ಬೀದರ್‌ | ಮೇ ಮೊದಲ ವಾರದೊಳಗೆ ಕಬ್ಬಿನ ಬಾಕಿ ಬಿಲ್‌ ಪಾವತಿಗೆ ಕ್ರಮ : ಡಿ.ಕೆ.ಸಿದ್ರಾಮ

Date:

2024-25ನೇ ಹಂಗಾಮಿನಲ್ಲಿ ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆ (ಎನ್‌ಎಸ್‌ಎಸ್‌ಕೆ) ಗೆ ಕಬ್ಬು ಪೂರೈಸಿದ ರೈತರ ಕಬ್ಬಿನ ಬಾಕಿ ಬಿಲ್‌ ಮೇ ತಿಂಗಳ ಮೊದಲನೇ ವಾರದೊಳಗಾಗಿ ಪಾವತಿಸಲು ಎಲ್ಲ ರೀತಿಯಿಂದ ಕ್ರಮವಹಿಸಲಾಗುತ್ತದೆ ಎಂದು ಕಾರ್ಖಾನೆ ಅಧ್ಯಕ್ಷ ಡಿ.ಕೆ.ಸಿದ್ರಾಮ ತಿಳಿಸಿದ್ದಾರೆ.

ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆ ಕಾರ್ಖಾನೆಯು 2024-25ನೇ ಹಂಗಾಮಿಗೆ 3 ಲಕ್ಷ ಮೆಟ್ರಿಕ್ ಟನ್‌ಗೂ ಅಧಿಕ ಕಬ್ಬು ನುರಿಸಿ ‌ಶೇ 9.75 ರಿಕವರಿಯೊಂದಿಗೆ ಸಕ್ಕರೆ ಉತ್ಪಾದಿಸಿ ಹಂಗಾಮನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ ಎಂದು ಶುಕ್ರವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೇಂದ್ರ ಸರ್ಕಾರವು ಮುಕ್ತ ಮಾರುಕಟ್ಟೆಯಲ್ಲಿ ಸಕ್ಕರೆ ಮಾರಾಟ ಮಾಡಲು ನಿಯಂತ್ರಣ ವಿಧಿಸಿರುವುದರಿಂದ ಅತಿ ಕಡಿಮೆ ಪ್ರಮಾಣದಲ್ಲಿ ಸಕ್ಕರೆಯನ್ನು ಮಾರಾಟ ಮಾಡಲು ಅನುಮತಿ ಆದೇಶ ನೀಡುತ್ತಿರುವ ಹಿನ್ನೆಲೆಯಲ್ಲಿ ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶಕರು ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆಗೆ ಕಬ್ಬು ಪೂರೈಸಿದ ರೈತರ ಕಬ್ಬಿನ ಬಾಕಿ ಬಿಲ್ ಪಾವತಿಸಲು ಅನುಕೂಲವಾಗುವಂತೆ ಹೆಚ್ಚುವರಿ ಸಕ್ಕರೆ ಬಿಡುಗಡೆ ಮಾಡಲು ಆದೇಶ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿರುತ್ತಾರೆ. ಅದರಂತೆ ಕೇಂದ್ರ ಸರ್ಕಾರವು ಕೂಡಾ ಸಕಾರಾತ್ಮಕವಾಗಿ ಸ್ಪಂದಿಸಿ 50,000 ಕ್ವಿಂಟಲ್ ಹೆಚ್ಚುವರಿ ಸಕ್ಕರೆ ಬಿಡುಗಡೆಗೆ ಆದೇಶ ನೀಡಲಾಗುವುದು ಎಂದು ಆಶ್ವಾಸನೆ ನೀಡಿರುತ್ತದೆ. ಅಲ್ಲದೇ ಈಗಾಗಲೇ ದಿನನಿತ್ಯ ರೂ.2 ಕೋಟಿ ರೈತರ ಕಬ್ಬಿನ ಬಿಲ್ ಬಾಕಿ ಪಾವತಿ ಮಾಡಲಾಗುತ್ತಿದೆ’ ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದಿರಾ? ಯುಗಧರ್ಮ | ಬಾಬಾಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನ ಎಷ್ಟು ಭಾರತೀಯ?

ಜಿಲ್ಲೆಯ ರೈತ ಸಂಘಟನೆಗಳು ಹಾಗೂ ಕಾರ್ಖಾನೆಗೆ ಕಬ್ಬು ಪೂರೈಸಿದ ರೈತರು ಯಾವುದೇ ರೀತಿ ಆತಂಕ ಪಡದೇ ಸಹಕರಿಸಲು ಕಾರ್ಖಾನೆಯ ಅಧ್ಯಕ್ಷ ಡಿ.ಕೆ. ಸಿದ್ರಾಮ ಕೋರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...