ಬೀದರ್‌ | ವೀರಶೈವ ʼಲಿಂಗಾಯತ ಧರ್ಮʼದ ಒಂದು ಉಪಪಂಗಡ : ಬಸವಲಿಂಗ ಪಟ್ಟದ್ದೇವರು

Date:

ಬೀದರ್‌ ಜಿಲ್ಲೆಯ ಬಸವಕಲ್ಯಾಣದಲ್ಲಿ ನಡೆಯುತ್ತಿರುವ ರಂಭಾಪುರಿ ಶ್ರೀಗಳ ದಸರಾ ದರ್ಬಾರ ಕಾರ್ಯಕ್ರಮದಲ್ಲಿ ಶ್ರೀಗಳು ತ್ರಿಪುರಾಂತಕ ಕೆರೆಯ ಹೆಸರನ್ನು ಬದಲಾಯಿಸಬೇಕು ಎಂಬ ಹೇಳಿಕೆಗೆ ಬಸವಕಲ್ಯಾಣ ಅನುಭವ ಮಂಟಪದ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ವಿರೋಧ ವ್ಯಕ್ತಪಡಿಸಿದ್ದಾರೆ.

ʼತ್ರಿಪುರಾಂತಕ ಕೆರೆ 12ನೇ ಶತಮಾನದ ಬಸವಾದಿ ಶರಣರ ಚರಿತ್ರೆಯಲ್ಲಿ ವಚನಗಳಲ್ಲಿ ಅತ್ಯಂತ ಮಹತ್ವ ಪಡೆದಿದೆ. ಕೆಲವು ಶರಣರ ವಚನಗಳ ಹಾಗೂ ವಚನಾಂಕಿತಗಳಲ್ಲಿ ತ್ರಿಪುರಾಂತಕ ಕೆರೆಯ ಹೆಸರನ್ನು ಉಲ್ಲೇಖಿಸಲಾಗಿದೆ. ಶರಣರ ಚರಿತ್ರೆಗೆ ತ್ರಿಪುರಾಂತಕ ಕೆರೆಗೆ ಅವಿನಾಭಾವ ಸಂಬಂಧವಿದೆ. ಹೀಗಿರುವಾಗ ರಂಭಾಪುರಿ ಶ್ರೀಗಳು ತ್ರಿಪುರಾಂತಕ ಕೆರೆಯ ಹೆಸರು ಬದಲಾಯಿಸುವ ಸಲಹೆ ನೀಡುವ ಮೂಲಕ ಶರಣರ ನಿಜಚರಿತ್ರೆಯನ್ನು ತಿರುಚುವ ಹುನ್ನಾರ ನಡೆಸುತ್ತಿರುವುದು ವಿಷಾದನೀಯ ಸಂಗತಿಯಾಗಿದೆ ಎಂದು ಸೋಮವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ʼಶರಣರ ಇತಿಹಾಸ ತಿರುಚುವ ಕಾರ್ಯಗಳನ್ನು ಯಾರೂ ಮಾಡಬಾರದು. ಶರಣರ ಸತ್ಯ ಚರಿತ್ರಗೆ ಯಾರಾದರೂ ಕೈ ಹಾಕಿದರೆ ಅದರ ಪ್ರತಿಫಲವನ್ನು ಅವರೇ ಅನುಭವಿಸುತ್ತಾರೆ ಎಂಬುದು ಮರೆಯಬಾರದು. ಲಿಂಗಾಯತ ಧರ್ಮ, ವೀರಶೈವ ಪಂಗಡ
ರಂಭಾಪುರಿ ಶ್ರೀಗಳು ವೀರಶೈವ ಲಿಂಗಾಯತ ಎರಡು ಒಂದೇ ಎಂದು ಹೇಳುತ್ತಾ ಪ್ರತ್ಯೇಕ ಧರ್ಮದ ಪ್ರತಿಪಾದನೆ ಮಾಡುತ್ತಿರುವವರನ್ನು ಅರೇಜ್ಞಾನ ಇದೆ ಎಂದು ನುಡಿದಿರುವುದು ಖಂಡನೀಯವಾಗಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಸವಾದಿ ಶರಣರ ವಚನಗಳನ್ನು ಆಳವಾಗಿ ಅಧ್ಯಯನ ಮಾಡಿರುವ ಅನೇಕ ಸಾಹಿತಿಗಳು, ಸಂಶೋಧಕರು, ಮಠಾಧೀಶರು ಹಾಗೂ ಸರ್ಕಾರದ ದಾಖಲೆಗಳನ್ನು ಲಿಂಗಾಯತ ಪ್ರತ್ಯೇಕ ಧರ್ಮವೆಂದು ಸಾಕ್ಷಿ ನೀಡುತ್ತವೆ. ಎರಡೂ ಒಂದೇ ಎನ್ನುವ ಶ್ರೀಗಳು ಪ್ರತ್ಯೇಕ ಧರ್ಮದ ಹೋರಾಟವನ್ನು ಬೆಂಬಲಿಸಬೇಕೆ ವಿನಃ ಅದನ್ನು ವಿರೋಧಿಸಬಾರದು. ವೀರಶೈವ ಲಿಂಗಾಯತ ಧರ್ಮದ ಒಂದು ಉಪಪಂಗಡ. ಹಾಗಾಗಿ ಲಿಂಗಾಯತರಲ್ಲಿ ವೀರಶೈವ ಇದೆ. ಆದರೆ ವೀರಶೈವವೇ ಪ್ರಧಾನವಲ್ಲವೆಂಬುದು ಪೂಜ್ಯರು ಗಮನಿಸಬೇಕುʼ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಬೀದರ್‌ | ರಾಜ್ಯ ಸರ್ಕಾರ ರೈತರ ನೆರವಿಗೆ ಧಾವಿಸಿ ತುರ್ತು ಪರಿಹಾರ ಘೋಷಿಸಲಿ : ಬಿ.ವೈ.ವಿಜಯೇಂದ್ರ

ಈ ಮುಂಚೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಕೇಂದ್ರ ಸರಕಾರಕ್ಕೆ ಸಲ್ಲಿಸಿದ ಪ್ರತ್ಯೇಕ ಧರ್ಮದ ಬೇಡಿಕೆಯನ್ನು ಯಾಕೆ ತಿರಸ್ಕೃತ ಮಾಡಿದೆ ಎಂಬುದು ಶ್ರೀಗಳು ತಿಳಿದುಕೊಳ್ಳಬೇಕು. ಲಿಂಗಾಯತ ಸಮಾಜದ ಅಖಂಡತೆಗಾಗಿ ಮತ್ತು ಈ ಸಮುದಾಯದ ಮಕ್ಕಳ ಭವಿಷ್ಯಕ್ಕಾಗಿ ಲಿಂಗಾಯತ ಧರ್ಮ ಅಲ್ಪಸಂಖ್ಯಾತ ಮಾನ್ಯತೆಯ ಹೋರಾಟವನ್ನು ಬೆಂಬಿಲಿಸಬೇಕೆಂದು ಬಸವಲಿಂಗ ಪಟ್ಟದ್ದೇವರು ತಿಳಿಸಿದ್ದಾರೆ.

WhatsApp Image 2025 11 17 at 3.23.18 PM
ಈ ದಿನ ಸಂಪಾದಕೀಯ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...