ಬೀದರ್‌ | ಶಿಕ್ಷಕರಿಗೆ ಕಿರುಕುಳ ಆರೋಪ : ಬಿಇಒ ಟಿ.ಆರ್.ದೊಡ್ಡೆ ಅಮಾನತು

Date:

ಶಿಕ್ಷಕರಿಗೆ ಕಿರುಕುಳ ಕೊಟ್ಟು ಕರ್ತವ್ಯಲೋಪ ಎಸಗಿದ ಕಾರಣಕ್ಕೆ ಬೀದರ್ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಆರ್‌.ದೊಡ್ಡೆ ಅವರನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮಚಂದ್ರಪ್ಪ ಅವರು ಶುಕ್ರವಾರ (ಮೇ 16) ಅಮಾನತುಗೊಳಿಸಿ ಆದೇಶಿಸಿದ್ದಾರೆ.

ಟಿ.ಆರ್.ದೊಡ್ಡೆ ಅವರ ಸ್ಥಾನಕ್ಕೆ ಕಲಬುರಗಿ ಜಿಲ್ಲೆಯ ಕಮಲಾಪುರದ ಡಯಟ್‌ ಹಿರಿಯ ಉಪನ್ಯಾಸಕರನ್ನು ವರ್ಗಾಯಿಸಿ, ನೇಮಕ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

7ನೇ ಪರಿಷ್ಕೃತ ವೇತನ ಬಟವಾಡೆಗೆ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರಿಂದ ಹಣ ತೆಗೆದುಕೊಂಡು ಪರಿಷ್ಕೃತ ವೇತನ ಬಿಡುಗಡೆಗೊಳಿಸಿದ್ದಾರೆ. ಕಾಲಮಿತಿ ವೇತನ ಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿ ಮಂಜೂರಿಗೆ ಶಿಕ್ಷಕರಿಂದ ಹಣ ಪಡೆದಿದ್ದಾರೆ. ವೈದ್ಯಕೀಯ ರಜೆಯ ಮೇಲೆ ಹೋದಂತಹ ಶಿಕ್ಷಕರಿಗೆ ದೈಹಿಕ ಸದೃಢ ಪ್ರಮಾಣ ಪತ್ರ ಇಲ್ಲದೇ ರಜೆ ಮತ್ತು ವೇತನ ಬಿಡುಗಡೆ ಮಾಡಿರುವುದು, ಶಿಕ್ಷಕರು ಸಮಸ್ಯೆ ಹೇಳಲು ಹೋದರೆ ಅವರನ್ನು ಅವಾಚ್ಯ ಪದಗಳಿಂದ ನಿಂದಿಸಿ, ಕಿರುಕುಳ ನೀಡಿದ ಆರೋಪಗಳ ಬಗ್ಗೆ ಕಲಬುರಗಿ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರು ನೀಡಿದ ವರದಿ ಮೇರೆಗೆ ಅಮಾನತು ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : ಬೀದರ್‌ | ಅಲ್ಪಸಂಖ್ಯಾತರ ಶಾಲಾ-ಕಾಲೇಜು ʼಅತಿಥಿʼ ಆಯ್ಕೆಗೆ ಪ್ರವೇಶ ಪರೀಕ್ಷೆ: ಉಪವಾಸ ಧರಣಿ ಎಚ್ಚರಿಕೆ!

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...