ಬೀದರ್‌ | ನ.29, 30ರಂದು ಅನುಭವ ಮಂಟಪ ಉತ್ಸವ : ಸಾಧಕರಿಗೆ ವಿವಿಧ ಪ್ರಶಸ್ತಿ ಘೋಷಣೆ

Date:

ಬೀದರ್‌ ಜಿಲ್ಲೆಯ ಬಸವಕಲ್ಯಾಣದಲ್ಲಿ ನವೆಂಬರ್‌ 29, 30ರಂದು ನಡೆಯುವ 46ನೇ ಶರಣ ಕಮ್ಮಟ ಹಾಗೂ ಅನುಭವ ಮಂಟಪ ಉತ್ಸವ–2025ರಲ್ಲಿ ಅನುಭವ ಮಂಟಪದಿಂದ ನೀಡುವ ವಿವಿಧ ಪ್ರಶಸ್ತಿಗಳಿಗೆ ಆಯ್ಕೆಯಾಗಿರುವವರ ಪಟ್ಟಿಯನ್ನು ಬಿಡುಗಡೆಗೊಳಿಸಲಾಗಿದೆ.

ಬೀದರ್‌ ನಗರದ ನಿವೃತ್ತ ಶಿಕ್ಷಕ, ಚಿತ್ರಕಲಾವಿದ ಸಿ.ಬಿ.ಸೋಮಶೆಟ್ಟಿ ಅವರು ತಮ್ಮ ಸಂಪೂರ್ಣ ಆಯುಷ್ಯವನ್ನು ಚಿತ್ರಕಲೆಗಾಗಿ ಸಮರ್ಪಿಸಿದವರು. ವಿಶೇಷವಾಗಿ ಬಸವಾದಿ ಶರಣರ ಚಿತ್ರಗಳು ಬಿಡಿಸುವಲ್ಲಿ ಎತ್ತಿದ ಕೈ. ಬಸವಣ್ಣನವರ ಜೀವನಕ್ಕೆ ಸಂಬಂಧಿಸಿದ 115 ಕ್ಕೂ ಹೆಚ್ಚು ವರ್ಣಚಿತ್ರಗಳು ಬಿಡಿಸಿದ ಹೆಗ್ಗಳಿಗೆ ಇವರದ್ದಾಗಿದೆ. ಇವರನ್ನು ಡಾ.ಚನ್ನಬಸವ ಪಟ್ಟದ್ದೇವರು ಅನುಭವಮಂಟಪ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಘೋಷಿಸಿದ್ದಾರೆ.

WhatsApp Image 2025 11 15 at 8.41.04 AM
ಬಸವರಾಜ ಬಂಗೇರಿ, ಮಲ್ಲಿಕಾರ್ಜುನ ರಗಟೆ

ಬಸವಭಾಸ್ಕರ್ ರಾಷ್ಟ್ರೀಯ ಪ್ರಶಸ್ತಿಗೆ ಶಿರೂರಿನ ನಾಟಕಕಾರ ಬಸವರಾಜ ಬೇಂಗೇರಿ, ಅನುಭವಮಂಟಪ ರಾಷ್ಟ್ರೀಯ ಪ್ರಶಸ್ತಿಗೆ ಬೆಂಗಳೂರಿನ ಸುಮಂಗಲಿ ಸೇವಾ ಆಶ್ರಮದ ಅಧ್ಯಕ್ಷೆ ಎಸ್.ಜಿ.ಸುಶೀಲಮ್ಮ ಆಯ್ಕೆಯಾಗಿದ್ದಾರೆ. ಈ ಮೂರೂ ಪ್ರಶಸ್ತಿಯು ತಲಾ ₹1ಲಕ್ಷ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೊಸಪೇಟೆಯ ಚಿಂತಕ ಕೆ.ರವೀಂದ್ರನಾಥ ಅವರಿಗೆ ಡಾ.ಎಂ.ಎಂ.ಕಲಬುರಗಿ ಸಾಹಿತ್ಯ ಸಂಶೋಧನಾ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ₹50 ಸಾವಿರ ಹಾಗೂ ಫಲಕ ಹೊಂದಿದೆ.

WhatsApp Image 2025 11 15 at 8.42.15 AM
ಸೋಮಶೇಖರ್‌ , ಕೆ.ರವೀಂದ್ರನಾಥ

ಶರಣ ವೈದ್ಯ ಸಂಗಣ್ಣ ಪ್ರಶಸ್ತಿಗೆ ಮಹಾರಾಷ್ಟ್ರದ ದೇಗಲೂರಿನ ಪ್ರಸಿದ್ಧ ವೈದ್ಯ ಮಲ್ಲಿಕಾರ್ಜುನ ರಗಟೆ, ಶರಣ ಒಕ್ಕಲಿಗ ಮುದ್ದಣ್ಣ ಪ್ರಶಸ್ತಿ (2024)ಗೆ ಖಾನಾಪೂರದ ಸಾವಯವ ಕೃಷಿಕ ರಮೇಶ ಮೋರ್ಗೆ, ಶರಣ ಒಕ್ಕಲಿಗ ಮುದ್ದಣ್ಣ ಪ್ರಶಸ್ತಿ (2025)ಯನ್ನು ಹುಡಗಿಯ ಸಾವಯವ ಕೃಷಿಕ ಸೋಮಶಂಕರ ಅವರಿಗೆ ನೀಡಲಾಗುತ್ತಿದೆ. ಈ ಪ್ರಶಸ್ತಿಗಳು ತಲಾ ₹10 ಸಾವಿರ ನಗದು ಹಾಗೂ ಫಲಕ ಒಳಗೊಂಡಿವೆ.

ಇದನ್ನೂ ಓದಿ : ಬೀದರ್ | ಟನ್ ಕಬ್ಬಿಗೆ ₹3,100 ಬೆಲೆ ಕೊಡಲೇಬೇಕು : ಪಟ್ಟು ಹಿಡಿದ ರೈತರು, ಧರಣಿ ಆರಂಭ

ಎಲ್ಲ ಪ್ರಶಸ್ತಿಗಳು ಅನುಭವಮಂಟಪ ಉತ್ಸವದಲ್ಲಿ ಪೂಜ್ಯರ ಹಾಗೂ ಗಣ್ಯರ ಸಮ್ಮುಖದಲ್ಲಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...