ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

Date:

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್ ಯೋಜನೆ ಕಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಅಂಗನವಾಡಿ ನೌಕರರ ಸಂಘ(ಎಐಟಿಯು) ನೇತ್ರತ್ವದಲ್ಲಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.

ಔರಾದ್‌ ತಾಲೂಕಿನ ಸಂತಪೂರನಲ್ಲಿ ಇರುವ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದ ಕಾರ್ಯಕರ್ತೆಯರು ಸರ್ಕಾರಕ್ಕೆ ಸಲ್ಲಿಸುವ ಮನವಿಗೆ ಸಹಿ ಸಂಗ್ರಹ ಅಭಿಯಾನ ಕೈಗೊಂಡರು.

ರಾಜ್ಯ ಅಂಗನವಾಡಿ ನೌಕರರ ಸಂಘದ(ಸಿಐಟಿಯು) ಔರಾದ್‌ ತಾಲೂಕು ಅಧ್ಯಕ್ಷೆ ಪದ್ಮಾವತಿ ಸ್ವಾಮಿ ಮಾತನಾಡಿ, ʼಮಾನವ ಅಭಿವೃದ್ಧಿ ಸೂಚ್ಯಂಕಕ್ಕೆ ಇರುವ ಐಸಿಡಿಎಸ್ ಯೋಜನೆ ಜಾರಿ ಆಗಿ 50 ವರ್ಷಗಳಾಗಿದೆ. ಆದರೆ, ಈ ಯೋಜನೆಯನ್ನು ಸರಳೀಕರಿಸಿ, ಫಲಾನುಭವಿಗಳನ್ನು ಆಕರ್ಷಿಸಲು ಸರ್ಕಾರ ಕ್ರಮ ರೂಪಿಸಬೇಕಿತ್ತು. ಅದರ ಬದಲಿಗೆ ಸಂಕೀರ್ಣಗೊಳಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಯಾವುದೇ ಸೌಲಭ್ಯ ನೀಡದೆ, ಮುಖಚರ್ಯೆ ಗುರುತಿಸುವ ಕ್ರಮ (ಎಫ್‍ಆರ್‌ಎಸ್) ಅಳವಡಿಸಿರುವುದರಿಂದ ತೊಂದರೆ ಅನುಭವಿಸುವಂತಾಗಿದೆʼ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼ2013ರ ಆಹಾರ ಭದ್ರತೆ ಕಾಯ್ದೆ ಪ್ರಕಾರ ಯಾವುದೇ ಫಲಾನುಭವಿ ಹಸಿವಿನಿಂದ ನರಳಬಾರದು ಎಂಬ ಆಶಯಕ್ಕೆ ಹಿನ್ನಡೆಯಾಗಿದೆ. ಅಲ್ಲದೆ, ಆಧಾರ್ ಕಾರ್ಡ್ ಇಲ್ಲ ಎಂಬ ಕಾರಣಕ್ಕೆ ಸಬ್ಸಿಡಿ ಮತ್ತು ಉಚಿತವಾಗಿ ಸಿಗುವ ಸೌಲಭ್ಯಗಳಿಂದ ಫಲಾನುಭವಿಗಳು ವಂಚಿತರಾಗಬಾರದು ಎಂಬ ಸುಪ್ರೀಂ ಕೋರ್ಟ್ ಆದೇಶವೂ ಪಾಲನೆಯಾಗುತ್ತಿಲ್ಲ. ಎಫ್ಆರ್‌ಎಸ್ ಜಾರಿ ಮೂಲಕ ಫಲಾನುಭವಿಗಳ ಹಕ್ಕನ್ನು ನಿರಾಕರಿಸಲಾಗುತ್ತಿದೆʼ ಎಂದು ದೂರಿದರು.

1004305315
ಸಿಡಿಪಿಒ ಇಮಲಪ್ಪಾ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

ತಾಲೂಕು ಖಜಾಂಚಿ ಸುದೇಷ್ಣಾ ಬಿರಾದರ್‌ ಮಾತನಾಡಿ, ʼಎಫ್‍ಆರ್‌ಎಸ್ ಮೂಲಕ ಸಂಗ್ರಹಿಸುವ ಫಲಾನುಭವಿಗಳ ವೈಯುಕ್ತಿಕ ಮಾಹಿತಿ ಸೋರಿಕೆ ಆಗುತ್ತಿದೆ. ಇದರಿಂದ ಸೈಬರ್ ವಂಚನೆಗಳು ಹೆಚ್ಚಾಗುತ್ತಿವೆ. ಶೇ 60ರಷ್ಟು ತನ್ನ ಪಾಲಿನ ವಂತಿಗೆಯನ್ನು ನೀಡಬೇಕಾದ ಕೇಂದ್ರ ಸರ್ಕಾರ ಎಫ್‍ಆರ್‌ಎಸ್ ನಿಬಂಧನೆ ಹಾಕುವ ಮೂಲಕ ತನ್ನ ಪಾಲಿನ ಹಣ ಕಡಿಮೆ ಮಾಡಿಕೊಳ್ಳಲು ಮುಂದಾಗಿದೆʼ ಎಂದು ದೂರಿದರು.

2018ರಿಂದ ಅನ್ವಯವಾಗುವಂತೆ ವೇತನ ಹೆಚ್ಚಿಸಬೇಕು. ಫಲಾನುಭವಿಗಳ ಘಟಕದ ವೆಚ್ಚ ಹೆಚ್ಚಿಸುವುದು, ಎಫ್‌ಆರ್‌ಎಸ್ ನಿಲ್ಲಿಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗಾಗಿ ಒತ್ತಾಯಿಸಿ ಬುಧವಾರ (ಆ.21)ರಂದು ಕಪ್ಪು ಪಟ್ಟಿ ಧರಿಸಿ ಕಪ್ಪು ದಿನಾಚರಣೆ ಆಚರಿಸಿದರು.

ಇದನ್ನೂ ಓದಿ : ಬೀದರ್‌ | ಮಳೆ ಅಬ್ಬರ : ಮೂರು ದಿನಗಳಲ್ಲಿ 138 ಮನೆಗಳಿಗೆ ಹಾನಿ, 7,775 ಹೆಕ್ಟೇರ್‌ ಬೆಳೆ ನಾಶ!

ಸಂಘದ ತಾಲ್ಲೂಕು ಕಾರ್ಯದರ್ಶಿ ನರಸಮ್ಮಾ ಸಾದೂರೆ ಹಾಗೂ ಪ್ರಮುಖರಾದ ಸುಧಾರಾಣಿ, ರೂಪಾವತಿ, ಮಹಾನಂದಾ, ರಂಜನಾ, ದ್ರಾಕ್ಷಿಣಿ, ಸತ್ಯಾವತಿ, ಕಾವೇರಿ, ಸವಿತಾ, ವಿಮಲ, ಉಮಾ ಸೇರಿದಂತೆ ಕಮಲನಗರ, ಔರಾದ್‌ ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...