ಬೀದರ್‌ | ನಟ, ನಿರ್ದೇಶಕ ಮಹೇಶ ಪಾಟೀಲ್‌ಗೆ ನಾಟಕ ಅಕಾಡೆಮಿ ವಾರ್ಷಿಕ ಪ್ರಶಸ್ತಿ

Date:

ಚಲನಚಿತ್ರ ನಟ, ಖ್ಯಾತ ನಿರ್ದೇಶಕ ಹಾಗೂ ಹಿರಿಯ ರಂಗ ಕಲಾವಿದ ಮಹೇಶ ವಿ.ಪಾಟೀಲ್ ಅವರಿಗೆ ಪ್ರಸಕ್ತ ಸಾಲಿನ ಕರ್ನಾಟಕ ನಾಟಕ ಅಕಾಡೆಮಿಯ ವಾರ್ಷಿಕ ಪ್ರಶಸ್ತಿ ಒಲಿದು ಬಂದಿದೆ.

ಜಿಲ್ಲೆಯಲ್ಲಿ ಪ್ರಖ್ಯಾತಿ ಪಡೆದಿದ್ದ ‘ದಮನ್’ ಹಿಂದಿ ದಿನಪತ್ರಿಕೆಯ ದಿ.ವಿಶ್ವನಾಥ ಪಾಟೀಲ್ ಅವರ ಪುತ್ರ ಮಹೇಶ ಪಾಟೀಲ್ ಅವರು 2025-26ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಗೆ ಭಾಜನರಾಗಿ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾರೆ.

ಮೂಲತಃ ಕಮಲನಗರ ತಾಲೂಕಿನ ಹಕ್ಕಾಳ ಗ್ರಾಮದವರಾದ ಮಹೇಶ ಪಾಟೀಲ್‌ ಅವರು ಡಿಪ್ಲೊಮಾ ಇನ್‌ ಮೆಕ್ಯಾನಿಕಲ್‌ ಎಂಜಿನಿಯರಿಂಗ್‌ ಮುಗಿಸಿದ್ದಾರೆ. ಬಳಿಕ ರಂಗಭೂಮಿಯ ಕಡೆಗೆ ಮುಖ ಮಾಡಿ 1988–91ರಲ್ಲಿ ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯಲ್ಲಿ (ಎನ್‌ಎಸ್‌ಡಿ) ಡಿಪ್ಲೊಮಾ ಇನ್‌ ಡ್ರಮ್ಯಾಟಿಕ್‌ ಆರ್ಟ್ಸ್‌, ಸ್ಪೆಶಲೈಜೇಶನ್‌ ಇನ್‌ ಡಿಸೈನ್‌ ಅಂಡ್‌ ಡೈರೆಕ್ಷನ್‌, ವಿಡಿಯೋ ಫಿಲಂ, ಫಿಲಂ ಅಪ್ರಿಸಿಯೇಶನ್‌ ಕೋರ್ಸ್‌ ಸೇರಿದಂತೆ ವಿವಿಧ ಕೋರ್ಸ್‌ ಮುಗಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

1979ರಲ್ಲಿ ರಾಜ್ಯಮಟ್ಟದ ಅತ್ಯುತ್ತಮ ನಟ ಪ್ರಶಸ್ತಿ, 1980ರಲ್ಲಿ ಅತ್ಯುತ್ತಮ ಏಕಪಾತ್ರಾಭಿನಯಕ್ಕೆ ಪ್ರಶಸ್ತಿ, 1982ರಲ್ಲಿ ಅತ್ಯುತ್ತಮ ಯುವ ನಿರ್ದೇಶಕ, 1998ರಲ್ಲಿ ಅತ್ಯುತ್ತಮ ನಿರ್ಮಾಣ, 2000ನೇ ಇಸ್ವಿಯಲ್ಲಿ ಅತ್ಯುತ್ತಮ ಸೃಜನಶೀಲ ಬರವಣಿಗೆಗೆ, 2001ರಲ್ಲಿ ಕಿರು ಸಾಕ್ಷ್ಯಚಿತ್ರಕ್ಕಾಗಿ ಸೇರಿದಂತೆ ಹಲವು ಪ್ರಶಸ್ತಿಗಳು ಇವರಿಗೆ ಸಂದಿವೆ. ಕಲಬುರಗಿ ರಂಗಾಯಣದ ನಿರ್ದೇಶಕರಾಗಿಯೂ ಮಹೇಶ ಪಾಟೀಲ್ ಕಾರ್ಯನಿರ್ವಹಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಮನೆ ಮಹಡಿ ಮೇಲೆ ‘ಡ್ರ್ಯಾಗನ್‌ ಫ್ರೂಟ್‌’ ಬೆಳೆದ ಉಪನ್ಯಾಸಕ!

ಹಿರಿಯ ರಂಗ ಕಲಾವಿದ, ನಿರ್ದೇಶಕ ಮಹೇಶ ಪಾಟೀಲ್‌ ಅವರ ಸೇವೆಯನ್ನು ಗುರುತಿಸಿ ನಾಟಕ ಅಕಾಡೆಮಿಯು ವಾರ್ಷಿಕ ಪ್ರಶಸ್ತಿಗೆ ಆಯ್ಕೆ ಮಾಡುವ ಮೂಲಕ ಜಿಲ್ಲೆಯ ಕಲಾವಿದರನ್ನು ಮತ್ತೊಮ್ಮೆ ಗುರುತಿಸಿದಂತಾಗಿದೆ‌ ಎಂದು ಜಿಲ್ಲೆಯ ಸಾಹಿತಿಗಳು, ಚಿಂತಕರು ಹಾಗೂ ಹಿರಿಯ ಕಲಾವಿದರು ಹರ್ಷ ವ್ಯಕ್ತಪಡಿಸಿದ್ದಾರೆ. ಪ್ರಶಸ್ತಿಯು 25 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...