ಬೀದರ್ | ಅಕ್ಕಮಹಾದೇವಿಯ ಸಂಘರ್ಷದ ಬದುಕು ಸಮಾಜಕ್ಕೆ ಮಾದರಿ: ಶಾಸಕ ಈಶ್ವರ ಖಂಡ್ರೆ

Date:

12ನೆಯ ಶತನಮಾನದಲ್ಲಿ ಅಕ್ಕಮಹಾದೇವಿ ಅವರು ಸಮಸಮಾಜ ನಿರ್ಮಾಣ ಮತ್ತು ಮಹಿಳೆಯರ ಸ್ವತಂತ್ರಕ್ಕಾಗಿ ನಡೆಸಿದ ಸಂಘರ್ಷ, ತ್ಯಾಗಮಯ ಬದುಕು ಎಲ್ಲರಿಗೂ ಮಾದರಿಯಾಗಿದೆ ಎಂದು ಶಾಸಕ ಈಶ್ವರ ಖಂಡ್ರೆ ಹೇಳಿದರು.

ಬೀದರ್‌ ಜಿಲ್ಲೆ ಭಾಲ್ಕಿ ಪಟ್ಟಣದ ಚನ್ನಬಸವಾಶ್ರಮ ಪರಿಸರದಲ್ಲಿ ಅಕ್ಕಮಹಾದೇವಿ ಜಯಂತಿ ನಿಮಿತ್ತ ಅಕ್ಕಮಹಾದೇವಿ ಪುತ್ಥಳಿಗೆ ಮಾಲಾರ್ಪಣೆ ಸಲ್ಲಿಸಿ ಅವರು ಮಾತನಾಡಿದರು.

“ವಚನಗಾರ್ತಿ ಅಕ್ಕಮಹಾದೇವಿ ಅವರ ಒಂದೊದು ವಚನಗಳಲ್ಲಿ ಬದುಕಿನ ಮೌಲ್ಯಗಳು ಅಡಗಿವೆ. ಜೀವನದಲ್ಲಿ ಎಷ್ಟೇ ಕಷ್ಟ, ಸಮಸ್ಯೆಗಳು ಬಂದರೂ ಎದೆಗುಂದದೇ ಧೈರ್ಯದಿಂದ ಎದುರಿಸಿ ಮಹಿಳಾ ಕುಲದ ಸ್ವಾಭಿಮಾನವನ್ನು ಎತ್ತಿ ಹಿಡಿದಿದ್ದರು. ಅಕ್ಕಮಹಾದೇವಿ ಅವರು ತೋರಿದ ದಿಟ್ಟತನ, ಧೈರ್ಯವನ್ನು ಪ್ರಸ್ತುತ ಕಾಲದ ಎಲ್ಲ ಮಹಿಳೆಯರು ತಮ್ಮ ನಿಜ ಜೀವನದಲ್ಲಿ ಆಚರಣೆಗೆ ತಂದರೇ ಹೆಣ್ಣು ಭ್ರೂಣ ಹತ್ಯೆ, ದೌರ್ಜನ್ಯದಂತಹ ಪ್ರಕರಣಗಳಿಗೆ ಕಡಿವಾಣ ಬೀಳಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಭಾಲ್ಕಿಯಲ್ಲಿ ಅಕ್ಕಮಹಾದೇವಿ ಪುತ್ಥಳಿ ನಿರ್ಮಾಣ ಆಗಬೇಕೆನ್ನುವುದು ಮಹಿಳೆಯರ ಬಹುದಿನಗಳ ಬೇಡಿಕೆ ಆಗಿತ್ತು. ಅದರಂತೆ ಚನ್ನಬಸವಾಶ್ರಮದಲ್ಲಿ ಡಾ.ಬಸವಲಿಂಗ ಪಟ್ಟದ್ದೇವರ, ಗುರುಬಸವ ಪಟ್ಟದ್ದೇವರ ಮಾರ್ಗದರ್ಶನದ ಮೇರೆಗೆ ಅಕ್ಕಮಹಾದೇವಿ ಪುತ್ಥಳಿಗೆ ದೇಣಿಗೆ ಮತ್ತು ಅನಾವರಣಕ್ಕೆ ಅವಕಾಶ ಸಿಕ್ಕಿರುವುದು ನನ್ನ ಪುಣ್ಯವೆಂದು ಭಾವಿಸಿದ್ದೇನೆ” ಎಂದು ತಿಳಿಸಿದರು.

“ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ಸಾನಿಧ್ಯ ವಹಿಸಿ ಮಾತನಾಡಿ, “12ನೇ ಶತನಮಾನದಲ್ಲಿ ಅಕ್ಕಮಹಾದೇವಿ ಅವರಿಗೆ ಅರಸೊತ್ತಿಗೆ ವೈಭವ ಇದ್ದರೂ ಅದನ್ನು ಧಿಕ್ಕರಿಸಿ ಮಹಿಳೆಯರ ಸಬಲೀಕರಣಕ್ಕಾಗಿ ಕ್ರಾಂತಿ ನಡೆಸಿದರು. ಜೀವನದಲ್ಲಿ ನಿಂದನೆ, ಟೀಕೆ ಬಂದರೂ ಹೇಗೆಲ್ಲ ಎದುರಿಸಬೇಕು ಎನ್ನುವುದು ಅಕ್ಕಮಹಾದೇವಿ ಅವರು ತಮ್ಮ ವಚನದಲ್ಲಿ ಬಹಳ ಸುಂದರವಾಗಿ ವಿವರಿಸಿದ್ದಾರೆ. ಜೀವನ ಸಾರ್ಥಕತೆಗೆ ಎಲ್ಲ ಮಹಿಳೆಯರು ಅಕ್ಕನ ವಚನ ತಪ್ಪದೇ ಪಠಣ ಮಾಡಬೇಕು” ಎಂದು ನುಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್ | ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್ಐ, ಪೇದೆ

ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ನೇತೃತ್ವ ವಹಿಸಿದ್ದರು. ಈ ವೇಳೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ, ತಾಲೂಕು ಕದಳಿ ಮಹಿಳಾ ವೇದಿಕೆ ಅಧ್ಯಕ್ಷೆ ಮಲ್ಲಮ್ಮ ನಾಗನಕೇರೆ, ಪ್ರಮುಖರು ಶುಭಾಂಗಿ ಬಳತೆ, ಅಕ್ಷತಾ ಅಷ್ಟೂರೆ, ಪ್ರಭಾ ಕರಕಾಳೆ, ಸಾವಿತ್ರಿ ಪಾಟೀಲ್, ಸರೋಜನಿ ಪಾಟೀಲ್, ಗೀತಾ ಕರಕಾಳೆ, ಶೋಭಾ ಸಾವಳೆ, ಗಂಗಾ ಅಷ್ಟೂರೆ, ಸ್ವರೂಪಾ ಬಳತೆ, ಇಂದುಮತಿ ಮಾನಕಾರಿ, ಸಂತೋಷಿ ಹುಣಜೆ, ಪವಿತ್ರ ಮುರಾಳೆ, ವಿಮಲಾಬಾಯಿ ಚಾಕೂರೆ, ಸಿದ್ದು ತುಗಶೆಟ್ಟೆ, ವಿಜಯಕುಮಾರ ಸಜ್ಜನ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...