಾರ್ವಕಾಲಿಕ ಮೌಲ್ಯವಾಗಿದೆ. ಶರಣರು ಎಲ್ಲರನ್ನೂ ಸಮಾನವಾಗಿ ಕಂಡರು. ಶರಣರು ಆರೋಗ್ಯಕರ ಸಮಾಜಕ್ಕಾಗಿ ಹಂಬಲಿಸಿದರುʼ ಎಂದರು.

ಕನ್ನಡ ಉಪನ್ಯಾಸಕ ರಾಮಚಂದ್ರ ಗಣಾಪೂರ ಮಾತನಾಡಿ, ʼಶರಣರು ಕಾಯಕ ಪರಂಪರೆಗೆ ಮೌಲ್ಯವನ್ನು ತಂದುಕೊಟ್ಟವರು. ಆ ಮೂಲಕ ತಮ್ಮ ನಡೆ-ನುಡಿಯಿಂದ, ಕಾಯಕನಿಷ್ಠೆಯಿಂದ ಆರೋಗ್ಯಕರ ಸಮಾಜದ ನಿರ್ಮಾಣದಲ್ಲಿ ಮಹತ್ವದ ಕೊಡುಗೆಯನ್ನು ನೀಡಿದರು. ಶರಣರು ಮೊದಲು ನಡೆದರು, ನಂತರ ನುಡಿದರು. ಹೀಗಾಗಿ ನಮಗೆ ನಡೆ-ನುಡಿಯ ಆದರ್ಶಗಳ ಅವಶ್ಯಕತೆಯಿದೆ ಎಂದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಬಾಲ್ಯದಲ್ಲೇ ಅಸಮಾನತೆ ವಿರುದ್ಧ ಬಂಡಾಯವೆದ್ದ ದಾರ್ಶನಿಕ ಬಸವಣ್ಣ: ಸಭಾಪತಿ ಯು.ಟಿ.ಖಾದರ್

ಸಮಾರಂಭದಲ್ಲಿ ಬೀದರ ವಿಶ್ವವಿದ್ಯಾಲಯದ ಉಪನ್ಯಾಸಕ, ಸಿಬ್ಬಂದಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...