ಬೀದರ್‌ | ಅನ್ನಭಾಗ್ಯ ಯೋಜನೆ : ನಗದು ಬದಲು 5ಕೆ.ಜಿ. ಅಕ್ಕಿ ವಿತರಣೆ : ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

Date:

ʼಅನ್ನಭಾಗ್ಯʼ ಯೋಜನೆ ಅಡಿಯಲ್ಲಿ ಪಡಿತರ ಚೀಟಿದಾರರಿಗೆ ವಿತರಿಸಲಾಗುವ ಕೇಂದ್ರ ಸರ್ಕಾರದ 5ಕೆ.ಜಿ ಅಕ್ಕಿಯೊಂದಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ 5 ಕೆ.ಜಿ ಅಕ್ಕಿಯ ಬದಲಾಗಿ ಪ್ರತಿ ಕೆ.ಜಿಗೆ ₹34 ರಂತೆ ಪಡಿತರ ಬ್ಯಾಂಖ್ ಖಾತೆಗೆ ನೇರವಾಗಿ ₹170 ಹಣ‌ ಜಮೆ ಮಾಡಲಾಗುತ್ತಿತ್ತು. ಆದರೆ 2025ರ ಫೆಬ್ರವರಿ ತಿಂಗಳಿಂದ ನೇರ ನಗದು ಬದಲಾಗಿ ಅನ್ನಭಾಗ್ಯ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ 5 ಕೆ.ಜಿ ಅಕ್ಕಿ ವಿತರಿಸಲು ರಾಜ್ಯ ಸರ್ಕಾರ ಆದೇಶಿಸಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದ್ದಾರೆ.

ಫೆಬ್ರುವರಿ ತಿಂಗಳ ಪಡಿತರ ವಿತರಣೆ ಪೂರ್ಣಗೊಂಡಿರುವುದರಿಂದ ಫೆಬ್ರವರಿ ತಿಂಗಳ ಹೆಚ್ಚುವರಿ ಅಕ್ಕಿಯನ್ನು ಮಾರ್ಚ್‌ ತಿಂಗಳ ಹಂಚಿಕೆಯೊಂದಿಗೆ ವಿತರಣೆ ಮಾಡಲಾಗುವುದು. ಮಾರ್ಚ್ ತಿಂಗಳಲ್ಲಿ ಆದ್ಯತಾ ಪಡಿತರ ಚೀಟಿಯಲ್ಲಿನ ಪ್ರತಿ ಫಲಾನುಭವಿಗಳಿಗೆ ಒಟ್ಟು 15 ಕೆ.ಜಿ ಅಕ್ಕಿಯನ್ನು ವಿತರಣೆ ಮಾಡಲಾಗುವುದು. 4 ಸದಸ್ಯರಿಗಿಂತ ಕಡಿಮೆ ಇರುವ ಅಂತ್ಯೋದಯ ಪಡಿತರ ಚೀಟಿದಾರರಿಗೆ 35 ಕೆ.ಜಿ ಅಕ್ಕಿ ವಿತರಣೆ ಮಾಡಲಾಗುವುದುʼ ಎಂದು ಗುರುವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಂತ್ಯೋದಯ ಅನ್ನ ಯೋಜನೆ (ಎವೈ) 4 ಸದಸ್ಯರಿರುವ ಪಡಿತರ ಚೀಟಿದಾರರಿಗೆ 45 ಕೆ.ಜಿ ಅಕ್ಕಿ, 5 ಸದಸ್ಯರಿರುವ ಎಎವೈ ಪಡಿತರ ಚೀಟಿದಾರರಿಗೆ 65 ಕೆ.ಜಿ ಅಕ್ಕಿ ಹಾಗೂ 6 ಸದಸ್ಯರಿರುವ ಎಎವೈ ಪಡಿತರ ಚೀಟಿದಾರರಿಗೆ 85 ಕೆ.ಜಿ ಅಕ್ಕಿ ವಿತರಣೆ ಮಾಡಲಾಗುವುದು. ವಿತರಣೆ ಮಾಡಿದ ಪಡಿತರ ಅಕ್ಕಿಯನ್ನು ಪಡಿತರ ಚೀಟಿದಾರರು ಯಾವುದೇ ಕಾರಣಕ್ಕೂ ಮಾರಾಟ ಮಾಡುವಂತಿಲ್ಲ. ಒಂದು ವೇಳೆ ಪಡಿತರ ಅಕ್ಕಿ ಮಾರಾಟ ಮಾಡುವುದು ಕಂಡು ಬಂದಲ್ಲಿ ಅಂತಹ ಪಡಿತರ ಚೀಟಿದಾರರ ಪಡಿತರ ಚೀಟಿ ಅಮಾನತ್ತುಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾರ್ವಜನಿಕ ವಿತರಣಾ ಪದ್ಧತಿ ಅಡಿಯಲ್ಲಿ ಯಾವುದೇ ದೂರುಗಳು ಇದ್ದಲ್ಲಿ ಆಹಾರ ಇಲಾಖೆಯ ಸಿಬ್ಬಂದಿಯನ್ನು ಸಂಪರ್ಕಿಸಬಹುದಾದ ವಿವರ:

ಬೀದರ ಗ್ರಾಮಾಂತರ ಆಹಾರ ಶಿರಸ್ತೆದಾರ ಅನಿಲ್‌ಕುಮಾರ ವ್ಯಾಸ್ (6360177221), ಬೀದರ ಗ್ರಾಮಾಂತರ ಆಹಾರ ನಿರೀಕ್ಷಕರು ಅರುಣ್‌ಕುಮಾರ (7892199014), ಬೀದರ ಪಟ್ಟಣ ಆಹಾರ ನಿರೀಕ್ಷಕರು ರಾಮರತನ ದೆಗಲಿ (9844302280), ಬೀದರ ಪಟ್ಟಣ ಆಹಾರ ನಿರೀಕ್ಷಕರು ಶೋಭಾ (9740226135), ತಾಲ್ಲೂಕು ಕಛೇರಿ ಭಾಲ್ಕಿ: ಆಹಾರ ಶಿರಸ್ತೆದಾರರು ವೆಂಕಟರಾವ (9110413724), ಆಹಾರ ನಿರೀಕ್ಷಕರು ರಾಜೇಂದ್ರಕುಮಾರ (9972460457) ತಾಲ್ಲೂಕು ಕಛೇರಿ ಹುಮನಾಬಾದ: ಆಹಾರ ಶಿರಸ್ತೆದಾರರು ಪರಮೇಶ್ವರ (9448349496), ಆಹಾರ ನಿರೀಕ್ಷಕರು ಬಿಂದುಕುಮಾರಿ (9449382228)

ಈ ಸುದ್ದಿ ಓದಿದ್ದೀರಾ? ಔರಾದ್ ಪಾಲಿಟೆಕ್ನಿಕ್‌ನಲ್ಲಿ ಒಬ್ಬರೇ ಖಾಯಂ ಉಪನ್ಯಾಸಕ : ಬೋಧಕ ಸಿಬ್ಬಂದಿ ನೇಮಕಕ್ಕೆ ಶಾಸಕ ಪ್ರಭು ಚವ್ಹಾಣ ಆಗ್ರಹ

ತಾಲ್ಲೂಕು ಕಛೇರಿ ಚಿಟಗುಪ್ಪಾ: ಆಹಾರ ನಿರೀಕ್ಷಕರು ಶೇಖರ್ (9964874917), ತಾಲ್ಲೂಕು ಕಛೇರಿ ಬಸವಕಲ್ಯಾಣ: ಆಹಾರ ಶಿರಸ್ತೆದಾರರು ನಿಂಗಯ್ಯಾ (9916241166), ಆಹಾರ ನಿರೀಕ್ಷಕರು ನಾಗರಾಜ (8951753186), ದ್ವಿ.ದ.ಸ ರಾಜೇಶ್ವರಿ (9986775659), ತಾಲ್ಲೂಕು ಕಛೇರಿ ಹುಲಸೂರು: ಆಹಾರ ನಿರೀಕ್ಷಕರು ಪ್ರದೀಪ್ (8095453026), ತಾಲ್ಲೂಕು ಕಛೇರಿ ಔರಾದ (ಬಿ): ಆಹಾರ ಶಿರಸ್ತೆದಾರರು ಪರಮೇಶ್ವರ (9448349496), ಆಹಾರ ನಿರೀಕ್ಷಕರು ಪ್ರೇಮಲತಾ (9901741151), ತಾಲ್ಲೂಕು ಕಛೇರಿ ಕಮಲನಗರ: ಆಹಾರ ನಿರೀಕ್ಷಕರು ಶಿವಾನಂದ ಪಾಟೀಲ್ (9741614855)

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...