ಬೀದರ್‌ | ವರದಕ್ಷಿಣೆ ಕಿರುಕುಳ ಆರೋಪ : ಗಂಡ, ಮಾವ, ಅತ್ತೆ ಸೇರಿ 6 ಮಂದಿ ವಿರುದ್ಧ ಎಫ್‌ಐಆರ್

Date:

ವರದಕ್ಷಿಣೆ ತರುವಂತೆ ಗಂಡನ ಮನೆಯವರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಹುಲಸೂರ ತಾಲೂಕಿನ ಗ್ರಾಮವೊಂದರ ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ.

ಮೂರು ವರ್ಷಗಳ ಹಿಂದೆ ಹುಲಸೂರ ತಾಲ್ಲೂಕಿನ ದೇವನಾಳ ಗ್ರಾಮದ ತುಕಾರಾಮ ಎನ್ನುವವರ ಜೊತೆಗೆ ಮದುವೆಯಾಗಿದೆ. ಮದುವೆಯಾದ ನಂತರ ₹10 ಲಕ್ಷ ವರದಕ್ಷಿಣೆ ತರುವಂತೆ ಗಂಡ, ಮಾವ, ಅತ್ತೆ, ಮೈದುನ ಸೇರಿದಂತೆ ಮನೆಯವರೆಲ್ಲರೂ ಪೀಡಿಸುತ್ತಿದ್ದರುʼ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

ʼವರದಕ್ಷಿಣೆ ತರುವಂತೆ ಗಂಡ, ಮಾವ, ಮೈದುನ ಸೇರಿ ಕುಟುಂಬಸ್ಥರು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹೊಡೆದಿದ್ದಾರೆ. ₹10 ಲಕ್ಷ ವರದಕ್ಷಿಣೆ ತರದಿದ್ದರೆ ನಿನ್ನ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆʼ ಎಂದು ಉಲ್ಲೇಖಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಿಳೆ ನೀಡಿದ ದೂರಿನ ಮೇರೆಗೆ ಗಂಡ ತುಕಾರಾಮ ಮೇತ್ರೆ, ಮಾವ ವೆಂಕಟರಾವ ಮೇತ್ರೆ, ಅತ್ತೆ ಶ್ರೀದೇವಿ ಸೇರಿ ಒಟ್ಟು ಆರು ಮಂದಿ ವಿರುದ್ಧ ಕಲಂ 85, 126(2), 115(2), 352, 351(2)(3), 190 ಹಾಗೂ ವರದಕ್ಷಿಣೆ ನಿಷೇಧ ಕಾಯ್ದೆಯ ಕಲಂ 3 ಹಾಗೂ 4ರಡಿ ಹುಲಸೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಬೀದರ್‌ | ನಕಲಿ ದಾಖಲೆ ಸೃಷ್ಟಿಸಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಆರೋಪ : ಇಬ್ಬರು ಪಿಡಿಒ ಅಮಾನತು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...