ಬೀದರ್‌ | ಅಂಬೇಡ್ಕರ್‌ ಅವರ ಮಹಾಪರಿನಿರ್ವಾಣ ದಿನ : ಪಾದಯಾತ್ರೆ, ಹಣ್ಣು ಹಂಪಲು ವಿತರಣೆ

Date:

ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ 69ನೇ ಮಹಾಪರಿನಿರ್ವಾಣ ದಿನವನ್ನು ಬೀದರ್‌ ಜಿಲ್ಲೆಯ ವಿವಿಧೆಡೆ ವಿಶೇಷವಾಗಿ ಆಚರಿಸಲಾಯಿತು.

ಬೀದರ್‌ ನಗರದಲ್ಲಿ ದಲಿತ ಯೂನಿಟಿ ಮ್ಯೂಮೆಂಟ್‌ ಸಂಘಟನೆಯ ಪದಾಧಿಕಾರಿಗಳು ನಗರದ ನೌಬಾದ್‌ದಿಂದ ಮುಖಾಂತರ ನಗರದ ಹೃದಯಭಾಗದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್‌ ವೃತ್ತದವರೆಗೆ ಪಾದಯಾತ್ರೆ ಕೈಗೊಂಡು ಬಾಬಾ ಸಾಹೇಬರ ಆದರ್ಶಗಳ ಕುರಿತು ಜಾಗೃತಿ ಮೂಡಿಸಿದರು.

ದಲಿತ ಯೂನಿಟಿ ಮ್ಯೂಮೆಂಟ್‌ ಸಂಸ್ಥಾಪಕರಾದ ವಿನೋದ ರತ್ನಾಕರ ಮಾತನಾಡಿ, ʼಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು ಭಾರತ ಅಷ್ಟೇ ಅಲ್ಲದೆ, ಇಡೀ ಜಗತ್ತಿಗೆ ಮಾದರಿಯಾಗಿದ್ದಾರೆ. ಅನೇಕ ನೋವು, ಅಪಮಾನ, ಯಾತನೆಗಳ ಮಧ್ಯೆಯೂ ಅಪಾರವಾದ ಜ್ಞಾನ ಸಂಪಾದಿಸಿದರು. ಜಗತ್ತಿಗೆ ಮಾದರಿಯಾದ ಶ್ರೇಷ್ಠ ಸಂವಿಧಾನ ರಚಿಸಿ ದೇಶದ ಜನರಿಗೆ ಸಮಾನತೆ ತತ್ವ ನೀಡಿದರು. ಅಂಬೇಡ್ಕರ್‌ ಅವರ ಸಂವಿಧಾನಬದ್ಧ ಆಶಯಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡರೆ ಸಮಸಮಾಜ ರೂಪುಗೊಳ್ಳಲು ಸಾಧ್ಯʼ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 12 06 at 8.49.23 PM

ಸಂಘಟನೆಯ ರಾಜ್ಯಾಧ್ಯಕ್ಷ ಪ್ರಕಾಶ ರಾವಣ ಮಾತನಾಡಿ, ʼಬಾಬಾ ಸಾಹೇಬರ ಪರಿನಿರ್ವಾಣ ನಿಮಿತ್ತ ಪ್ರತಿವರ್ಷ ನಮ್ಮ ಸಂಘಟನೆ ವತಿಯಿಂದ ಪಾದಯಾತ್ರೆ ನಡೆಸಲಾಗುತ್ತಿದೆ. ಅಂಬೇಡ್ಕರ್‌ ಅವರು ತತ್ವಾದರ್ಶಗಳನ್ನು ಯುವ ಸಮೂಹಕ್ಕೆ ತಲುಪಿಸುವ ಗುರಿ ಮತ್ತು ಉದ್ದೇಶ ನಮ್ಮದಾಗಿದೆ. ನಾವೆಲ್ಲರೂ ಸಂವಿಧಾನ ತತ್ವಗಳನ್ನು ಪಾಲಿಸೋಣʼ ಎಂದರು.

ಈ ಸಂದರ್ಭದಲ್ಲಿ ದಮ್‌ ಸಂಘಟನೆಯ ಪ್ರಮುಖರಾದ ವಿನೀತ ಗಿರಿ, ಗೌತಮ್‌ ದೊಡ್ಡಿ, ಮಹಾಂತೇಶ ಹಳ್ಳಿಖೇಡ, ಯಾದುಲ ವಲ್ಲೆಪುರೆ, ಗೌತಮ ಕೆಂಪೆ, ಸಂತೋಷ ದೊಡ್ಡಿ ಹಾಗೂ ಮಹಾನಗರ ಪಾಲಿಕೆ ಸದಸ್ಯ ಸೂರ್ಯಕಾಂತ ಸಾಧುರೆ, ಕೃಷ್ಣ ಭುತಾಳೆ, ಪ್ರಜ್ವಲ್‌, ರೋಹನ್‌ ಅಲ್ಲಾಪುರೆ, ಲಿಖಿತ್‌ ನಿಂಬೂರೆ ಮತ್ತಿತರರಿದ್ದರು.

ಔರಾದ್‌ ಸಾರ್ವಜನಿಕ ಆಸ್ಪತ್ರೆಯಲ್ಲಿ ಅಂಬೇಡ್ಕರ್‌ ಪರಿನಿಬ್ಬಾಣ ದಿನ ಆಚರಣೆ :

ಮಹಾ ಮಾನವತಾವಾದಿ, ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 69ನೇ ಮಹಾ ಪರಿನಿರ್ವಾಣ ದಿನವನ್ನು ಔರಾದ್ ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಆಚರಿಸಲಾಯಿತು.

ಬಹುಜನ ಜನಸಂಪರ್ಕ ಕಾರ್ಯಾಲಯದ ವ್ಯವಸ್ಥಾಪಕ ರಾಹುಲ್ ಖಂದಾರೆ ಮಾತನಾಡಿ, ʼಡಾ.ಬಿ.ಆರ್. ಅಂಬೇಡ್ಕರ್‌ ಅವರ ಬದುಕು-ಹೋರಾಟ ದೇಶಕ್ಕೆ ಮಾದರಿ. ಅವರ ನಡೆದು ಬಂದ ಹಾದಿಯಲ್ಲಿ ನಾವೆಲ್ಲರೂ ಸಾಗುವುದು ಅಗತ್ಯವಿದೆ. ಸಂವಿಧಾನದ ತತ್ವಾದರ್ಶಗಳನ್ನು ಯುವ ಜನಾಂಗಕ್ಕೆ ತಿಳಿಸಿ ಜಾಗೃತಿ ಮೂಡಿಸಬೇಕಿದೆʼ ಎಂದು ಹೇಳಿದರು.

WhatsApp Image 2025 12 06 at 8.37.57 PM

ಈ ಸಂದರ್ಭದಲ್ಲಿ ಪ್ರಮುಖರಾದ ಸುಭಾಷ್ ಲಾಧಾ, ಸಿದ್ದಾರ್ಥ್ ಭೊಸ್ಲೆ, ಸಂತೋಷ್ ಶಿಂಧೆ, ಪ್ರವೀಣ್ ಕಾರಂಜಿ, ಬಸವರಾಜ್ ಕಾಂಬಳೆ, ದಿನೇಶ್ ಶಿಂದೆ, ಸುಂದರ್ ಮೇತ್ರೆ, ಸಂತೋಷ ಸೂರ್ಯವಂಶಿ, ಸೂಪರ್ ಡೂಂಗ್ರೆ, ಅನಿಲ್ ಭುಜಂಗ, ಚಂದ್ರಕಾಂತ್ ಕಾಂಬ್ಳೆ, ವಿವಿಧ ಸಂಘಟನೆ ಮುಖಂಡರು, ಪ್ರಗತಿಪರ ಚಿಂತಕರು, ಯುವ ಹೋರಾಟಗಾರರು, ಸಮಾಜದ ಮುಖಂಡರು ಹಾಗೂ ಆಸ್ಪತ್ರೆ ಸಿಬ್ಬಂದಿ ಉಪಸ್ಥಿತರಿದ್ದರು.

ಬಳಿಕ ಆಸ್ಪತ್ರೆಯಲ್ಲಿ ಎಲ್ಲ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು.

ಇದನ್ನೂ ಓದಿ : ಬೀದರ್‌ | ಜಿಲ್ಲಾದ್ಯಂತ‌ ಅಂಬೇಡ್ಕರವರ 69ನೇ ಮಹಾಪರಿನಿರ್ವಾಣ ದಿನ ಆಚರಣೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...