ಬೀದರ್‌ | ಅಕ್ಕ ಮಹಾದೇವಿ ಧೈರ್ಯ, ಸಮಯ ಪ್ರಜ್ಞೆ ಮಹಿಳಾ ಕುಲಕ್ಕೆ ಸ್ಫೂರ್ತಿ : ಪ್ರಭುದೇವ ಸ್ವಾಮೀಜಿ

Date:

ಅಕ್ಕ ಮಹಾದೇವಿ ವಚನಗಳಲ್ಲಿ ಬದುಕಿನ ಕೌಶಲ ಹಾಗೂ ಆಧ್ಯಾತ್ಮ ಸಾಧನೆಯ ಮಾರ್ಗ ಇದೆ ಎಂದು ಲಿಂಗಾಯತ ಮಹಾಮಠದ ಪ್ರಭುದೇವ ಸ್ವಾಮೀಜಿ ಹೇಳಿದರು.

ಲಿಂಗಾಯತ ಮಹಾ ಮಠದ ವತಿಯಿಂದ ಬೀದರ್ ನಗರದ ಬಸವಗಿರಿಯಲ್ಲಿ ಗುರುವಾರ ನಡೆದ 262ನೇ ಮಾಸಿಕ ಶರಣ ಸಂಗಮ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದ ಅವರು, ʼಅಕ್ಕನ ಯೋಗಾಂಗ ತ್ರಿವಿಧಿ ಅಧ್ಯಾತ್ಮದ ಕೆನೆʼ ಎಂದು ಬಣ್ಣಿಸಿದರು.

ʼಕಿರಿಯ ವಯಸ್ಸಿನಲ್ಲೇ ಲಿಂಗಾಂಗ ಸಾಮರಸ್ಯಕ್ಕೇರಿದ ಮಹಾ ಶರಣೆ ಅಕ್ಕ. ಅಂದಿನ ದಿನಮಾನದಲ್ಲಿ ಬಯಸಿದ್ದನ್ನು ಪಡೆಯುವ ರಾಜನನ್ನೇ ಜಾಣ್ಮೆಯಿಂದ ಎದುರಿಸಿ ಗುರಿ ತಲುಪಿದ ದಿಟ್ಟೆ. ಮಹಾದೇವಿ ಅಕ್ಕನ ಧೈರ್ಯ, ಸಾಹಸ ಹಾಗೂ ಸಮಯ ಪ್ರಜ್ಞೆ ಮಹಿಳಾ ಕುಲಕ್ಕೆ ಸ್ಫೂರ್ತಿ. ಇಂದಿನ ಮಹಿಳೆಯರು ಅಕ್ಕನ ಆತ್ಮವಿಶ್ವಾಸ ಮೈಗೂಡಿಸಿಕೊಳ್ಳಬೇಕು. ಅಕ್ಕ ವಚನ, ಸಂದೇಶಗಳನ್ನು ಅರಿಯಬೇಕು. ಮಕ್ಕಳಿಗೂ ತಿಳಿಸಬೇಕುʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಜಗತ್ತಿನ ಸರ್ವ ಚಟುವಟಿಕೆಗಳ ಮೂಲ ಸೂರ್ಯ. ಹಾಗೆಯೇ ಪಂಚೇಂದ್ರಿಗಳ ಚಟುವಟಿಕೆಗೆ ಮನಸ್ಸೆ ಮೂಲ. ಚಂಚಲವಾದ ಮನಸ್ಸನ್ನನು ನಿಲ್ಲಿಸಿ, ಸಾಧನೆಯ ಶಿಖರವೇರುವ ಕಲೆಯನ್ನು ಅಕ್ಕನಿಂದ ತಿಳಿಯಬೇಕುʼ ಎಂದು ಭಾಲ್ಕಿಯ ಮಹಾಲಿಂಗ ದೇವರು ನುಡಿದರು.

ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿದ ದಂತ ವೈದ್ಯ ನಾಗೇಶ ಪಾಟೀಲ ಮಾತನಾಡಿ, ʼಜೀವನದಲ್ಲಿ ಶಾಂತಿ, ನೆಮ್ಮದಿ ಪಡೆಯಲು ಶರಣ ಸಂಗಮಗಳು ಸಹಕಾರಿ. ಇದರಿಂದ ಒತ್ತಡ ಮುಕ್ತರಾಗಿ ಬದುಕಬಹುದು. ಯುವಕರು ಈ ಕಡೆ ಗಮನ ಹರಿಸಬೇಕುʼ ಹೇಳಿದರು.

ಹಿರಿಯ ಸಾಹಿತಿ ಪಂಚಾಕ್ಷರಿ ಪುಣ್ಯಶೆಟ್ಟಿ ರಚಿತ ಅಕ್ಕ ಅನ್ನಪೂರ್ಣ ಚರಿತ್ರೆ ಪುಸ್ತಕವನ್ನು ನೀಲಮ್ಮನ ಬಳಗದ ಶೋಭಾವತಿ ಬಿರಾದಾರ ಬಿಡುಗಡೆ ಮಾಡಿದರು.

ರಾಜ್ಯ ಶಾಲಾ ಶಿಕ್ಷಣ ಇಲಾಖೆಯ ನೌಕರರ ಸಂಘದ ಭಾಲ್ಕಿ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಸೋಮನಾಥಪ್ಪ ರಾಜೇಶ್ವರೆ ಗೋರ್ಟಾ ಅವರನ್ನು ಶ್ರೀಮಠದಿಂದ ಶಾಲು ಹೊದಿಸಿ, ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಕಲ್ಲಂಗಡಿ ಕೃಷಿಯಲ್ಲಿ ಸಿರಿ ಕಂಡ ಯುವಕ : ವರ್ಷಪೂರ್ತಿ ಬೆಳೆ; ಲಕ್ಷ ಲಕ್ಷ ಆದಾಯದ ಹೊಳೆ!

ರೋಟರಿ ಕ್ಲಬ್ ಆಫ್ ಬೀದರ್ ನ್ಯೂ ಸೆಂಚುರಿಯ ಅಧ್ಯಕ್ಷ ಶಿವಕುಮಾರ ಪಾಖಾಲ್ ಅಧ್ಯಕ್ಷತೆ ವಹಿಸಿದ್ದರು. ಸಾಹಿತಿ ರಮೇಶ ಮಠಪತಿ ಉಪಸ್ಥಿತರಿದ್ದರು. ಚನ್ನಬಸವಣ್ಣ ಮತ್ತು ನೀಲಮ್ಮನ ಬಳಗದವರು ಪ್ರಾರ್ಥನೆಗೈದರು. ರೇವಣಪ್ಪ ಮೂಲಗೆ ಹಾಗೂ ಡಾ.ಬಸವದೀಪ್ತಿ ಸುಶ್ರಾವ್ಯವಾಗಿ ವಚನ ಗಾಯನ ಮಾಡಿದರು. ಪ್ರಭಾವತಿ ಗೋರನಾಳೆ ಹಾಗೂ ಬಸವ ಜ್ಯೋತಿ ನಿಟ್ಟೂರೆ ಗುರುಪೂಜೆಗೈದರು. ಮಾಣಿಕಪ್ಪ ಗೋರನಾಳೆ ಸ್ವಾಗತಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...